ಆಧಾರ್‌ ತಿದ್ದುಪಡಿಗೆ ಪೋಷಕರ ಪರದಾಟ


Team Udayavani, Mar 15, 2018, 5:13 PM IST

chikk.jpg

ಚಿಕ್ಕಬಳ್ಳಾಪುರ: ಆಧಾರ್‌ ಕಾರ್ಡ್‌ಗಳಲ್ಲಿ ಮುದ್ರಣ ದೋಷದಿಂದ ಉಂಟಾಗಿರುವ ಮಕ್ಕಳ ಹೆಸರು ತಿದ್ದುಪಡಿಗಾಗಿ ಈಗ ಜಿಲ್ಲೆಯ ಪೋಷಕರು ಬೆಳಗ್ಗೆಯೆ ತಮ್ಮ ಕೆಲಸ ಕಾರ್ಯ ಬಿಟ್ಟು ಬ್ಯಾಂಕ್‌ಗಳ ಮುಂದೆ ಕ್ಯೂ ನಿಲ್ಲುವಂತಾಗಿದೆ.

ಮುದ್ರಣ ದೋಷ: ಸಾರ್ವಜನಿಕ ಶಿಕ್ಷಣ ಇಲಾಖೆಯು 2018-19ನೇ ಸಾಲಿಗೆ ಎಲ್‌ಕೆಜಿಯಿಂದ ಉಚಿತ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಶೇ.25 ಬಡ ಮಕ್ಕಳ ಪ್ರವೇಶಕ್ಕೆ ಆದೇಶ ನೀಡಿದೆ. ಪೋಷಕರು ಆರ್‌ಟಿಇನಡಿ ಅರ್ಜಿ ಸಲ್ಲಿಸುವ ವೇಳೆ ಆಧಾರ್‌ ಕಾರ್ಡ್‌ ಸಲ್ಲಿಕೆ ಕಡ್ಡಾಯ ವಾಗಿದ್ದು, ಆದರೆ, ಶಾಲೆಗೆ ಸೇರಿಸುವ ಮಕ್ಕಳ ಹೆಸರು ಮುದ್ರಣ ದೋಷದಿಂದ ಆಧಾರ್‌ ಕಾರ್ಡ್‌ಗಳಲ್ಲಿ ತಪ್ಪಾಗಿ ಮುದ್ರಣಗೊಂಡಿರುವುದರಿಂದ ಆಧಾರ್‌ ತಿದ್ದುಪಡಿಗಾಗಿ ಪೋಷಕರು ಇನ್ನಿಲ್ಲದ ರೀತಿಯಲ್ಲಿ ಪ್ರಯಾಸ ಪಡೆಯುತ್ತಿದ್ದಾರೆ.

2 ಬ್ಯಾಂಕ್‌ನಲ್ಲಿ ಮಾತ್ರ ಅವಕಾಶ: ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಿಕೊಳ್ಳಲು ಪೋಷಕರಿಗೆ ಅವಕಾಶ
ನೀಡಲಾಗಿದ್ದರೂ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮಾತ್ರ ಕೆಲ ಬ್ಯಾಂಕ್‌ಗಳಲ್ಲಿ ಈ ಅವಕಾಶ ಕಲ್ಪಿಸಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿ ಪೋಷಕರು ಬೆಳಗ್ಗೆ ಬ್ಯಾಂಕ್‌ಗಳ ಮುಂದೆ ತಿದ್ದುಪಡಿಗಾಗಿ ಕ್ಯೂ ನಿಲ್ಲು ವಂತಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬಿಬಿ ರಸ್ತೆಯ ಎಸ್‌ ಬಿಐ ಹಾಗೂ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ನಲ್ಲಿ ಮಾತ್ರ ಆಧಾರ್‌ ತಿದ್ದುಪಡಿಗೆ ಅವಕಾಶ ನೀಡಿ ರುವುದರಿಂದ ಜಿಲ್ಲೆಯ ವಿವಿಧಡೆಗಳಿಂದ ನೂರಾರು ಪೋಷಕರು ತಮ್ಮ ಮಕ್ಕಳ ಸಮೇತ ಊಟ, ತಿಂಡಿ ಬಿಟ್ಟು ಬ್ಯಾಂಕ್‌ಗಳ ಮುಂದೆ ನಿಲ್ಲುತ್ತಿದ್ದಾರೆ. ಸದ್ಯ
ಬಿಸಿಲಿನ ಆರ್ಭಟ ಜಿಲ್ಲೆಯಲ್ಲಿ ಹೆಚ್ಚಾಗಿರುವುದರಿಂದ ಪುಟ್ಟ ಪುಟ್ಟ ಮಕ್ಕಳೊಂದಿಗೆ ಪೋಷಕರು ಬ್ಯಾಂಕುಗಳ ಮುಂದೆ ಊರಿ ಬಿಸಿಲಲ್ಲಿ ಸಾಲುಗಟ್ಟಿ ನಿಂತಿರುವುದು ಸಾಮಾನ್ಯವಾಗಿದೆ.

ಹೆಚ್ಚುವರಿ ಕೇಂದ್ರ ತೆರೆಯಿರಿ: ಮುದ್ರಣ ದೋಷ ದಿಂದ ಆಧಾರ್‌ ಕಾರ್ಡ್‌ಗಳಲ್ಲಿ ಸಾಕಷ್ಟು ಮಕ್ಕಳ ಹೆಸರು ವ್ಯತ್ಯಾಸಗೊಂಡಿದ್ದು, ತಿದ್ದುಪಡಿಗಾಗಿ ನೂರಾರು ಸಂಖ್ಯೆಯಲ್ಲಿ ಪೋಷಕರು ಬ್ಯಾಂಕ್‌ಗಳಿಗೆ ಲಗ್ಗೆ ಇಟ್ಟರೂ ಮುಗಿಯುತ್ತಿಲ್ಲ. ಇದರಿಂದ ಆರ್‌ ಟಿಇಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಸಮೀಪಿಸುತ್ತಿ ರುವುದರಿಂದ ಪೋಷಕರು ಆತಂಕಗೊಂಡಿದ್ದಾರೆ.

ಆದರೆ, ಆಧಾರ್‌ ತಿದ್ದುಪಡಿಗಾಗಿ ಪೋಷಕರು ಜಿಲ್ಲೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಜಿಲ್ಲಾಡಳಿತ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿರುವುದು ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಆಧಾರ್‌ ತಿದ್ದುಪಡಿಗೆ ಕೇವಲ ಎರಡು ಬ್ಯಾಂಕ್‌ಗೆ ಮಾತ್ರ ಅವಕಾಶ ನೀಡುವ ಬದಲು ಅಯಾ ಗ್ರಾಪಂ ಕೇಂದ್ರಗಳಲ್ಲಿ ತಿದ್ದುಪಡಿಗೆ ಅರ್ಜಿ
ಸಲ್ಲಿಸಲು ಅವಕಾಶ ನೀಡಿದರೆ ಅನುಕೂಲವಾಗುತ್ತದೆ ಎಂದು ಪೋಷಕರು ಆಗ್ರಹಿಸಿದ್ದಾರೆ.

ಆರ್‌ಟಿಇ ಸೀಟು ಕೈ ತಪುವ ಆತಂಕ 
ಮಗನನ್ನು ಆರ್‌ಟಿಇನಡಿ ಶಾಲೆಗೆ ಸೇರಿಸಬೇಕು. ಆಧಾರ್‌ ಕಾರ್ಡ್‌ನಲ್ಲಿ ಹೆಸರು ತಪ್ಪಿದೆ. ತಿದ್ದುಪಡಿಗೆ ಅರ್ಜಿ ಸಲ್ಲಿಸಲಿಕ್ಕೆ ಮಂಚೇನಹಳ್ಳಿಯಿಂದ ಬಂದಿದ್ದೇನೆ. ಆದರೆ, ಇಲ್ಲಿ ನೋಡಿದರೆ ಜನ ತುಂಬಿ ಹೋಗಿದ್ದಾರೆ.

ತಿದ್ದುಪಡಿಗೆ ಸಿಮೀತವಾಗಿ ಅರ್ಜಿಗಳನ್ನು ಸ್ವೀಕರಿಸುತ್ತಿದ್ದಾರೆ. ಇವತ್ತು ಅರ್ಜಿ ಸಲ್ಲಿಸಕ್ಕೆ ಆಗಲ್ಲ ಅಂತ ವಾಪಸ್‌ ಹೋಗುತ್ತಿದ್ದೇನೆಂದು ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಿಂದ ಆಗಮಿಸಿದ್ದ ಪ್ರಕಾಶ್‌ ಅಳಲು ತೋಡಿಕೊಂಡರು. ಗ್ರಾಪಂ ಕೇಂದ್ರದಲ್ಲಿ ತಿದ್ದುಪಡಿ ಅರ್ಜಿ ಸ್ವೀಕರಿಸಿದರೆ ನಮಗೆ ಅನುಕೂಲವಾಗುತ್ತದೆ ಎಂದರು.

ಆಧಾರ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ ವಾರಕ್ಕೆ ಫ‌ಲಾನುಭವಿಗಳಿಗೆ ಹೊಸ ಕಾರ್ಡ್‌ ಸಿಗುತ್ತದೆ. ಆದರೆ ತಿದ್ದುಪಡಿಗೆ ಅರ್ಜಿ
ಹಾಕಲಿಕ್ಕೆ ಸಾಧ್ಯವಾಗದೇ ಎಷ್ಟೋ ಪೋಷಕರು ತಮ್ಮ ಮಕ್ಕಳ ಆರ್‌ಟಿಇ ಪ್ರವೇಶದಿಂದ ವಂಚಿತರಾಗುವ
ಆತಂಕದಲ್ಲಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.