ಸಾಲುಮರದ ತಿಮ್ಮಕ್ಕ ಉದ್ಯಾನ ಗುಡಿಬಂಡೆಗೆ ಏಕೆ ಇಲ್ಲ?


Team Udayavani, Jun 8, 2022, 4:03 PM IST

ಸಾಲುಮರದ ತಿಮ್ಮಕ್ಕ ಉದ್ಯಾನ ಗುಡಿಬಂಡೆಗೆ ಏಕೆ ಇಲ್ಲ?

ಸಾಲುಮರದ ತಿಮ್ಮಕ್ಕ ಉದ್ಯಾನದ ಸಾಂದರ್ಭಿಕ ಚಿತ್ರ.

ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡಿಬಂಡೆ ಹೊರತುಪಡಿಸಿ, ಎಲ್ಲಾ ತಾಲೂಕುಗಳಲ್ಲೂ ಸಾಲುಮರದ ತಿಮ್ಮಕ್ಕ ಉದ್ಯಾನ ಇದೆ. ಆದರೆ, ಇಲ್ಲಿ ಮಾತ್ರ ಇನ್ನು ಸ್ಥಾಪಿಸದೇ ಇರುವುದಕ್ಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲೇ ಅತಿ ಹಿಂದುಳಿದ ತಾಲೂಕು ಎಂಬ ಬಿರುದನ್ನು ಪಡೆದಿರುವ ಗುಡಿಬಂಡೆ, ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕ್ಷೇತ್ರಗಳಲ್ಲೂ ಹಿಂದೆ ಉಳಿದಿದೆ. ಇತ್ತೀಚೆಗೆ ಶೈಕ್ಷಣಿಕವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವ ತಾಲೂಕಾಗಿ, ಸಕಾಲ ಸೇರಿ ಇತರೆ ಸೇವೆ ಜನರಿಗೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ.

ಸೀಮಿತ ಉದ್ದೇಶಗಳಿಗೆ ಮಾತ್ರ ಬಳಕೆ: ಜಿಲ್ಲೆಯ ಬೇರೆ ತಾಲೂಕುಗಳಲ್ಲಿ ಸರ್ಕಾರದಿಂದ ಬರುವ ವಿವಿಧ ಯೋಜನೆಗಳನ್ನು, ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸುತ್ತಿದ್ದರೆ, ಗುಡಿಬಂಡೆ ತಾಲೂಕಿನಲ್ಲಿ ಮಾತ್ರ ಅನುದಾನ ಸದ್ಬಳಕೆಯಾಗದೇ ಕೇವಲ ಕಾಟಾಚಾರಕ್ಕೆ ಎಂಬಂತೆ ಕೆಲವು ಸೀಮಿತ ಉದ್ದೇಶಗಳಿಗೆ ಮಾತ್ರ ಬಳಕೆ ಆಗುತ್ತಿರುವುದು ದುರಂತವೇ ಸರಿ.

ಗುಡಿಬಂಡೆಗಿಲ್ಲ ಟ್ರೀ ಪಾರ್ಕ್‌: ಇದಕ್ಕೆ ಪೂರಕ ಎಂಬಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಪರಿಸರದ ಬಗ್ಗೆ ಕಾಳಜಿ ಹುಟ್ಟಿಸುವ ಸಲುವಾಗಿ ಮತ್ತು ಸಾಲುಮರದ ತಿಮ್ಮಕ್ಕ ಅವರ ಆಸೆಯಂತೆ 2017-18ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅರಣ್ಯ ಭೂಮಿಯಲ್ಲಿ ವೃಕ್ಷ ಉದ್ಯಾನವನ್ನು (ಟ್ರೀ ಪಾರ್ಕ್‌) ನಿರ್ಮಾಣ ಮಾಡಲು ಆದೇಶಿಸಿದೆ. ಅದರಂತೆ ಗುಡಿಬಂಡೆ ಹೊರತುಪಡಿಸಿ, ಎಲ್ಲಾ ತಾಲೂಕುಗಳಲ್ಲೂ ಉದ್ಯಾನ ಅಭಿವೃದ್ಧಿಯಾಗಿ, ಸಾರ್ವಜನಿಕರಿಗೆ ಉಪಯೋಗವಾಗಿ ವಾಯು ವಿಹಾರ ಕೇಂದ್ರಗಳಾಗಿವೆ.

ಸರ್ಕಾರ ಆದೇಶವಾಗಿ 5 ವರ್ಷ ಕಳೆಯುತ್ತಿದ್ದರೂ, ಸಾರ್ವಜನಿಕರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ವಿಚಾರಿಸಿದಾಗ ಉದ್ಯಾನ ನಿರ್ಮಾಣ ಮಾಡಲು ಸರ್ಕಾರದ ಆದೇಶದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದರಲ್ಲಿ ಮಾತ್ರ ಮಾಡಲು ಆದೇಶವಿದೆ. ಇದರಿಂದ ಗುಡಿಬಂಡೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದರಿಂದ ಪರಿಸರ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅತಿ ಜರೂರಾಗಿ ಗುಡಿಬಂಡೆಯಲ್ಲಿ ಟ್ರೀಪಾರ್ಕ್‌ ಮಾಡಲು ಒತ್ತಾಯಿಸಿದ್ದಾರೆ.

ಸರ್ಕಾರದ ಆದೇಶದಂತೆ ವಿಧಾನಸಭಾ ಕ್ಷೇತ್ರಕ್ಕೆ ಒಂದು ಉದ್ಯಾನ ನಿರ್ಮಾಣ ಮಾಡಲು ಆದೇಶ ಇರುವುದರಿಂದ, ಬಾಗೇಪಲ್ಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಮುಂದೆ ಸರ್ಕಾರದಿಂದ ಆದೇಶ ಬಂದರೆ ಗುಡಿ ಬಂಡೆಯಲ್ಲಿ ನಿರ್ಮಾಣ ಮಾಡುತ್ತೇವೆ. – ಅರ್ಸಲನ್‌, ಡಿಎಫ್‌ಒ, ಚಿಕ್ಕಬಳ್ಳಾಪುರ.

ವಿಧಾನಸಭಾ ಕ್ಷೇತ್ರಕ್ಕೆ ಒಂದು ಉದ್ಯಾನ ಎಂದು ಹೇಳಿಕೊಂಡು ಗುಡಿಬಂಡೆಯಲ್ಲಿ ನಿರ್ಮಾಣ ಮಾಡದೇ ಇರುವುದು ದುರಂತ. ಕೂಡಲೇ ಗುಡಿಬಂಡೆ ತಾಲೂಕಿನಲ್ಲಿ ಟ್ರೀ ಪಾರ್ಕ್‌ ನಿರ್ಮಾಣ ಮಾಡಬೇಕು. – ಬಾಲಾಜಿ, ಸ್ಥಳೀಯರು

 

– ನವೀನ್‌ಕುಮಾರ್‌

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.