ಶಾಶ್ವತ ನೀರಾವರಿ ಯೋಜನೆಗೆ ನಿರ್ಣಾಯಕ ಹೋರಾಟಕ್ಕೆ ಸಜ್ಜಾಗಿ


Team Udayavani, Sep 14, 2020, 2:45 PM IST

ಶಾಶ್ವತ ನೀರಾವರಿ ಯೋಜನೆಗೆ ನಿರ್ಣಾಯಕ ಹೋರಾಟಕ್ಕೆ ಸಜ್ಜಾಗಿ

ಚಿಕ್ಕಬಳ್ಳಾಪುರ: ಸತತ ಬರಗಾಲದಿಂದ ತತ್ತರಿಸುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲು ನಿರ್ಣಾಯಕ ಹೋರಾಟ ನಡೆಸಲು ಜಿಲ್ಲೆಯ ಜನ ಸಜ್ಜಾಗಬೇಕೆಂದು ಸಮಾಜ ಸೇವಕ ಆರ್‌.ರವಿ ಬಿಳೇಶಿವಾಲೆ ಕರೆ ನೀಡಿದರು.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದಲ್ಲಿ ಲಯನ್‌ ಕ್ಲಬ್‌ ಯಣ್ಣೂರು ಅರವಿಂದ ನಗರ ಕ್ಲಬ್‌ ವತಿಯಿಂದ ಜಿಲ್ಲೆ 317 (ಎಫ್‌) ಓಝೋನ್‌ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಘಟಿತರಾಗಿ ಹೋರಾಟ ನಡೆಸಬೇಕು: ರೇಷ್ಮೆ,ಹೈನುಗಾರಿಕೆ, ತರಕಾರಿ, ಹೂ ಹಣ್ಣು ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಜಾರಿಗೊಳಿಸಲು ಕೇವಲ ಪೊಳ್ಳು ಭರವಸೆಗಳನ್ನು ನೀಡುತ್ತಾ ಬಂದಿದ್ದು, ಮುಂದಿನ ಪೀಳಿಗೆ ಭವಿಷ್ಯದ ಹಿತದೃಷ್ಟಿಯಿಂದ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲು ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತ ಸಂಘಗಳ ಸದಸ್ಯರು, ಯುವಕರ ಸಂಘ ಸಂಸ್ಥೆಗಳು ಸಂಘಟಿತರಾಗಿ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಹೋರಾಟ ನಡೆಸಬೇಕೆಂದು ಹೇಳಿದರು.

ಪರಿಸರ ಸಂರಕ್ಷಣೆ ಜನಾಂದೋಲನವಾಗಲಿ: ಮನುಷ್ಯನ ಸ್ವಾರ್ಥ ಸಾಧನೆಗಾಗಿ ಮರಗಿಡಗಳನ್ನು ಕಡಿದು ಹಾಕಿದ್ದರಿಂದ ಪ್ರಾಕೃತಿಕ ಅಸಮತೋಲನ ಉಂಟಾಗಿ ಸಕಾಲದಲ್ಲಿ ಮಳೆ ಬೆಳೆ ಲಭಿಸದೇ ಜನ ಸಂಕಷ್ಟದಲ್ಲಿ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಜನಾಂದೋಲನದ ಸ್ವರೂಪ ಪಡೆದುಕೊಳ್ಳಬೇಕು ಎಂದರು.

ಗ್ರಾಮೀಣ ಶಾಖೆ ಆರಂಭಿಸಲು ತೀರ್ಮಾನ ಶಿಡ್ಲಘಟ್ಟ ತಾಲೂಕಿನಲ್ಲಿ ಸಕ್ರಿಯವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿಳೇಶಿವಾಲೆ ರವಿ ಕುಮಾರ್‌ ಅವರ ನೇತೃತ್ವದಲ್ಲಿ ಲಯನ್ಸ್‌ ಕ್ಲಬ್‌ನ ಗ್ರಾಮೀಣ ಶಾಖೆ ಆರಂಭಿಸಲು ಒಮ್ಮತದ ತೀರ್ಮಾನ ತೆಗೆದುಕೊಂಡು ಸುಮಾರು 15 ಜನ ಸದಸ್ಯರನ್ನು ಒಳಗೊಂಡಂತೆ ಲಯನ್ಸ್‌ ಕ್ಲಬ್‌ ಸ್ಥಾಪಿಸಿ ಪರಿಸರ ಸಂರಕ್ಷಣೆ ಮತ್ತು ಸಮಾಜಸೇವಾ ಚಟುವಟಿಕೆ ಗಳನ್ನು ನಡೆಸಲು ಸಹಮತ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲಯನ್‌ ಕ್ಲಬ್‌ ಯಣ್ಣೂರು ಅರವಿಂದನಗರ ಕ್ಲಬ್‌ನ ಜಿಲ್ಲೆ 317 (ಎಫ್‌) ಪ್ರದೇಶಾಧ್ಯಕ್ಷ ಕೆ.ಶ್ರೀನಿವಾಸ್‌ಮೂರ್ತಿ, ರಾಜ್ಯ ಪಾಲರು ದೀಪಕ್‌ ಸುಮನ್‌, ಫರಸ್ಟ್‌ ಜಿಲ್ಲಾ ಗರ್ವನರ್‌ ಮನೋಹಡಿಯರ್‌, 2ನೇ ವಿಡಿಸಿಬಿ.ಎಸ್‌.ರಾಜಶೇಖರಯ್ಯ, ಹುಲಿಕಲ್‌ ನಟರಾಜ್‌, ಲಕ್ಷ್ಮೀ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ದೇವರಾಜ್‌, ಮಳಮಾಚನಹಳ್ಳಿ ಗ್ರಾಪಂಅಧ್ಯಕ್ಷೆಭಾಗ್ಯಮ್ಮ ಪಾಪಣ್ಣ, ಮಾಜಿ ಅಧ್ಯಕ್ಷ ಬ್ಯಾಟರಾಯಶೆಟ್ಟಿ, ಗ್ರಾಮ ಸದಸ್ಯ ದೇವರಾಜ್‌, ಚಿಕ್ಕದಾಸರಹಳ್ಳಿದಾಮೋಧರ್‌, ತಾಲೂಕು ಕಸಾಪ ಅಧ್ಯಕ್ಷ ತ್ಯಾಗರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.