ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ ದಂಡ ಹಾಕಿ
Team Udayavani, Jul 11, 2020, 6:27 AM IST
ಚಿಂತಾಮಣಿ: ಕೋವಿಡ್ 19 ವೈರಸ್ ಹರಡದಂತೆ ತಡಗೆಟ್ಟುವ ನಿಟ್ಟಿನಲ್ಲಿ ಪ್ರತಿ ಯೊಬ್ಬರು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮುಂದಾ ಗಬೇಕು. ಮಾಸ್ಕ್ ಹಾಕದೇ ಹಾಗೂ ಅಂಗಡಿ ಗಳ ಬಳಿ ಸಾಮಾಜಿಕ ಅಂತರ ಕಾಪಾಡಿ ಕೊಳ್ಳದ ಅಂಗಡಿ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ದಂಡ ಹಾಕುವಂತೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಹಾಗೂ ತಾಲೂಕಿನಾದ್ಯಂತಹ ದಿನೇ ದಿನೆ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಚಿಂತಾಮಣಿ ನಗರ ಹಾಗೂ ತಾಲೂಕಿನಾದ್ಯಂತಹ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಆರೋಗ್ಯ ಇಲಾಖೆ ಯವರು ಕೋವಿಡ್ 19 ಟೆಸ್ಟ್ ಮಾಡಿಸಿಕೊಳ್ಳಲು ಬರುವವರಿಗೆ, ವರದಿ ಬರುವವರೆಗೂ ಅವರಿಗೆ ಎಲ್ಲೂ ಮನೆಯಲ್ಲಿ ಇರುವಂತೆ ತಿಳಿಸಬೇಕು.
ಕ್ವಾರಂಟೈನ್ ಮಾಡಿರು ವವರಿಗೆ ಅಗತ್ಯ ಸೌಲಭ್ಯ ಒದಗಿಸಲು ಮುಂದಾಗ ಬೇಕೆಂದರು. ಒಬ್ಬ ವ್ಯಕ್ತಿಗೆ ಒಂದು ಬಾರಿ ಪಾಸಿಟಿವ್ ಬಂದ ನಂತರ ಮತ್ತೂಂದು ಬಾರಿ ಟೆಸ್ಟ್ ಗೆ ಅವಕಾಶ ನೀಡಬಾರದು. ಅಂತಹ ವರನ್ನು ಕೋವಿಡ್ ಜಿಲ್ಲಾಸ್ಪತ್ರೆಗೆ ಸಾಗಿಸಬೇ ಕೆಂದರು. ತಹಶೀಲ್ದಾರ್ ಹನುಮಂತ ರಾಯಪ್ಪ, ಕೋವಿಡ್ 19 ನೋಡಲ್ ಅಧಿಕಾರಿ ಪ್ರಸಾದ್, ಡಿವೈಎಸ್ಪಿ ಶ್ರೀನಿವಾಸ್, ಇಒ ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ನಗರ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ಆನಂದಕುಮಾರ್, ಗ್ರಾಮಾಂತರ ಠಾಣೆಯ ಸಿಐ ಶ್ರೀನಿವಾಸಪ್ಪ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ