ಪಿಒಪಿ ಗಣೇಶ ಮಾರಾಟ ವಿರುದ್ಧ ಕಾರ್ಯಚರಣೆ
Team Udayavani, Sep 2, 2019, 3:00 AM IST
ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ಕೊಟ್ಟಿರುವ ಜಿಲ್ಲಾಡಳಿತ, ಗಣೇಶ ಚತುರ್ಥಿ ಹಬ್ಬದ ಮುನ್ನ ದಿನವಾದ ಭಾನುವಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಸ್ಥಳೀಯ ನಗರಸಭೆ ಅಧಿಕಾರಿಗಳ ತಂಡ ಜಂಟಿ ಕಾರ್ಯಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟವಾಗದಂತೆ ಖುದ್ದು ಪರಿಶೀಲಿಸಿ ಖಚಿತಪಡಿಸಿಕೊಂಡರು.
ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಸಹಾಯಕ ಪರಿಸರ ಅಧಿಕಾರಿ ವಿಜಯಾ ಹಾಗೂ ನಗರಸಭೆ ಆಯುಕ್ತ ಉಮಾಕಾಂತ್ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಗಣೇಶ ಮೂರ್ತಿ ವ್ಯಾಪಾರಸ್ಥರಿಗೆ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.
ವಿವಿಧೆಡೆ ಪರಿಶೀಲನೆ: ಗಣೇಶ ಮೂರ್ತಿ ಮಾರಾಟ ಮಾಡುತ್ತಿದ್ದ ನಗದ ಬೆಸ್ಕಾಂ ಕಚೇರಿ ಆವರಣ, ಸಂತೆ ಮಾರುಕಟ್ಟೆ ಸಮೀಪ, ಬಿಬಿ ರಸ್ತೆ, ಬಜಾರ್ ರಸ್ತೆ, ಎಂಜಿ ರಸ್ತೆ, ಖಾಸಗಿ ಬಸ್ ನಿಲ್ದಾಣ, ವಾಪಸಂದ್ರ, ಎಪಿಎಂಸಿ ಮಾರುಕಟ್ಟೆ, ಗಂಗಮ್ಮ ಗುಡಿ ರಸ್ತೆ, ಟೌನ್ ಹಾಲ್ ವೃತ್ತಗಳಲ್ಲಿ ಕಾರ್ಯಾಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳು ಮಾರಾಟವಾಗದಂತೆ ನೋಡಿಕೊಂಡರು. ವ್ಯಾಪಾರಸ್ಥರು ದಾಸ್ತಾನು ಮಾಡಲಾಗಿದ್ದ ಗೋಡೌನ್ಗಳಿಗೆ ತೆರಳಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಕರಪತ್ರ ಹಂಚಿ ಅರಿವು: ಪರಿಸರ ಮಾಲಿನ್ಯ ತಡೆಯುವ ಉದ್ದೇಶದಿಂದ ಪ್ಲಾಸ್ಟರ್ ಆಫ್ ಫ್ಯಾರೀಸ್ನಿಂದ ಸಿದ್ಧಪಡಿಸಿರುವ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿಕೆ ನಿಷೇಧಿಸಲಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಬೇಕು. ಜೇಡಿ ಮಣ್ಣಿನಿಂದ ಹಾಗೂ ಬಣ್ಣ ರಹಿತ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಕರಪತ್ರ ಹಂಚಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಸಹಾಯಕ ಪರಿಸರ ಅಧಿಕಾರಿ ವಿಜಯಾ, ಜಿಲ್ಲಾದ್ಯಂತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಮೂಲಕ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯಲ್ಲಿ ಎಲ್ಲೂ ಪಿಒಪಿ ಗಣೇಶ ಮಾರಾಟವಾಗಿಲ್ಲ.
ಮುಂದಿನ ವರ್ಷದಿಂದ ಸಂಪೂರ್ಣ ಬಣ್ಣ ರಹಿತ ಗಣೇಶ ಮೂರ್ತಿಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಷ್ಠಾಪನೆ ಆದ ಮೇಲೆಯು ಕೂಡ ಇಲಾಖೆ ಉತ್ಸವ ಮೂರ್ತಿಗಳನ್ನು ತಪಾಸಣೆ ನಡೆಸಿ ಪರೀಕ್ಷೆಗೆ ಒಳಪಡಿಸಲಿದೆ. ಯಾರಾದರೂ ನಿಯಮಾವಳಿಗಳನ್ನು ಮೀರಿ ಪಿಒಪಿ ಗಣೇಶ ಪ್ರತಿಷ್ಠಾಪಿಸಿದ್ದರೆ ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಡ್ಲಘಟ್ಟ: 10 ಲಕ್ಷ ರೂ ಮೌಲ್ಯದ ನಕಲಿ ಮದ್ಯ ತಯಾರಿಕಾ ವಸ್ತುಗಳು ವಶ
ಕೃಷಿ ಕಾಯ್ದೆ ವಾಪಸ್ಸು ಪಡೆಯದಿದ್ದರೆ ದ್ವಿತೀಯ ಸ್ವಾತಂತ್ರ್ಯಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್
ಯುವಪೀಳಿಗೆಗೆ ಸಂಸ್ಕೃತಿ, ಪರಂಪರೆ ತಿಳಿಸಿ
ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ವಿತರಣೆ ಅಭಿಯಾನಕ್ಕೆ ಡಿ.ಸಿ ಆರ್.ಲತಾ ಚಾಲನೆ
ರಾಮಮಂದಿರ ನಿರ್ಮಾಣ ದೇಶ ಒಗ್ಗೂಡಿಸುವ ಕಾರ್ಯ: ಸಚಿವ ಡಾ.ಕೆ.ಸುಧಾಕರ್
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ