ಒತ್ತುವರಿ ರಸ್ತೆ ಸಂಚಾರಕ್ಕೆ ಮುಕ್ತ
Team Udayavani, Jul 24, 2020, 8:09 AM IST
ಶಿಡ್ಲಘಟ್ಟ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸಾರ್ವಜನಿಕ ರಸ್ತೆಯ ಅಕ್ರಮ ಒತ್ತುವರಿಯನ್ನು ತಹಶೀಲ್ದಾರ್ ಕೆ.ಅರುಂಧತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ.
ತಾಲೂಕಿನ ಜಂಗಮಕೋಟೆ ಹೋಬಳಿ ಕಲ್ಯಾಪುರದಲ್ಲಿ ಕೆಲವರು ಸಾರ್ವಜನಿಕ ರಸ್ತೆಯನ್ನು ಅತಿಕ್ರಮಣ ಮಾಡಿ ಬೆಳೆಗಳನ್ನು ಇಡುತ್ತಿದ್ದರು. ಈ ಬಗ್ಗೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳು, ತಹಶೀಲ್ದಾರ್ಗೆ ದೂರು ಸಲ್ಲಿಸಿ ಸಾರ್ವಜನಿಕ ರಸ್ತೆ ತೆರವುಗೊಳಿಸ ಬೇಕೆಂದು ಮನವಿ ಮಾಡಿದರು. ಅತಿಕ್ರಮಣಕಾರರು ತಮ್ಮ ಪ್ರಭಾವದಿಂದಾಗಿ ರಸ್ತೆ ತೆರವು ಗೊಳಿಸಲು ಮುಂದಾಗದಿರುವುದನ್ನು ಗಮನಿಸಿದ ಗ್ರಾಮಸ್ಥರು, ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ರಸ್ತೆ ಒತ್ತುವರಿ ತೆರವುಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ಮೇರೆಗೆ ತಹಶೀಲ್ದಾರ್ ಕೆ.ಅರುಂಧತಿ ಅಂತಿಮ ನೋಟಿಸ್ ನೀಡಿದರು. ಅತಿ ಕ್ರಮಣಕಾರರು ಯಾವುದೇ ಉತ್ತರ ನೀಡದ ಕಾರಣ, ಪೊಲೀಸ್ ರಕ್ಷಣೆಯಲ್ಲಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ತೆರವು ಕಾರ್ಯಾಚರಣೆ ನಡೆಸಿದರು. ಕೆಲವರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಿದರೆ, ಮುನಿಕೃಷ್ಣಪ್ಪ ಎಂಬುವರು ಅತಿಕ್ರಮಣದ ಜಾಗದಲ್ಲಿ ಬೆಳೆದಿದ್ದ ಅರ್ಧ ಟನ್ಗಳಷ್ಟು ಹಿಪ್ಪುನೇರಳೆ ಮಹಜರ್ ಮಾಡಿ ಕಟಾವು ಮಾಡಿ ಜೆಸಿಬಿಯಿಂದ ಅತಿಕ್ರಮಣ ಮಾಡಿದ್ದ ರಸ್ತೆಯನ್ನು ಅಧಿಕಾರಿಗಳು ತೆರವುಗೊಳಿಸಿದರು.
ಕಲ್ಯಾಪುರ ಮತ್ತು ರಾಳ್ಳಕುಂಟೆ ಮಧ್ಯೆ ಅತಿಕ್ರಮಣವಾಗಿದ್ದ ರಸ್ತೆಯನ್ನು ಸಾರ್ವ ಜನಿಕರ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಸಿಪಿಐ ಸುರೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಲಿಯಾ ಖತುಲ್ಲಾ, ಜಂಗಮಕೋಟೆ ರಾಜಸ್ವ ನಿರೀಕ್ಷಕ ಸುಪ್ರೀತ್ ಹಾಗೂ ಭೂಮಾಪನ ಇಲಾ ಖೆಯ ಅಧಿಕಾರಿಗಳು ಕಾರ್ಯಾಚರಣೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ