ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ: ಮುಖ್ಯ ಪೊಲೀಸ್ ಪೇದೆ ಸಾವು
Team Udayavani, May 2, 2021, 12:17 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಮಾಡುತ್ತಿದೆ. ಮತ್ತೊಂದೆಡೆ ಕೋವಿಡ್ ರಣಕೇಕೆ ಹಾಡುತ್ತಿದೆ.
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಜನರಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಆರ್ ಲತಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಅವರು ಜಿಲ್ಲೆಯಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣವಾಗಿ ಅನುಷ್ಠಾನಗೊಳಿಸುವ ಜೊತೆಗೆ ಜನರಲ್ಲಿ ಸೋಂಕಿನ ಕುರಿತು ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸುತ್ತಿದ್ದಾರೆ.
ಇದನ್ನೂ ಓದಿ: ಮಸ್ಕಿಯಲ್ಲಿ ‘ಪ್ರತಾಪ’ ತೋರಿದ ತುರುವಿನಹಾಳ: ಕಮಲ ಪಕ್ಷದ ಆಪರೇಶನ್ ಗೆ ಹಿನ್ನಡೆ?
ಆದರೆ ಜನರ ನಿರ್ಲಕ್ಷದಿಂದ ಜಿಲ್ಲೆಯಲ್ಲಿ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆಗಾಗಿ ಮೀಸಲಿಟ್ಟಿರುವ ಹಾಸಿಗೆಗಳು ಬಹುತೇಕ ಭರ್ತಿಯಾಗಿದ್ದು ,ಇದೇ ರೀತಿ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಜಿಲ್ಲೆಯಲ್ಲಿ ಹಾಸಿಗೆಗಳ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಮನೆಮಾಡಿದೆ.
ಜಿಲ್ಲೆಯ ಮಂಚೇನಹಳ್ಳಿ ಠಾಣೆಯಲ್ಲಿ ಮುಖ್ಯ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಲೋಕೇಶ್ ಯಾದವ್ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ