ಲಸಿಕೆ ಪಡೆಯಲು ಬೆಂಗಳೂರಿಂದ ಬಂದ ಜನ
Team Udayavani, May 11, 2021, 2:09 PM IST
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಾವ ಇರುವ ಕಾರಣ, ಹತ್ತಿರದ ಜಿಲ್ಲೆಗಳಲ್ಲಿ ಪಡೆಯಲು ಮುಗಿಬೀಳುತ್ತಿದ್ದಾರೆ. ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡವರು ಒಮ್ಮೆಲೆ ಕಾರುಗಳಲ್ಲಿ ನೂರಾರು ಮಂದಿ ಆಗಮಿಸುತ್ತಿರುವುದನ್ನು ಕಂಡು ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 18ರಿಂದ 45 ವರ್ಷದೊಳಗಿನವರು ಲಸಿಕೆ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಮೊದಲು ಕೋವಿಡ್ ಆ್ಯಪ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಲಸಿಕೆ ಅಲಭ್ಯತೆ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಗೆ ಬೆಂಗಳೂರಿಗರು ಲಗ್ಗೆ ಇಡುತ್ತಿದ್ದಾರೆ. ಕೋವಿನ್ ಆ್ಯಪ್ನಲ್ಲಿ ಎಲ್ಲಿ ಲಸಿಕೆ ಲಭ್ಯತೆ ಇರುತ್ತದೆಯೋ ಅಲ್ಲಿ ಲಸಿಕೆ ಪಡೆಯಲು ರಿಜಿಸ್ಟರ್ ಮಾಡಿಕೊಳ್ಳಬಹುದು.
ಹೀಗಾಗಿ ಬೆಂಗಳೂರಿಗರು ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಶಿಡ್ಲಘಟ್ಟ ತಾಲೂಕಿನಲ್ಲಿ ಲಸಿಕೆ ಪಡೆಯಲು ರಿಜಿಸ್ಟರ್ಮಾಡಿಕೊಂಡಿದ್ದಾರೆ. ಹಾಗಾಗಿ ಬೆಳಗ್ಗಿನಿಂದಲೂ ನೂರಾರು ಮಂದಿ ಆಗಮಿಸಿ ಲಸಿಕೆ ಪಡೆದುಕೊಂಡು ಹೋಗುತ್ತಿದ್ದಾರೆ.
ಸ್ಥಳೀಯರ ಆಕ್ರೋಶ: ಇತ್ತ ಬೆಂಗಳೂರಿಂದ ಬಂದು ಲಸಿಕೆ ಹಾಕಿಸಿಕೊಳ್ಳುತ್ತಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಮಗೇ ಲಸಿಕೆ ಸಿಗಲ್ಲ. ನೀವು ಏಕೆ ಇಲ್ಲಿ ಬರ್ತೀರಾ ಎಂದು ಹೇಳುತ್ತಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಸೋಂಕು ಹೆಚ್ಚುತ್ತಿದೆ. ಇದರಿಂದ ಸ್ಥಳೀಯರಿಗೂ ಹರಡುವ ಆತಂಕವಿದೆ. ಲಸಿಕೆ ಪಡೆಯುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ ಎಂಬ ದೂರು ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್