ಸಮಸ್ಯೆ ನಿವಾರಣೆಗೆ ಫೋನ್ಇನ್ ಕಾರ್ಯಕ್ರಮ
ಸರ್ಕಾರದ ಸವಲತ್ತುಗಳು ಸಾರ್ವಜನಿಕರ ಮನೆ ಬಾಗಿಲಿಗೆ: ತಹಶೀಲ್ದಾರ್ ದಯಾನಂದ್
Team Udayavani, Aug 18, 2019, 3:34 PM IST
ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಫೋನ್ಇನ್ ಕಾರ್ಯಕ್ರಮದ ಮೂಲಕ ತಹಶೀಲ್ದಾರ್ ಎಂ.ದಯಾನಂದ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಶಿಡ್ಲಘಟ್ಟ: ತಾಲೂಕಿನಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಂದಾಯ ಇಲಾಖೆಯ ಸೇವೆ ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಹಶೀಲ್ದಾರ್ ಎಂ. ದಯಾನಂದ್ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ಫೋನ್ಇನ್ ಕಾರ್ಯಕ್ರಮದಲ್ಲಿ ಕರೆಗಳನ್ನು ಸ್ವೀಕರಿಸಿ ಮಾತ ನಾಡಿದ ಅವರು, ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡುವ ಸಲುವಾಗಿ ಅನೇಕ ಕಾರ್ಯಕ್ರಮ ಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗು ತ್ತದೆ.
ಪರಿಣಾಮಕಾರಿ ಅನುಷ್ಠಾನ: ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮಾಸಾಶನ ಮಂಜೂರು ಮಾಡಲು ಪಿಂಚಣಿ ಅದಾಲತ್ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಕಂದಾಯ ಅದಾಲತ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.
ಮಾಸಾಶನ ನೀಡಲು ಲಂಚ: ನಗರದ ಕೃಷ್ಣಮೂರ್ತಿ ಕರೆ ಮಾಡಿ ಪಿಂಚಣಿ ಹಣ ನೀಡಲು ಅಂಚೆ ಪೇದೆಗಳು ಅಕ್ರಮವಾಗಿ ಹಣ ಸ್ವೀಕಾರ ಮಾಡುತ್ತಿದ್ದಾರೆ ಎಂದು ದೂರು ನೀಡಿದರು. ಇದಕ್ಕೆ ಸ್ಪಂದಿಸಿದ ತಾಲೂಕು ದಂಡಾಧಿ ಕಾರಿಗಳು, ಫಲಾನುಭವಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆ ತೆರೆದು ಆಧಾರ್ ಲಿಂಕ್ ಮಾಡಿದರೆ ನೇರವಾಗಿ ಫಲಾನುಭವಿಗಳ ಖಾತೆ ಜಮಾ ಆಗಲಿದೆ ಎಂದು ಸಲಹೆ ನೀಡಿದರು.
ಸ್ಮಶಾನಕ್ಕೆ ಸಂಬಂಧಿಸಿ ದೂರು: ಎದ್ದಲತಿಪ್ಪೇನಹಳ್ಳಿ ಸುರೇಶ್, ಸಾರ್ವಜನಿಕ ಸ್ಮಶಾನದ ಕುರಿತು ದೂರು ನೀಡಿದಾಗ ಈ ಸಂಬಂಧ ಪ್ರಸ್ತಾವನೆ ಉಪವಿಭಾ ಗಾಧಿಕ ಞಾರಿಗಳಿಗೆ ಕಳುಹಿಸಲಾಗುತ್ತದೆ ಎಂದರು.
ಬಚ್ಚಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲ ಎಂಬ ದೂರಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕೆಂದು ರಾಜಸ್ವ ನಿರೀಕ್ಷಕರಿಗೆ ಸೂಚನೆ ನೀಡಿದರು
ಕೆ.ಕೆ.ಪೇಟೆಯಿಂದ ಕರೆ ಮಾಡಿದ ನಾಗರಿಕರಿಬ್ಬರು ಮನೆಯೊಂದರ ಜಾಗ ಒತ್ತುವರಿ ಮಾಡಿಕೊಂಡಿ ದ್ದಾರೆ. ಅದನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದರು. ಮತ್ತೂಂದೆಡೆ ಕದಿರಿಪಾಳ್ಯದ ವೆಂಕಟೇಶ್ ಎಂಬುವರು 22 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ .ಇದರಿಂದ ಕೂಲಿಕಾರ್ಮಿಕರಿಗೆ ಸಮಸ್ಯೆಯಾಗಿದೆ ಎಂದು ದೂರು ಸಲ್ಲಿಸಿದರು. ನಗರಸಭೆಯ ಪೌರಾಯುಕ್ತರು ಈ ಸಮಸ್ಯೆ ಬಗೆಹರಿಸಬೇಕಾಗಿದೆ. ಆದರೂ ಸಹ ತಾವು ನಗರಸಭೆಯ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.
ಶಿಡ್ಲಘಟ್ಟ ನಗರ ಪ್ರದೇಶದಲ್ಲಿ ಆಧಾರ್ ನೋಂದಣಿ ಕೇಂದ್ರ ಆರಂಭಿಸಲು ಮತ್ತು ವಾರ್ಡ್ ಮಟ್ಟದಲ್ಲಿ ಪಿಂಚಣಿ ಅದಾಲತ್ ನಡೆಸಬೇಕೆಂದು ಕರ್ನಾಟಕ ವಿಶ್ವನಿರ್ಮಾಣ ಸೇನೆಯ ಪದಾಧಿಕಾರಿ ಬಾಬುಹುಸೇನ್ ಮನವಿಗೆ ಸ್ಪಂದಿಸಿದ ತಾಲೂಕು ದಂಡಾಧಿಕಾರಿಗಳು, ತಾಲೂಕು ಕಚೇರಿಯಲ್ಲಿ ಆಧಾರ್ ನೋಂದಣಿ ಕೇಂದ್ರ ಆರಂಭಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ್ ಗ್ರೇಡ್-2 ಹನುಮಂತರಾವ್, ಉಪ ತಹಶೀಲ್ದಾರ್ ಮಂಜುನಾಥ್, ಕಸಬಾ ರಾಜಸ್ವ ನಿರೀಕ್ಷಕ ವಿಶ್ವನಾಥ್, ಶಿರಸ್ತೇದಾರ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಪ್ರೀತಂ, ಆಹಾರ ನಿರೀಕ್ಷಕ ನಾರಾಯಣಸ್ವಾಮಿ, ಜಂಗಮಕೋಟೆ ಹೋಬಳಿ ರಾಜಸ್ವ ನಿರೀಕ್ಷಕ ಸುಪ್ರೀತ್, ಬಶೆಟ್ಟಿಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ