ಪ್ಯಾಕೇಜ್‌ ಟೆಂಡರ್‌, ಜಿಎಸ್ಟಿಯಿಂದ ಗುತ್ತಿಗೆದಾರರಿಗೆ ಸಂಕಷ್ಟ


Team Udayavani, Sep 3, 2017, 2:41 PM IST

chik-1.jpg

ಚಿಕ್ಕಬಳ್ಳಾಪುರ: ಗುತ್ತಿಗೆದಾರರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ತಳ್ಳುತ್ತಿರುವ ಪ್ಯಾಕೇಜ್‌ ಟೆಂಡರ್‌ ಪದ್ಧತಿಯನ್ನು ಕೂಡಲೇ ರದ್ದುಗೊಳಿಸುವಂತೆ ಹಾಗೂ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಜಿಎಸ್‌ಟಿಯಲ್ಲಿ ಗೊಂದಲ ನಿವಾರಣೆಗೆ ಆಗ್ರಹಿಸಿ ಸೆ.22, 23ರಂದು ಎರಡು ದಿನಗಳ ಕಾಲ
ಬೆಂಗಳೂರಿನಲ್ಲಿ ರಾಜ್ಯ ಗುತ್ತಿಗೆದಾರರ ಮಹಾ ಸಮ್ಮೇಳನ ಸಂಘಟಿಸಲಾಗಿದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಚ್‌.ವಿ.ಚಿಕ್ಕಗೆರಿಗಿರೆಡ್ಡಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ರೈತರು ಯಾವ ರೀತಿ ಅನ್ನದಾತರಾಗಿ ಬೆನ್ನಲುಬಾಗಿ ನಿಂತಿದ್ದಾರೆ. ಅದೇ ರೀತಿ ದೇಶ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗುತ್ತಿಗೆದಾರರು ಕೂಡ ದೇಶಕ್ಕೆ ಬೆನ್ನಲುಬಾಗಿದ್ದಾರೆ.
ಆದರೆ, ಸರ್ಕಾರಗಳು ಅನುಸರಿಸುತ್ತಿರುವ ಕೆಲ ನೀತಿಗಳು ಗುತ್ತಿಗೆದಾರರಿಗೆ ಕಂಟಕವಾಗಿದ್ದು, ಆರ್ಥಿಕ ಸಂಕಷ್ಟದ ಸುಳಿ ಯಲ್ಲಿ ಸಿಲುಕುವಂತಾಗಿದೆ ಎಂದು ಬೇಸರ ವ್ಯಕ್ತಪಡಸಿದರು.

ದೇಶದ ಬೆಳವಣಿಗೆಯಲ್ಲಿ ಗುತ್ತಿಗೆದಾರರ ಪಾತ್ರ ಅಮೂಲ್ಯ ವಾಗಿದೆ. ರಾಜ್ಯದಲ್ಲಿ ಶೇ.30 ರಿಂದ 40 ರಷ್ಟು ದುಡಿಯುವ ಜನತೆಗೆ ಕೂಲಿ ಕೆಲಸ ನೀಡುತ್ತಿರುವ ಗುತ್ತಿಗೆದಾರರು ಸಹಸ್ರಾರು ಕುಟುಂಬಗಳ ಜೀವನಾಧಾರಕ್ಕೆ ಭದ್ರ ಬುನಾದಿ ಕಲ್ಪಿಸಿದ್ದಾರೆ. ಆದರೆ ಸರ್ಕಾರ ಇತ್ತೀಚಿನ ದಿನಗಳಲ್ಲಿ
ಕಾಮಗಾರಿಗಳನ್ನು ಪ್ಯಾಕೇಜ್‌ ಟೆಂಡರ್‌ ಕೆರೆಯುವ ಮೂಲಕ ಗುತ್ತಿಗೆದಾರರಿಗೆ ಕೆಲಸ ಇಲ್ಲದಂತಾಗಿದೆ. ಇದರಿಂದ ಲಕ್ಷಾಂತರ ರೂ. ಬಂಡ ವಾಳ ಹಾಕಿ ಖರೀಸಿರುವ ಯಂತ್ರೋಪಕರಣ
ಗಳಿಗೆ ಕೆಲಸ ಇಲ್ಲದೇ ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲಾಗದೇ ಇತ್ತ ಕೂಲಿ ಕಾರ್ಮಿಕರಿಗೂ ಸಮರ್ಪಕ ಕೆಲಸ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಸಮ್ಮೇಳನಕ್ಕೆ ಸಿಎಂ ಚಾಲನೆ: ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಶೀಷ್‌ ಮಹಲ್‌ನಲ್ಲಿ ಸೆ.22, 23 ರಂದು ನಡೆಯಲಿರುವ 2 ದಿನಗಳ ಗುತ್ತಿಗಾರರ ಮಹಾ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಡಾ.
ಎಚ್‌.ಸಿ. ಮಹಾದೇವಪ್ಪ, ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌ ಸೇರಿದಂತೆ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು ಭಾಗವಹಿಸಲಿದ್ದಾರೆ. ಎರಡನೇ ದಿನ ನಡೆಯುವ ಸಮ್ಮೇಳನಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ. ಕೇಂದ್ರ
ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್‌ ಮತ್ತಿತರರು ಭಾಗವಹಿಸಲಿದ್ದಾರೆ. ಸಮ್ಮೇಳನದ ಭಾಗವಾಗಿ ಗುತ್ತಿಗೆದಾರರಿಗೆ ವಿವಿಧ ವಿಷಯಗಳ ಕುರಿತು ನುರಿತ ತಜ್ಞರಿಂದ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದ್ದು, ಸುಮಾರು ಲಕ್ಷ ಗುತ್ತಿಗೆದಾರರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸಮ್ಮೇಳನದ ಹಕ್ಕೊತ್ತಾಯಗಳೇನು?: ರಾಜ್ಯ ಸರ್ಕಾರ ಕಾಮಗಾರಿ ಶುಲ್ಕಗಳನ್ನು ಪ್ರತ್ಯೇಕವಾಗಿ ದರಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಪ್ಯಾಕೇಜ್‌ ಟೆಂಡರ್‌ ಪದ್ಧತಿಯನ್ನು ರದ್ದುಗೊಳಿಸಬೇಕು, ಇ-ಟೆಂಡರ್‌ ಪದ್ಧತಿಯಲ್ಲಿ ಇನ್ನಷ್ಟು ಸುಧಾರಣೆ ಹಾಗೂ ಪಾರದರ್ಶಕತೆಯನ್ನು ರೂಪಿಸ ಬೇಕು, ಜಿಎಸ್‌ಟಿ ಗೊಂದಲಗಳ ನಿವಾರಣೆಗೆ ಜತೆಗೆ ಗುತ್ತಿಗೆದಾರರಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು
ಎಂಬುದು ಸೇರಿದಂತೆ ಗುತ್ತಿಗೆದಾರರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳು ವುದರ ಜತೆಗೆ ಗುತ್ತಿಗೆದಾರರ ಸಂಘಟನೆಯನ್ನು ಬಲಪಡಿಸುವ ಉದ್ದೇಶ ದಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಎರಡು ದಿನಗಳ ಗುತ್ತಿಗೆದಾರರ ಮಹಾ ಸಮ್ಮೇಳನ
ಆಯೋಜಿಸಲಾಗಿದೆ ಎಂದು ಎಚ್‌.ವಿ.ಚಿಕ್ಕಗೆರಿಗಿರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಗುತ್ತಿಗೆದಾರರ ಸಂಘದ ಉಪ ಕಾರ್ಯದರ್ಶಿ ಕೆ.ಗೋಪಿನಾಥ್‌, ಖಜಾಂಚಿ ಹೆಚ್‌.ಮುನೇಗೌಡ, ಪದಾಧಿಕಾರಿಗಳಾದ ಜೆ.ಕೆ. ಚಂದ್ರಶೇಖರರೆಡ್ಡಿ, ಅಡ್ಡಗಲ್‌ ಶ್ರೀಧರ್‌, ಮುರಳಿಬಾಬು, ಕಾಳಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.