ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
Team Udayavani, Aug 14, 2019, 3:00 AM IST
ಗುಡಿಬಂಡೆ: ತಾಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಸಾಮಾನ್ಯ ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗುತ್ತಾರೆ. ಮತ್ತೇಕೆ ಸಭೆ ಕರೆಯುವುದು ಎಂದು ತಾಪಂ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ವರಲಕ್ಷ್ಮೀ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸುವ ಸಭೆಯಲ್ಲಿ ಸಭೆಗೆ ಬಹುಪಾಲು ಅಧಿಕಾರಿಗಳು ಗೈರು ಹಾಜರಾಗಿದ್ದು, ಕೆಲವು ಇಲಾಖೆಗಳಿಂದ ತಾಲೂಕು ಮಟ್ಟದ ಅಧಿಕಾರಿಗಳು ಇಲಾಖೆಯ ಕೆಳ ಮಟ್ಟದ ಅಧಿಕಾರಿಗಳನ್ನು ಸಭೆಗೆ ಕಳುಹಿಸುತ್ತಾರೆ.
ಅವರ ಬಳಿ ಏನನ್ನು ಕೇಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರು ತಾಪಂ ಇಒ ಶ್ರೀನಾಥ್ಗೌಡ ಹಾಗೂ ಅಧ್ಯಕ್ಷರಿಗೆ ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಇಲಾಖಾಧಿಕಾರಿಗಳಿಂದ ಸಮಾಜ ಕಲ್ಯಾಣ, ರೇಷ್ಮೆ, ತೋಟಗಾರಿಕೆ, ಪಶು ಪಾಲನಾ, ಸಾರ್ವಜನಿಕರ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ತಾಪ ಇಒ, ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಬರುವ ಬೆಳೆಗಳು ರೈತರು ಬೆಳೆದಾಗ ಅದನ್ನು ನರೇಗಾ ಯೋಜನೆಯಲ್ಲಿ ಸೇರಿಸಿಕೊಳ್ಳುವುದು ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ರೇಷ್ಮೆ ಇಲಾಖೆಗಳ ಎಸ್ಇಪಿ, ಟಿಎಸ್ಪಿ ಯೋಜನೆಯಲ್ಲಿ 77 ಪರಿಶಿಷ್ಟ ಫಲಾನುಭವಿಗಳಿಗೆ ಔಷಧಿ ಸಿಂಪಡಣೆ ಯಂತ್ರಗಳ ವಿತರಣೆಗೆ ಸಭೆ ಅನುಮೋದನೆ ನೀಡಲಾಗಿದೆ ಎಂದು ತಾಪಂ ಇಒ ತಿಳಿಸಿದರು.
2 ಕೋಟಿಗೆ ಕ್ರಿಯಾ ಯೋಜನೆಗೆ ಸಿದ್ಧತೆ: ತಾಲೂಕಿನ 11ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೆ 18 ಲಕ್ಷದಂತೆ 2.98 ಕೋಟಿ ಮತ್ತು ಕಚೇರಿಯ ಪೀಠೊಪಕರಣಗಳಿಗೆ 2 ಲಕ್ಷ ಸೇರಿ ಒಟ್ಟು 2 ಕೋಟಿ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಲು ಎಲ್ಲಾ ಸದಸ್ಯರ ಒಪ್ಪಿಗೆಯಂತೆ ತೀರ್ಮಾನಿಸಲಾಯಿತು.
ಈಗಾಗಲೇ 50 ಲಕ್ಷ ಅನುದಾನವಿದ್ದು, ಇನ್ನುಳಿದ 1.50 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಆಗಬೇಕಿದೆ. ಎಸ್ಸಿ/ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ 50 ಲಕ್ಷ, ರಸ್ತೆ ಕಾಮಗಾರಿಗಳಿಗೆ 40 ಲಕ್ಷ, ಅಂಗವಿಕಲರ ಮೀಸಲಿಗೆ 10 ಲಕ್ಷ, ಗ್ರೀನ್ ಪೌಂಡ್ 10 ಲಕ್ಷ ಹಾಗೂ ಸಾಮಾನ್ಯ ಕಾಮಗಾರಿಗಳಿಗೆ 90 ಲಕ್ಷದಂತೆ ಒಟ್ಟು 2 ಕೋಟಿ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕೆಂದು ತಾಪಂ ಇಒ ಅಧಿಕಾರಿಗಳಿಗೆ ತಿಳಿಸಿದರು.
ತಾಪಂ ಕಟ್ಟಡಕ್ಕೆ ಅನುಮೋದನೆ: ಸುಮಾರು 2 ವರ್ಷಗಳ ಹಿಂದೆ ಹಳೆ ನ್ಯಾಯಾಲಯದ ಆವರಣದಲ್ಲಿ ತಾಪಂ ಕಾರ್ಯಾಲಯ ನಿರ್ಮಿಸಲು ಎಲ್ಲಾ ಸದಸ್ಯರು ತೀರ್ಮಾನ ಮಾಡಿ ಅನುಮೋದಲನೆ ಪಡೆದು ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಅಧಿಕಾರಿಗಳು ಬೇಜಾವಬ್ದಾರಿ ತೋರುತ್ತಿದ್ದಾರೆಂದು ಸದಸ್ಯರು ದೂರಿದರು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷ ಬೈರಾರೆಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಪೋಲಂಪಲ್ಲಿ ಮಂಜುನಾಥ್, ಎಲ್ಲೋಡು ಜಯರಾಮರೆಡ್ಡಿ, ಹಂಪಸಂದ್ರ ಆದಿನಾರಾಯಣಪ್ಪ, ಚೆಂಡೂರು ರಾಮಾಂಜನಪ್ಪ, ಉಲ್ಲೋಡು ವೆಂಕಟಲಕ್ಷ್ಮಮ್ಮ ಸೇರಿ 11 ಸದಸ್ಯರು ಹಾಜರಿದ್ದರು. ಸಮಾಜ ಕಲ್ಯಾಣಾಧಿಕಾರಿ ಶೇಷಾದ್ರಿ, ಪಶುಪಾಲನ ಇಲಾಖೆಯ ಎಡಿಎ ರಾಮಕೃಷ್ಣಾರೆಡ್ಡಿ, ಜಿಪಂ ತಾಂತ್ರಿಕ ವಿಭಾಗದ ಎಇಇ ಮಧು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ