ರೇಷ್ಮೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸದ ಅಧಿಕಾರಿಗಳು


Team Udayavani, Sep 28, 2022, 4:38 PM IST

tdy-14

ಶಿಡ್ಲಘಟ್ಟ: ಜಿಲ್ಲೆಯಲ್ಲಿ ರೇಷ್ಮೆ ಬೆಳೆಗೆ ರೋಗಬಾಧೆ ಬಾಧಿಸುತ್ತಿದ್ದರೂ ಇಲಾಖಾ ಅಧಿಕಾರಿಗಳು ರೋಗವನ್ನು ನಿರ್ಮೂಲನೆ ಮಾಡಲು ವಿಫಲರಾಗಿದ್ದು ರೇಷ್ಮೆ ಬೆಳೆಗಾರರು ತೊಂದರೆಯಲ್ಲಿ ಸಿಲುಕಿದ್ದಾರೆ ಎಂದು ಕಲ್ಪವೃಕ್ಷ ಕೃಷಿ ರೈತ ಉತ್ಪಾದಕರ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಂ. ಕ್ಯಾತಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ವೈಹುಣಸೇನಹಳ್ಳಿಯ ಸಿಆರ್‌ಸಿ ಕೇಂದ್ರದಲ್ಲಿ ಕೃಷಿ ಇಲಾಖೆ ಮತ್ತು ಎನ್‌ಆರ್‌ಡಿಎಸ್‌ ಸಹಯೋಗದಲ್ಲಿ ಕಲ್ಪವೃಕ್ಷ ಕೃಷಿ ರೈತ ಉತ್ಪಾದಕರ ಕಂಪನಿಯ 2021-22 ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಡ್ಲಘಟ್ಟ ತಾಲೂಕು ಸಹಿತ ಜಿಲ್ಲೆಯಲ್ಲಿ ರೈತರು ಫಲವತ್ತಾದ ಭೂಮಿಯನ್ನು ಯಥೇಚ್ಚವಾಗಿ ರಾಸಾಯನಿಕ ಗೊಬ್ಬರವನ್ನು ಬಳಸಿ ಭೂಮಿಯ ಫಲವತ್ತತೆಯನ್ನು ಕಳೆದುಕೊಂಡಿದ್ದೇವೆ. ಇದರಿಂದ ಯಾವುದೇ ಬೆಳೆ ಇಟ್ಟರೂ ನಷ್ಟವನ್ನು ಅನುಭವಿಸುವಂತಾಗಿದೆ.

ರೈತರು ಸಾವಯವ ಗೊಬ್ಬರವನ್ನು ಬಳಸಿ ಭೂಮಿಯ ಫಲವತ್ತತೆಯನ್ನು ಸಂರಕ್ಷಣೆ ಮಾಡಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಕಲ್ಪವೃಕ್ಷ ಕೃಷಿ ರೈತ ಉತ್ಪಾದಕರ ಕಂಪನಿಯ ಮೂಲಕ ಅತೀ ಕಡಿಮೆ ದರದಲ್ಲಿ ಕೃಷಿಗೆ ಪೂರಕವಾಗಿರುವ ಸಾಮಾಗ್ರಿಗಳನ್ನು ನೀಡಲಾಗುತ್ತಿದೆ. ಜತೆಗೆ ಕಂಪನಿಯಲ್ಲಿ ಸದಸ್ಯರಾಗಿರುವ ರೈತರಿಗೆ ತಿಂಗಳಿಗೆ 20 ಸಾವಿರ ವಸ್ತುಗಳನ್ನು ಖರೀದಿಸಲು (ರೈತ ಉತ್ಪಾದಕರ ಕಂಪನಿಯಲ್ಲಿ ಮಾತ್ರ) ಕ್ರೆಡಿಟ್‌ ಕಾರ್ಡ್‌ ನೀಡಲಾಗುತ್ತಿದೆ. ಇದನ್ನು ಸದುಪಯೋಗ ಮಾಡಿಕೊಂಡು ರೇಷ್ಮೆ ಕೃಷಿ ಅಥವಾ ಇನ್ನಿತರೆ ಕೃಷಿ ಚಟುವಟಿಕೆಗಳಿಗೆ ಬೇಕಾಗಿರುವ ಸಾಮಾಗ್ರಿಗಳನ್ನು ಕಾರ್ಡ್‌ ಬಳಸಿ ಖರೀದಿಸಬಹುದು ಒಂದು ತಿಂಗಳ ಅವಧಿಯಲ್ಲಿ 20 ಸಾವಿರ ರೂಗಳನ್ನು ಮರುಪಾವತಿಸಿದರೆ ಮುಂದಿನ ದಿನಗಳಲ್ಲಿ 50 ಸಾವಿರವರೆಗೂ ಸಾಮಗ್ರಿಗಳನ್ನು ಖರೀದಿಸಲು ಅವಕಾಶವಾಗುತ್ತದೆ ಸಂಘದ ಸದಸ್ಯರು 2 ಸಾವಿರ ರೂಗಳನ್ನು ಪಾವತಿಸಿ ಕಾರ್ಡ್‌ ಪಡೆದುಕೊಳ್ಳಬೇಕು ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆಎಚ್‌ ವೀಣಾ ಮಾತನಾಡಿ, ಕೇಂದ್ರ,ರಾಜ್ಯ ಸರ್ಕಾರಗಳು ಕೃಷಿಗಾಗಿ ಪ್ರೋತ್ಸಾಹ ಧನ ನೀಡುತ್ತಿದೆ. ರೈತರು ಇದರ ಉಪಯೋಗ ಪಡೆಯಬೇಕು ಎಂದರು.

ವೈಹುಣಸೇನಹಳ್ಳಿ ಕಲ್ಪವೃಕ್ಷ ಕೃಷಿ ರೈತ ಉತ್ಪಾದಕರ ಕಂಪನಿಯ ಸಿಇಒ ಎನ್‌ ಚಂದನಾ ಮಾತನಾಡಿ ಕಂಪನಿಯಲ್ಲಿ ಒಟ್ಟು 688 ಷೇರುದಾರರಿದ್ದಾರೆ, ಕಳೆದ ಸಾಲಿನ ನವೆಂಬರ್‌ನಿಂದ ವಹಿವಾಟು ನಡೆಯುತ್ತಿದೆ ಕಂಪನಿಯಲ್ಲಿ ರೇಷ್ಮೆ ಉಪಕರಣಗಳು ಚಕ್ಕೆ ಬೂಸಾ ಇಂಡಿ ಕೀಟನಾಶಕಗಳು ಕಳೆನಾಶಕಗಳು ಹಾಗೂ ರಸಗೊಬ್ಬರವನ್ನು ಮಾರಾಟ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಎನ್‌ಆರ್‌ಡಿಎಸ್‌ ಸಂಸ್ಥೆ ಕಾರ್ಯನಿರ್ವಹಕ ನಿರ್ದೇಶಕ ಎಂ. ವೆಂಕಟರಮಣಸ್ವಾಮಿ, ಕಲ್ಪವೃಕ್ಷ ಕೃಷಿ ರೈತ ಉತ್ಪಾದಕರ ಕಂಪನಿಯ ನಿರ್ದೇಶಕ ಡಿ.ಎನ್‌. ಆಂಜನೇಯರೆಡ್ಡಿ, ಪಿ ಮುನಿರಾಜು, ಎನ್‌ ಮಂಜುನಾಥ್‌, ನಾರಾಯಣಪ್ಪ, ಕೆಎನ್‌ ಮಂಜುನಾಥ್‌, ವಿ ರಮೇಶ್‌, ಅಂಬಿಕಾ, ವಿಎಸ್‌ ಕೃಷ್ಣಾರೆಡ್ಡಿ, ಸುಶೀಲಾ, ಬಿಎಲ್‌ ಜಯರಾಮ್‌, ಅನಿತಾ, ಎನ್‌.ವೆಂಕಟೇಶ್‌, ನರಸಿಂಹಗೌಡ, ಜಿಲ್ಲಾ ಎಫ್‌ಪಿಒ ಸಂಯೋಜಕ ಎನ್‌ ಮನೋಹರ್‌, ಡಿಇಒ ಮಧು, ಜಿಲ್ಲಾ ಎಫ್‌ಪಿಒ ಸಹಸಂಯೋಜಕ ಎಚ್‌ವಿ ಶ್ರೀರಾಮರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.