ಕುಡಿಯುವ ನೀರು ಚರಂಡಿ ಪಾಲಾದರೂ ಕೇಳ್ಳೋರಿಲ್ಲ!


Team Udayavani, May 17, 2019, 1:35 PM IST

chikk-3

ಚಿಕ್ಕಬಳ್ಳಾಪುರ: ನಗರದ 26ನೇ ವಾರ್ಡ್‌ನಲ್ಲಿ ಹಾದು ಹೋಗಿರುವ ಜಕ್ಕಲ ಮಡುಗು ಜಲಾಶಯದ ಪೈಪ್‌ಲೈನ್‌ ಒಡೆದು ಕೊಳಚೆ ನೀರು ಮಿಶ್ರಣಗೊಂಡು ಮನೆಗಳಿಗೆ ಕೊಳಚೆ ನೀರು ಪೂರೈಕೆಗೊಳ್ಳುತ್ತಿದ್ದರೂ ನಗರಸಭೆ ಅಧಿಕಾರಿಗಳು ಜಾಣಕುರುಡಂತೆ ವರ್ತಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳಚೆ ನೀರು ಸರಬರಾಜು: ಶುದ್ಧ ಕುಡಿಯುವ ನೀರು ಚರಂಡಿ ಪಾಲಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ತಲೆ ಕೆಡಿಸಿಕೊಳ್ಳದೇ ಇಲ್ಲಿನ ನಿವಾಸಿಗಳಿಗೆ ಅದೇ ಕೊಳಚೆ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಬಡಾವಣೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ನೀರು ಪೋಲಾಗುವುದು ತಡೆಗೆ ವಿಫ‌ಲ: ಜಿಲ್ಲೆಯಲ್ಲಿ ಸತತ ಬರದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಮುಗಿಲು ಮುಟ್ಟಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹನಿ ನೀರಿಗೂ ತತ್ವಾರ ಏರ್ಪಟ್ಟಿದೆ. ಆದರೆ ನಗರದ ಜನತೆಗೆ ವರದಾನವಾಗಿರುವ ಜಕ್ಕಲಮಡುಗು ಜಲಾಶಯದ ನೀರು ಪೋಲಾಗುವುದನ್ನು ತಡೆಯುವಲ್ಲಿ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ನಿವಾಸಿಗಳ ಅಳಲು: ಒಡೆದ ಪೈಪ್‌ಲೈನ್‌ಗೆ ಚರಂಡಿಯ ನೀರಿಗೆ ಮಿಶ್ರಣಗೊಳ್ಳುತ್ತಿದ್ದರೂ, ದುರಸ್ತಿಯ ಕಾರ್ಯಕ್ಕೆ ಮುಂದಾಗುತ್ತಿಲ್ಲ. ಇದರಿಂದ ಅಪಾರ ಪ್ರಮಾಣದ ಶುದ್ಧ ನೀರು ಚರಂಡಿ ಪಾಲಾಗುತ್ತಿದೆ. ಚರಂಡಿಯ ಕೊಳಚೆ ನೀರು ಶುದ್ಧ ಕುಡಿಯುವ ನೀರು ಪೂರೈಸುವ ಪೈಪ್‌ಲೈನ್‌ಗೆ ಸೇರಿ ಮನೆಗಳಿಗೆ ಗಬ್ಬುನಾಥ ಬೀರುವ ಕೊಳಚೆ ನೀರು ಬರುತ್ತಿವೆ. ಇದರಿಂದ ಮನೆಗಳ ಸಂಪುಗಳು ಅನೈರ್ಮಲ್ಯಕ್ಕೆ ತುತ್ತಾಗಿವೆ ಎಂದು ಬಡಾವಣೆಯ ನಿವಾಸಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸದ್ಯ ಬಡಾವಣೆಗೆ ನಾಲ್ಕೈದು ದಿನಗಳಿಗೊಮ್ಮೆ ನೀರು ಸರಬರಾಜು ಮಾಡುವುದರಿಂದ ಇಲ್ಲಿನ ನಿವಾಸಿಗಳು ವಿಧಿಯಿಲ್ಲದೆ ಕೊಳಚೆ ನೀರನ್ನು ಹಿಡಿದು ಕುದಿಸಿ ಕುಡಿಯುವ ದುಸ್ಥಿತಿ ನಿರ್ಮಾಣವಾಗಿದೆ. ಆದರೆ ಕೊಳಚೆ ನೀರು ಪೂರೈಕೆಯ ಕುರಿತು ಮಾಹಿತಿಯಿಲ್ಲದ ಕೆಲವರು ಹಲವು ಸಾಂಕ್ರಾಮಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಬಡಾವಣೆಯ ನಿವಾಸಿ ಮಂಜುನಾಥ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

•ಜಕ್ಕಲಮಡುಗು ಜಲಾಶಯದ ಪೈಪ್‌ಲೈನ್‌ ಒಡೆದು ಕೊಳಚೆ ನೀರು ಮಿಶ್ರಣ
•ನಗರಸಭೆ ಅಧಿಕಾರಿಗಳು ಜಾಣಕುರುಡಂತೆ ವರ್ತನೆ
•ನಿವಾಸಿಗಳಿಗೆ ಇದೇ ಕೊಳಚೆ ನೀರು ಸರಬರಾಜು
•ನೀರು ಪೋಲಾಗುವುದನ್ನು ತಡೆಯುವಲ್ಲಿ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.