ಸೌಲಭ್ಯವಿಲ್ಲದ ಜನೌಷಧ ಕೇಂದ್ರ


Team Udayavani, Nov 5, 2022, 4:32 PM IST

ಸೌಲಭ್ಯವಿಲ್ಲದ ಜನೌಷಧ ಕೇಂದ್ರ

ಗೌರಿಬಿದನೂರು: ಮಾರುಕಟ್ಟೆ ದರಕ್ಕಿಂತ ರಿಯಾಯಿತಿ ದರದಲ್ಲಿ ಜನರಿಗೆ ಔಷಧಗಳನ್ನು ನೀಡುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರ ಜನಸಾಮಾನ್ಯರ ಪಾಲಿಗೆ ಮರೀಚಿಕೆ ಆಗುತ್ತಿದೆಯೇ? ಎಂಬ ಅನುಮಾನ ಗೌರಿಬಿದನೂರು ಜನೌಷಧಿ ಕೇಂದ್ರದಲ್ಲಿ ಕಾಡಲಾರಂಭಿಸಿದೆ.

ವೈದ್ಯರ ಚೀಟಿ ಹಿಡಿದು ಬರುವ ಇಲ್ಲಿನ ಜನೌಷಧ ಕೇಂದ್ರದಲ್ಲಿ ಅವರು ಕೇಳುವ ಔಷಧ ದೊರೆಯದೇ ವಾಪಸ್‌ ಮರಳುವ ಸ್ಥಿತಿ ಬಂದೊದಗಿದೆ. ಕೇಂದ್ರಕ್ಕೆ ಸೂಕ್ತ ಸೌಲಭ್ಯ ಒದಗಿಸದ ಕಾರಣ ಜನರಲ್ಲಿ ಭ್ರಮ ನಿರಸನ ಮೂಡಿಸುತ್ತಿದೆ. ತಾಲೂಕು ಕೇಂದ್ರ ಗೌರಿಬಿದನೂರಿನಲ್ಲಿರುವ ಜನೌಷಧಿಕೇಂದ್ರವು ಹಳೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದ್ದು ಈಗ ಹಳೆಯ ಆಸ್ಪತ್ರೆಯನ್ನು ಕೆಡವಿ ಹೊಸ ಆಸ್ಪತ್ರೆ ನಿರ್ಮಾಣ ಮಾಡಲು ಪ್ರಾರಂಭಿಸಿರುವುದರಿಂದ ವಿದ್ಯುತ್‌ ಸಂಪರ್ಕವನ್ನು ಕಡಿತವಾಗಿದೆ. ಇನ್ಸುಲಿನ್‌ ಸೇರಿದಂತೆ ಫ್ರಿಜ್ಡ್ ನಲ್ಲಿ ಸಂಗ್ರಹಿಸುವಂತಹ ಔಷಧಿಗಳನ್ನು ಸಂಗ್ರಹಿಸಲು ವಿದ್ಯುತ್‌ ಕೊರತೆ ಹಾಗೂ ಈ ಬಗ್ಗೆ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್‌ ಅವರ ನಿರ್ಲಕ್ಷ್ಯ ಧೋರಣೆ 3-4ತಿಂಗಳಿಂದ ಸಮಸ್ಯೆ ಹಾಗೆಯೇ ಮುಂದುವರಿಯಲು ಕಾರಣವಾಗಿದೆ. ಖಾಸಗಿ ಮೆಡಿಕಲ್‌ಗ‌ಳಿಗೆ ವರದಾನ: ಜನೌಷಧಿ ಕೇಂದ್ರಗಳು ಜಾರಿಗೆ ಬಂದಾಗ ಸಾಮಾನ್ಯ ಜನ ಖುಷಿಪಟ್ಟಿದ್ದರು. ಪ್ರತಿ ಔಷಧವೂ ಮಾರುಕಟ್ಟೆ ದರಕ್ಕಿಂತ ಶೇ. 60- 70 ಕಡಿಮೆ ದರದಲ್ಲಿ ಸಿಗಲಿದೆ ಎಂದು ಹಿಗ್ಗಿದ್ದರು. ಆದರೆ ಪದೇ ಪದೆ ಇಲ್ಲಿ ಔಷಧಗಳ ಕೊರತೆ ಉಂಟಾದರೆ ಜನ ಯಥಾಪ್ರಕಾರ ಖಾಸಗಿ ಮೆಡಿಕಲ್‌ಗ‌ಳನ್ನೇ ಆಶ್ರಯಿಸಬೇಕಾಗಿದೆ. ‌

ಹೀಗಾಗಿ ಖಾಸಗಿ ಮೆಡಿಕಲ್‌ಗ‌ಳಿಗೆ ವರದಾನವಾಗಿ ಪರಿಣಮಿಸಿದೆ. ವೈದ್ಯರು ಬರೆದು ಕೊಡುವ ನಿರ್ದಿಷ್ಟ ಹೆಸರಿನ ಮೆಡಿಸಿನ್‌ಗಳು ಜನೌಷಧ ಕೇಂದ್ರದಲ್ಲಿ ಇಲ್ಲದೇ ಇದ್ದಾಗ ಅದೇ ಸ್ವರೂಪದ ಬೇರೆ ಹೆಸರಿನ ಮೆಡಿಸಿನ್‌ ಕೊಡಲಾಗುತ್ತದೆ. ಆದರೆ ಹೆಚ್ಚಿನ ಸಂದರ್ಭ ವೈದ್ಯರು ಬರೆದ ನಿರ್ದಿಷ್ಟ ಹೆಸರಿನ ಔಷಧ ಮೆಡಿಕಲ್‌ಗ‌ಳಲ್ಲಿ ಸಿಗುವಂಥದ್ದೇ ಆಗಿರುತ್ತದೆ.

ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ನಡೆಸುತ್ತಿರುವುದು ಹಾಗೂ ಪ್ರಾಂಚೈಸಿ ಎಂಎಸ್‌ ಐಎಲ್‌ ನವರು ಆಗಿರುವುದರಿಂದ ಅವರೇ ಅಂಗಡಿ ಹಾಗೂ ವಿದ್ಯುತ್‌ ವ್ಯವಸ್ಥೆ ಮಾಡಬೇಕು ಆರೋಗ್ಯ ಇಲಾಖೆ ವ್ಯವಸ್ಥೆ ಮಾಡಲು ಯಾವುದೇ ಅವಕಾಶ ಅಥವಾ ಅಧಿಕಾರವಿಲ್ಲ. -ಡಾ. ಒ. ರತ್ನಮ್ಮ,ಗೌರಿಬಿದನೂರು ಆರೋಗ್ಯಾಧಿಕಾರಿ

ನಗರದ ಹೃದಯ ಭಾಗದಲ್ಲಿರುವ ಜನೌಷಧಿಕೇಂದ್ರಕ್ಕೆ ತಕ್ಷಣವೇ ವಿದ್ಯುತ್‌ ಸಂಪರ್ಕ ವ್ಯವಸ್ಥೆ ಮಾಡಲು ಗುತ್ತಿಗೆ ದಾರರಿಗೆ ಸೂಚಿಸಲಾಗಿದ್ದು ಈ ಬಗ್ಗೆ ನ.4ರಂದು ಸ್ಥಳಕ್ಕೆ ಭೇಟಿ ನೀಡಲಿದ್ದೇವೆ. ಎಂಸಿಎಚ್‌ ಆಸ್ಪತ್ರೆ ಬಳಿಯಲ್ಲೂ ಜನೌಷಧಿ ಕೇಂದ್ರದ 2ನೇ ಘಟಕ ಸ್ಥಾಪಿಸಲು ಎಲ್ಲಾ ಕ್ರಮಕೈಗೊಳ್ಳಲಾಗುತ್ತದೆ. -ಮಹೇಶ್‌ ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ

ಜನೌಷಧಿ ಮಳಿಗೆಯ ಅವ್ಯವಸ್ಥೆ ಸರಿಪಡಿಸಿ ಬಡವರಿಗೆ ಕಡಿಮೆ ದರದಲ್ಲಿ ಔಷಧಿ ದೊರೆಯುವಂತೆ ಮಾಡಬೇಕೆಂಬ ಬದ್ಧತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಾಗಲೀ, ಎಂಎಸ್‌ಐಎಲ್‌ ಅಧಿಕಾರಿಗಳಿಗಾಗಲೀ ಇಲ್ಲದಿರುವುದರಿಂದ ಒಬ್ಬರಮೇಲೊಬ್ಬರು ದೂರುತ್ತಾ ಬೇಬೇಜವಾಬ್ದಾರಿ ತೋರುತ್ತಿದ್ದಾರೆ. -ಕಾದಲವೇಣಿ ಮೋಹನ್‌ ಕುಮಾರ್‌, ಕನ್ನಡ ಪರ ಹೋರಾಟಗಾರ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.