ಮೂರು ತಿಂಗಳಾದ್ರೂ ಕಳ್ಳರ ಬಂಧನ ಇಲ್ಲ


Team Udayavani, Nov 14, 2021, 2:55 PM IST

ಕಳ್ಳತನ

Representative Image used

ಚೇಳೂರು: ಕಳೆದ ಮೂರು ತಿಂಗಳಿಂದ ಒಂದೇ ರಾತ್ರಿ 5 ಕಡೆ ಕಳ್ಳತನಕ್ಕೆ ಯತ್ನಿಸಿದ ಕಳ್ಳರು, ಮೂರು ಕಡೆ ವಿಫ‌ಲವಾಗಿ ಎರಡು ಮನೆಯಲ್ಲಿ ಕಳವು ಮಾಡಿಕೊಂಡು ಹೋಗಿದ್ದರೂ ಪೊಲೀಸರು ಆರೋಪಿಗಳ ಬಂಧಿಸುವಲ್ಲಿ ವಿಫ‌ಲವಾಗಿದ್ದಾರೆ. ಗ್ರಾಮದ ಶಾಂತಿನಗರ ನಿವಾಸಿ ಟಿ.ಎನ್‌. ಸತ್ಯಪ್ಪನಾಯಕ್‌ ಅವರ ಬೆತೇಲ್‌ ಚರ್ಚ್‌ನ ವಸತಿ ನಿಲಯದ ಬೀಗ ಹೊಡೆದು ಒಳನುಗ್ಗಿದ ಕಳ್ಳರು 5 ಸಾವಿರ ರೂ. ಬೆಲೆ ಬಾಳುವ ಮಕ್ಕಳ ಪುಸ್ತಕಗಳು, ಕಲಿಕಾ ಸಾಮಗ್ರಿಗಳು, 5 ಸಾವಿರ ರೂ.ಗೂ ಹೆಚ್ಚು ಹಣ ಇದ್ದ ಹುಂಡಿ ಕಳವು ಮಾಡಿದ್ದಾರೆ.

ಇದನ್ನೂ ಓದಿ:- ಕೊಚ್ಚಿ ಹೋದ ಗ್ರಾ.ಪಂ. ಸದಸ್ಯ ಇನ್ನೂ ಸಿಕ್ಕಿಲ್ಲ..!

ಇದೇವೇಳೆ ಟೀಚರ್‌ ರಾಮು, ಶಿವಣ್ಣ ಅವರ ಬಾಡಿಗೆ ಮನೆ ಬೀಗ ಹೊಡೆದು ಒಳಗೆ ನುಗ್ಗಿದ ಖದೀಮರು ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ವಾಪಸ್‌ ಬಂದು, ಅದೇ ರಸ್ತೆಯಲ್ಲಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿಲಾನ್‌ ಬಾಷ ಅವರ ಮನೆ ಬೀಗ ಮುರಿದು ಬೀರುವಿನಲ್ಲಿದ್ದ 4.8 ಲಕ್ಷ ರೂ. ನಗದು ದೋಚಿಕೊಂಡು, ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿದ್ದಾರೆ.

ಕಳವಾಗಿದ್ದು ಎರಡಲ್ಲ, ನಾಲ್ಕು ಲಕ್ಷ ರೂ.: ಮುಖ್ಯ ಶಿಕ್ಷಕ ಜಿಲಾನ್‌ ಬಾಷ ಅವರ ಮನೆ ಕಳವು ಪ್ರಕರಣದಲ್ಲಿ 4,80,000 ರೂ. ದೋಚಿದ್ದರೂ ದೂರಿನಲ್ಲಿ 2,10,000 ರೂ. ತೋರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಕಳ್ಳರ ಪತ್ತೆಗಾಗಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ, ಕಳವಾದ ಮನೆ ದಾರಿಯಲ್ಲಿ ಸಿಸಿ ಕ್ಯಾಮೆರಾ ಇದ್ದರೂ ಅವುಗಳ ತನಿಖೆ ಮಾಡಿಲ್ಲ ಎಂದು ಹಣ ಕಳೆದುಕೊಂಡ ಮಾಲಿಕರು ದೂರಿದ್ದಾರೆ.

ದ್ವಿಚಕ್ರ ವಾಹನ ಕಳವು: ಚೇಳೂರು ಗ್ರಾಮದಲ್ಲಿ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಹೆಚ್ಚುತ್ತಿವೆ. ವಾಹನ ಸವಾರರು, ಮಾಲಿಕರು ಭಯಭೀತರಾಗಿದ್ದಾರೆ. ಗ್ರಾಮದ ಜಿಲಾನಿಬಾಷ ದ್ವಿಚಕ್ರ ವಾಹನ ಸೇರಿ ಸಾಬಾಜಾನ್‌, ಬಾರ್‌ ರಹಮತ್ತುಲ್ಲ, ಮಧುಸೂದನರೆಡ್ಡಿ ಇತರ ವಾಹನಗಳು ಕಳವು ಆಗಿವೆ. ಚೇಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದರೂ ಪತ್ತೆ ಮಾಡುವ ಗೋಜಿಗೆ ಹೋಗಲೇ ಇಲ್ಲ.

ಹೆಸರಿಗೆ ಸಿಪಿಐ ಆಫೀಸ್‌: ರಾಜ್ಯ ಸರ್ಕಾರ ಜನರಿಗೆ ಅನುಕೂಲವಾಗಲಿ ಎಂದು ಎರಡು ಪೊಲೀಸ್‌ ಠಾಣೆಗಳಿಗೆ ಒಂದು ಸರ್ಕಲ್‌ ಇನ್ಸ್‌ಪೆಕ್ಟರ್‌ ಆಫೀಸ್‌ ನೀಡಿದ್ದು, ವೃತ್ತ ನಿರೀಕ್ಷಕರು, ಐವರು ಸಿಬ್ಬಂದಿ, ಕಚೇರಿಗೆ ಪೀಠೊಪಕರಣ ನೀಡಿದೆ. ಅಪರಾಧ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿದ್ದರೂ ಗಮನ ಹರಿಸದೇ ಕೇಸಿಗೂ ನಮಗೂ ಸಂಬಂಧ ಇಲ್ಲ ಎಂಬಂತೆ ಇಲ್ಲಿನ ಪೊಲೀಸರು ವರ್ತಿಸುತ್ತಿರುವುದು ಜನತೆಗೆ ಬೇಸರ ತಂದಿದೆ.

ಪ್ರತಿಭಟನೆಗೆ ಸಜ್ಜು: ಚೇಳೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಸ್ತುಗಳನ್ನು ಕಳೆದುಕೊಂಡ ಮಾಲಿಕರು, ರಾತ್ರಿ ಗಸ್ತು ಹೆಚ್ಚಿಸುವುದರ ಜೊತೆಗೆ ಕಳವು ಪ್ರಕರಣಗಳ ಪತ್ತೆ ಮಾಡಲು ಅನುಭವಿ ಪೊಲೀಸರನ್ನು ನೇಮಿಸಲು ಮೀನ ಮೇಷ ಎಣಿಸಲಾಗುತ್ತಿದೆ ಎಂದು ಕಳವು ಪ್ರಕರಣದ ದೂರುದಾರರು ಆರೋಪಿಸಿದ್ದಾರೆ.

 “ಕಳವು ಪ್ರಕರಣದ ಆರೋಪಿಗಳ ಸೆರೆಗೆ ಅಧಿಕಾರಿಗಳನ್ನು ನೇಮಿಸಿದ್ದೇವೆ. ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಶೀಘ್ರದಲ್ಲೇ ನಾವು ಕಳ್ಳರನ್ನು ಹಿಡಿಯುತ್ತೇವೆ.” – ಜಿ.ಪಿ.ರಾಜು, ಚೇಳೂರು ಸರ್ಕಲ್‌

ಇನ್ಸ್‌ಪೆಕ್ಟರ್‌

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.