ಚಿಕ್ಕಬಳ್ಳಾಪುರ: ಎನ್‌ಎಂಎಂಎಸ್‌ ಪರೀಕ್ಷೆ ಯಶಸ್ವಿ


Team Udayavani, Jan 23, 2023, 3:04 PM IST

tdy-17

ಚಿಕ್ಕಬಳ್ಳಾಪುರ: 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯನ್ನು ಜಿಲ್ಲಾದ್ಯಂತ ಆಯೋಜಿಸಲಾಗಿತ್ತು. ಬೆಳಗ್ಗೆ 10.30ರಿಂದ 12 ಗಂಟೆವರೆಗೆ ಮಾನಸಿಕ ಸಾಮರ್ಥ್ಯದ ಪರೀಕ್ಷೆ, ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆಯನ್ನು ಮಧ್ಯಾಹ್ನ 2 ರಿಂದ 3.30 ಗಂಟೆವರೆಗೆ ನಡೆಸಲಾಯಿತು.

ಎರಡು ಪರೀಕ್ಷೆಗಳಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯ ಅವಕಾಶ ಕಲ್ಪಿಸಲಾಗಿತ್ತು. ಮಾನಸಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯಲ್ಲಿ 90 ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿತ್ತು. ಪ್ರತಿ ಪ್ರಶ್ನೆಗೂ ಒಂದು ಅಂಕ ನಿಗದಿಪಡಿಸಲಾಗಿತ್ತು. ಹಾಗೆಯೇ ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆಗೆ 90 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿತ್ತು. ಇವುಗಳಲ್ಲಿ 35 ಪ್ರಶ್ನೆಗಳು ವಿಜ್ಞಾನ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ), 35 ಪ್ರಶ್ನೆಗಳು ಸಮಾಜ ವಿಜ್ಞಾನ (ಇತಿಹಾಸ, ಭೂಗೋಳ, ರಾಜ್ಯಶಾಸ್ತ್ರ , ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ) ಮತ್ತು 20 ಪ್ರಶ್ನೆಗಳು ಗಣಿತ ವಿಷಯಕ್ಕೆ ಸಂಬಂಧಿಸಿದ್ದು ಆಗಿತ್ತು.

 24 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ: ಪ್ರಶ್ನೆಪತ್ರಿಕೆಯು ಬಹು ಆಯ್ಕೆ ಮಾದರಿ ಆಗಿದ್ದು, ವಿದ್ಯಾರ್ಥಿಗಳು ಒಎಂಆರ್‌ನಲ್ಲಿ ಉತ್ತರಿಸಲು ಶೇಡ್‌ ಮಾಡಲು ನೀಲಿ ಅಥವಾ ಕಪ್ಪು ಬಣ್ಣದ ಬಾಲ್‌ಪಾಯಿಂಟ್‌ ಲೇಖನಿ ಮಾತ್ರ ಬಳಸಬೇಕೆಂದು ಸೂಚನೆ ನೀಡಲಾಗಿತ್ತು. ಒಂದು ಕೊಠಡಿಯಲ್ಲಿ ಕೇವಲ 24 ವಿದ್ಯಾರ್ಥಿಗಳು ಮಾತ್ರ ಆಸನ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ಪರೀûಾ ಕೇಂದ್ರದಲ್ಲಿ ಸಿಟಿಂಗ್‌ ಸ್ಕ್ವಾಡ್‌ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಡಯಟ್‌ಗಳ ಪ್ರಾಂಶುಪಾಲರು, ಪದನಿಮಿತ್ತ ಉಪನಿರ್ದೇಶಕರಿಗೆ (ಅಭಿವೃದ್ಧಿ) ವಹಿಸಲಾಗಿತ್ತು.

266 ವಿದ್ಯಾರ್ಥಿಗಳ ಹೆಸರು ನೋಂದಣಿ: ಶಿಡ್ಲಘಟ್ಟ ನಗರದಲ್ಲಿ ಮೂರು ಪರೀûಾ ಕೇಂದ್ರಗಳನ್ನು ತೆರೆಯಲಾಗಿತ್ತು. ನಗರದ ಸರ್ಕಾರಿ ಪ್ರೌಢಶಾಲೆ, ಶಾರದಾ ಪ್ರೌಢಶಾಲೆ, ವಾಸವಿ ವಿದ್ಯಾಸಂಸ್ಥೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು. ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ 266 ವಿದ್ಯಾರ್ಥಿಗಳು ಹೆಸರನ್ನು ನೋಂದಣಿ ಮಾಡಿದ್ದರು. ಆ ಪೈಕಿ 253 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿ 13 ಪರೀûಾರ್ಥಿಗಳು ಗೈರು ಹಾಜರಾಗಿದ್ದರು. ಅದೇ ರೀತಿ ಶಾರದಾ ಪರೀಕ್ಷಾ ಕೇಂದ್ರದಲ್ಲಿ 240 ವಿದ್ಯಾರ್ಥಿಗಳು ಹೆಸರನ್ನು ನೋಂದಣಿ ಮಾಡಿದ್ದರು. ಆ ಪೈಕಿ 225 ಪರೀಕ್ಷಾರ್ಥಿಗಳು ಹಾಜರಾಗಿ 15 ಪರೀûಾರ್ಥಿಗಳು ಗೈರು ಆಗಿದ್ದರು. ವಾಸವಿ ಪರೀಕ್ಷಾ ಕೇಂದ್ರದಲ್ಲಿ 249 ವಿದ್ಯಾರ್ಥಿಗಳು ಹೆಸರನ್ನು ನೋಂದಣಿ ಮಾಡಿದ್ದರು. ಆ ಪೈಕಿ 229 ಪರೀಕ್ಷಾರ್ಥಿಗಳು ಹಾಜರಾಗಿ 11 ಮಂದಿ ಗೈರು ಹಾಜರಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ್‌ರೆಡ್ಡಿ, ಶಿಕ್ಷಣ ಸಂಯೋಜಕ ಭಾಸ್ಕರ್‌ ಗೌಡ ಅವರು ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆಯನ್ನು ಕೈಗೊಂಡಿದ್ದರು.

ಪರೀಕ್ಷಾರ್ಥಿಗಳಿಗೆ 263 ಮಂದಿ ಗೈರು : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ 4,615 ವಿದ್ಯಾರ್ಥಿಗಳು ನೋಂದಣಿ ಮಾಡಿ, 4,352 ಪರೀಕ್ಷಾರ್ಥಿಗಳು ಹಾಜರಾಗಿ 263 ಮಂದಿ ಗೈರು ಹಾಜರಾಗಿದ್ದರು.

ಅದೇ ರೀತಿ 2ನೇ ಪರೀಕ್ಷೆಯಲ್ಲಿ 4,615 ವಿದ್ಯಾರ್ಥಿಗಳು ಹೆಸರನ್ನು ನೋಂದಣಿ ಮಾಡಿದ್ದು, ಆ ಪೈಕಿ 4,343 ಮಂದಿ ಪರೀಕ್ಷೆಗೆ ಹಾಜರಾಗಿ 272 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.