ತೈಲ ಬೆಲೆ ಏರಿಕೆ ವಿರುದ್ಧ”ಕೈ’ ಕಿಡಿ
Team Udayavani, Jun 16, 2021, 7:20 PM IST
ಚಿಕ್ಕಬಳ್ಳಾಪುರ: ತೈಲ ಬೆಲೆ ಏರಿಕೆ ಖಂಡಿಸಿಕಾಂಗ್ರೆಸ್ ಕಾರ್ಯಕರ್ತರು ನಗರದ ಪೆಟ್ರೋಲ್ಬಂಕ್ ಮುಂದೆ ಪ್ರತಿಭಟನೆ ನಡೆಸಿ, ಕೇಂದ್ರಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಾಂಗ್ರೆಸ್ ಕಚೇರಿಯಿಂದಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮೆರವಣಿಗೆನಡೆಸಿದ ಕಾರ್ಯಕರ್ತರು, ಕೇಂದ್ರ, ರಾಜ್ಯಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಡಾ.ಕೆ.ಸುಧಾಕರ್ ವಿರುದ್ಧ ಘೋಷಣೆ ಕೂಗಿದರು.
ಪಕ್ಷದ ಜೊತೆ ಕೈಜೋಡಿಸಿ: ಕೊರೊನಾಸಂಕಷ್ಟದ ಸಮಯದಲ್ಲಿ ಪೆಟ್ರೋಲ್-ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಮಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿಸರ್ಕಾರ ಜನ ವಿರೋಧಿ ಧೋರಣೆ ಅನುಸರಿಸುತ್ತಿದೆ. ಇಂತಹ ಪಕ್ಷವನ್ನು ಅಧಿಕಾರದಿಂದಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷದೊಂದಿಗೆಜನಸಾಮಾನ್ಯರು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಜನರ ಕಷ್ಟ ಕೇಳುವವರೇ ಇಲ್ಲ:ಗೌರಿಬಿದನೂರು ಶಾಸಕ ಎನ್.ಶಿವಶಂಕರ್ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಉಸ್ತುವಾರಿಸಚಿವ ಡಾ.ಕೆ.ಸುಧಾಕರ್ ಅವರ ಕೃಪಕಟಾಕ್ಷದಿಂದ ಭ್ರಷ್ಟಾಚಾರ ತಾಂಡವವಾಡುತ್ತಿದೆ,ಆಡಳಿತ ವ್ಯವಸ್ಥೆ ಹದಗೆಟ್ಟಿದೆ, ಸಾಮಾನ್ಯಜನರ ಕಷ್ಟವನ್ನು ಕೇಳವವರು ಇಲ್ಲದಂತಾಗಿದೆಎಂದು ಆರೋಪಿಸಿದರು.
ಸಚಿವರ ದರ್ಬಾರ್: ಜಿಲ್ಲಾ ಉಸ್ತುವಾರಿಸಚಿವರು ಜನಪರ ಆಡಳಿತ ನಡೆಸುವಬದಲಿಗೆ ಹಿಂದೆ ಮುಂದೆ ಬೆಂಗಾವಲುವಾಹನ ನಿಯೋಜಿಸಿಕೊಂಡು ದರ್ಬಾರ್ಮಾಡುತ್ತಿದ್ದಾರೆ. ನಾನೂ ಸಚಿವನಾಗಿ ಕೆಲಸಮಾಡಿದ್ದೇನೆ. ಎಂದೂ ಬೆಂಗಾವಲು ವಾಹನಇಟ್ಟುಕೊಂಡಿರಲಿಲ್ಲ. ಅಧಿ ಕಾರ ಶಾಶ್ವತವಲ್ಲ,ಡೋಂಗಿ ರಾಜಕಾರಣ ಉಳಿಯುವುದಿಲ್ಲ,ಕಾಲ ಬದಲಾಗುತ್ತದೆ ಎಂಬುದು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.
ಮಂತ್ರಿಗಿರಿಗೆ ಬ್ರೇಕ್?: ರಾಜ್ಯದಲ್ಲಿಕೊರೊನಾ ಸೋಂಕು ನಿಯಂತ್ರಿಸಲುವಿಫಲವಾಗಿರುವ ಆರೋಗ್ಯ ಮತ್ತು ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ಅವರಿಗೆ ಬಿಜೆಪಿಯವರೇ ಸಚಿವ ಸಂಪುಟದಿಂದ ಗೇಟ್ಪಾಸ್ ಕೊಡಿಸಲು ತಯಾರಿನಡೆಸಿದ್ದಾರೆ ಎಂದು ಭವಿಷ್ಯ ನುಡಿದರು.
ಜನರ ಕೈಗೆ ಸಿಗಲ್ಲ: ಜಿಲ್ಲಾ ಉಸ್ತುವಾರಿಸಚಿವರು ಜನಸಾಮಾನ್ಯರ ಕೈಗೆ ಸಿಗುತ್ತಿಲ್ಲ,ಅವರ ಜೊತೆ ಮಾತನಾಡುವ ಹಾಗಿಲ್ಲ,ಫೋನ್ ಕರೆಗೂ ಸಿಗಲ್ಲ, ನೀವು ಯಾವಜನಪ್ರತಿನಿಧಿ, ನಿಮ್ಮ ಟಾಕು ಟೀಕುನೋಡುವುದಕ್ಕಾ ಜನ ಓಟು ಹಾಕಿದ್ದು ಎಂದುಪ್ರಶ್ನಿಸಿದ ಶಿವಶಂಕರೆಡ್ಡಿ, ಮುಂದಿನವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸುತ್ತೇವೆ ಎಂದು ಸವಾಲು ಹಾಕಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ