ನಂದಿಬೆಟ್ಟದಲ್ಲಿ ಜೂ.5ರಿಂದ ಪ್ಲಾಸ್ಟಿಕ್‌ ನಿಷೇಧ


Team Udayavani, May 31, 2018, 6:30 AM IST

ban31051806medn-new.jpg

ಚಿಕ್ಕಬಳ್ಳಾಪುರ: ಬರುವ ಜೂನ್‌ 5, ವಿಶ್ವ ಪರಿಸರ ದಿನದಿಂದ ಜಿಲ್ಲೆಯ ವಿಶ್ವವಿಖ್ಯಾತ ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಜಿಲ್ಲಾಡಳಿತ ಮುಂದಾಗಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗಿರಿಧಾಮದ ಪ್ರಾಕೃತಿಕ ಸೌಂದರ್ಯಕ್ಕೆ ಘಾಸಿ ಮಾಡುತ್ತಿರುವ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ಇದರ ಮುಖ್ಯ ಉದ್ದೇಶ.

ಪ್ರೇಮಿಗಳ ಪಾಲಿನ ನೆಚ್ಚಿನ ತಾಣ, ಪರಿಸರ ಪ್ರಿಯರ ಅಚ್ಚುಮೆಚ್ಚಿನ ತಾಣವಾದ ನಂದಿ ಗಿರಿಧಾಮಕ್ಕೆ ಕಾನೂನಾತ್ಮಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ ಮೂಲಕ ಗಿರಿಧಾಮದ ಪ್ರಾಕೃತಿಕ ಸೊಬಗನ್ನು ಭವಿಷ್ಯದ ಪೀಳಿಗೆಗೆ ಉಳಿಸಬೇಕೆಂಬ ನಿಟ್ಟಿನಲ್ಲಿ ಪಣತೊಟ್ಟು ಖ್ಯಾತ ಪರಿಸರವಾದಿ ಡಾ. ಯಲ್ಲಪ್ಪರೆಡ್ಡಿ ನೇತೃತ್ವದಲ್ಲಿ ಪರಿಸರ ಚಿಂತಕರ ತಂಡ ಕಾನೂನು ಸಮರಕ್ಕೆ ಸಜ್ಜಾಗುತ್ತಿದೆ. ಇದರ ಬೆನ್ನಲ್ಲೇ ಜಿಲ್ಲಾಡಳಿತ ಕೂಡ ಇಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಮುಂದಾಗಿದೆ. ಸರಿ ಸುಮಾರು 90 ಎಕರೆ ವಿಸ್ತೀಣದಲ್ಲಿರುವ ನಂದಿಗಿರಿಧಾಮ, ಐತಿಹಾಸಿಕವಾಗಿ ಅನೇಕ ವೈಶಿಷ್ಟéತೆಯ ಕುರುಹಗಳಿಗೆ ಸಾಕ್ಷಿಯಾಗಿ ನಿಂತಿದ್ದು, ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಈಗ ಜಿಲ್ಲಾಡಳಿತ ಇಕೋ ಟೂರಿಸಂನ್ನು ಬಲವರ್ಧನೆಗೊಳಿಸುವ ದಿಸೆಯಲ್ಲಿ ದಿಟ್ಟ ಹೆಜ್ಜೆ ಇಡುತ್ತಿದೆ.

ಸಮುದ್ರಮಟ್ಟದಿಂದ ಬರೋಬ್ಬರಿ 4,851 ಅಡಿಗಳಷ್ಟು ಎತ್ತರಕ್ಕೆ, ಏಕಶಿಲೆಯಿಂದ ರೂಪುಗೊಂಡಿರುವ ನಂದಿಬೆಟ್ಟದ ಸೌಂದರ್ಯಕ್ಕೆ ಧಕ್ಕೆ ತರುವ ಕೆಲಸಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಗಿರಿಧಾಮದ ಸುತ್ತ ನಡೆಯುತ್ತಿರುವ ಅಕ್ರಮ
ಗಣಿಗಾರಿಕೆ, ಖಾಸಗಿ ರೆಸಾರ್ಟ್‌ಗಳ ಹಾವಳಿಯಿಂದ ಹಾಗೂ ಪ್ರವಾಸಿಗರು ಯಾವುದೇ ಅಡೆತಡೆ ಇಲ್ಲದೆ ಬಳಸುತ್ತಿರುವ ಪ್ಲಾಸ್ಟಿಕ್‌ ಕೈ ಚೀಲಗಳು, ತಿಂದು ಬಿಸಾಡಿದ ಆಹಾರದ ಪ್ಯಾಕೇಟ್‌ಗಳು, ನೀರಿನ ಬಾಟಲುಗಳಿಂದ ಗಿರಿಧಾಮದಲ್ಲಿ ಎತ್ತ ನೋಡಿದರೂ ಕಸದ ರಾಶಿಗಳು ಬಿದ್ದಿವೆ.

ಇದರಿಂದಾಗಿ ಕಸದ ಸಮಸ್ಯೆ ಬೆಟ್ಟದ ಮೇಲೆ ಬೃಹದಾಕಾರವಾಗಿ ಬೆಳೆದು, ಗಿರಿಧಾಮದ ಸೌಂದರ್ಯಕ್ಕೆ ಕಂಟಕವಾಗಿದೆ.

ಗಿರಿಧಾಮ ಸದ್ಬಳಕೆಗಿಂತ ದುರ್ಬಳಕೆಗೆ ಹೆಚ್ಚಾಗಿ ಬಳಕೆಯಾಗುತ್ತಿರುವುದು ಪರಿಸರವಾದಿಗಳ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ, ಕಸದ ವಿಲೇವಾರಿ ಕೂಡ ಗಿರಿಧಾಮದ ನಿರ್ವಹಣೆಯ ಹೊಣೆ ಹೊತ್ತಿರುವ ತೋಟಗಾರಿಕೆ ಇಲಾಖೆಗೆ ದೊಡ್ಡ ಸವಾಲಾಗುತ್ತಿದೆ. ಹೀಗಾಗಿ, ಗಿರಿಧಾಮದಲ್ಲಿ ಜೂನ್‌ 5, ವಿಶ್ವ ಪರಿಸರ ದಿನದಿಂದ ಪ್ರವಾಸಿಗರು ಬಳಕೆ ಮಾಡುವ ಎಲ್ಲಾ ರೀತಿಯ ಪ್ಲಾಸ್ಟಿಕ್‌ ನಿಷೇಧಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಈಗಾಗಲೇ ಇದಕ್ಕೆ ಪೂರ್ವ ಸಿದ್ದತೆಗಳನ್ನು ಮಾಡಿ ಕೊಂಡಿರುವ ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಿ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಪ್ರವಾಸಿಗರಲ್ಲಿ ಈಗನಿಂದಲೇ ಅರಿವು ಮೂಡಿಸುವ ಕೆಲಸ ಆರಂಭಿಸಿದೆ.

ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಲಾಗುತ್ತಿದೆ. ಪ್ರವಾಸಿಗರು ಪ್ಲಾಸ್ಟಿಕ್‌ ಬಳಕೆ ಮಾಡುವುದು
ಕಂಡು ಬಂದರೆ ದಂಡ ವಿಧಿಸುವುದು ಮಾತ್ರವಲ್ಲ, ಕಾನೂನುಬದ್ಧವಾಗಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

– ದೀಪ್ತಿ ಕಾನಡೆ, ಜಿಲ್ಲಾಧಿಕಾರಿ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.