8 ತಿಂಗಳಾದ್ರೂ ಸಂಬಳ ಕೊಟ್ಟಿಲ್ಲ

ಸಾಲ ತೀರಿಸಲಾಗದೇ ಕಣ್ತಪ್ಪಿಸಿ ಓಡಾಡುತ್ತಿರುವ ಗ್ರಾಪಂ ನೌಕರರು

Team Udayavani, May 29, 2019, 3:34 PM IST

Udayavani Kannada Newspaper

ಟೇಕಲ್: ರಾಜ್ಯ ಸರ್ಕಾರ 8 ತಿಂಗಳುಗಳಿಂದ ಗ್ರಾಮ ಪಂಚಾಯ್ತಿ ನೌಕರರಿಗೆ ವೇತನ ಬಿಡುಗಡೆ ಮಾಡದ ಕಾರಣ, ಹಸಿದ ಹೊಟ್ಟೆಯಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಕುಟುಂಬ ನಿರ್ವಹಣೆ ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಆಪರೇಟರ್‌, ಕರವಸೂಲಿಗಾರರು, ನೀರಗಂಟಿ, ಕಚೇರಿ ಸಹಾಯಕರಿಗೆ ಸರ್ಕಾರ 8 ತಿಂಗಳಿಂದ ವೇತನ ಬಿಡುಗಡೆ ಮಾಡಿಲ್ಲ. ವೇತನ ಯಾವಾಗ ಬಿಡುಗಡೆಯಾಗುತ್ತದೆ ಎಂದು ಚಾತಕ ಪಕ್ಷಯಂತೆ ಕಾಯುತ್ತಿದ್ದಾರೆ.

ಅಲ್ಲದೆ, ಈಗ ಶಾಲಾ ಕಾಲೇಜುಗಳು ಪ್ರಾರಂಭವಾಗಿದೆ. ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಪುಸ್ತಕ, ಪೆನ್ನು, ಬ್ಯಾಗು ಮತ್ತು ಶಾಲಾ ಫೀಜು ಮುಂತಾದ ಹಣ ಕಟ್ಟಲು ಹಣವಿಲ್ಲದೆ ಪರದಾಡುತ್ತಿದ್ದಾರೆ. ಹಲವು ನೌಕರರು ಸಂಬಳವನ್ನೇ ನಂಬಿ ಕೆಲಸ ಮಾಡುತ್ತಿದ್ದಾರೆ.

ಇನ್ನೂ ಕೆಲವರು ಸ್ನೇಹಿತರ ಬಳಿ, ಕಿರಾಣಿ ಅಂಗಡಿಗಳಲ್ಲಿ ದಿನಸಿ ಸಾಲ ತಂದು ಕುಟುಂಬ ಪೋಷಣೆ ಮಾಡುತ್ತಿದ್ದಾರೆ. ಅಂಗಡಿಗಳಲ್ಲೂ ಸಾಮಗ್ರಿ ತಂದ ಲೆಕ್ಕ ಗಗನಕ್ಕೇರಿದೆ.

ಇದರಿಂದ ಅವರೂ ಸರಿಯಾದ ಸಮಯಕ್ಕೆ ವಸ್ತುಗಳನ್ನು ಕೊಡುತ್ತಿಲ್ಲ. ಕೆಲವರ ಸಾಲ ಜಾಸ್ತಿಯಾಗಿರುವುದರಿಂದ ಕಚೇರಿಗೆ ಬರುವುದು, ಇಲ್ಲ ಅವರಿಂದ ತಪ್ಪಿಸಿಕೊಳ್ಳಲು ನೌಕರರು ಬರುವ ಮಾರ್ಗಗಳನ್ನೇ ಬದಲಿಸಿ ಹೋಗುವುದು ಬರುವುದು ಮಾಡುತ್ತಿದ್ದಾರೆ.

ಈಗ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾಲ ಕೊಡುವವರೂ ಇಲ್ಲ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದೋ ಬಿಡುವುದೋ ಎಂಬ ಚಿಂತೆಯಲ್ಲಿದ್ದಾರೆ. ಪಂಚಾಯ್ತಿ ನೌಕರರು ರಜಾ ದಿನಗಳಲ್ಲಿ ಬೇರೆ ಕೆಲಸ ಮಾಡುವುದಕ್ಕೂ ಆಗುತ್ತಿಲ್ಲ.

ಇಲ್ಲಿ ಕೆಲಸ ಮಾಡಿದರೆ ಸರ್ಕಾರ ಸಮಯಕ್ಕೆ ಸರಿಯಾಗಿ ಸಂಬಳ ಬಿಡುಗಡೆಯಾಗುತ್ತಿಲ್ಲ, ಇದರಿಂದ ನೌಕರರ ಸ್ಥಿತಿ ಡೋಲಾಯಮಾನವಾಗಿ ಕಾಸಿಗಾಗಿ ಪರದಾಡುವ ಪ್ರಸಂಗ ತಲೆದೋರಿದೆ.

ಸರ್ಕಾರ ಈಗಲಾದರೂ ಪಂಚಾಯ್ತಿ ನೌಕರರಿಗೆ ಬಾಕಿ ಇರುವ ವೇತನವನ್ನು ಶೀಘ್ರ ಬಿಡುಗಡೆ ಮಾಡಿ ಅವರ ಕುಟುಂಬಗಳವರು ತುಂಬು ಹೊಟ್ಟೆ ತುಂಬ ಊಟ ಮಾಡಲು ಮತ್ತು ಅವರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ನೆರವಾಗುವುದರ ಜೊತೆಗೆ ಪಂಚಾಯ್ತಿ ನೌಕರರ ಕುಟುಂಬಗಳಲ್ಲಿರುವ ವೃದ್ಧರು ಅಥವಾ ರೋಗಿಗಳ ಔಷಧೋಪಚಾರಕ್ಕೆ ಆಸ್ಪತ್ರೆ ಖರ್ಚಿಗೆ ಹಣ ಸಹಾಯವಾದಂತೆ ಆಗಿಸಲು ಪ್ರಯತ್ನಿಸುತ್ತದೆಂದು ನೊಂದ ನೌಕರರು ಸರ್ಕಾರಕ್ಕೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಸರ್ಕಾರ ಬಡ ಗ್ರಾಮ ಪಂಚಾಯ್ತಿ ನೌಕರರ ನೋವಿಗೆ ಸ್ಪಂದಿಸಿ ಸಹಾಯ ಮಾಡಲು ಯತ್ನಿಸುವುದೇ ಎಂಬುದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.