ಜಿಲ್ಲಾದ್ಯಂತ ಖಾಕಿ ಕಣ್ಗಾವಲು


Team Udayavani, Apr 18, 2019, 3:00 AM IST

jilladyanta

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸ್‌ ಇಲಾಖೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತವಾಗಿ ಹೈಲರ್ಟ್‌ ಘೋಷಿಸಿದ್ದು, ಕೇಂದ್ರ ಮೀಸಲು ಅರೆ ಸೇನಾ ಪಡೆ ಸೇರಿದಂತೆ ಸುಮಾರು 2500 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಚುನಾವಣಾ ಬಂದೋಬಸ್ತ್ಗೆ ನಿಯೋಜಿಸಲಾಗಿದೆ.

ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಬರೋಬ್ಬರಿ 1,285 ಮತಗಟ್ಟೆ ಕೇಂದ್ರಗಳಿದ್ದು, ಮತದಾನದ ವೇಳೆ ಯಾವುದೇ ರಾಜಕೀಯ ಸಂಘರ್ಷ ನಡೆಯದಂತೆ ಪೊಲೀಸ್‌ ಇಲಾಖೆ ಹದ್ದಿನ ಕಣ್ಣು ಇಟ್ಟು ಜಿಲ್ಲೆಯಲ್ಲಿ ಅತೀ ಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಿಗೆ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಿದೆ.

ಗೌರಿಬಿದನೂರು: ಜಿಲ್ಲೆಯಲ್ಲಿ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿರುವ ಪೊಲೀಸ್‌ ಇಲಾಖೆ ಜಿಲ್ಲೆಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಗೌರಿಬಿದನೂರು ತಾಲೂಕಿಗೆ 2 ಡಿವೈಎಸ್‌ಪಿ, 3 ಸಿಪಿಐ, 4 ಪಿಎಸ್‌ಐ, 10 ಎಎಸ್‌ಐ, ಎಚ್‌ಸಿ 31, 132 ಪಿಸಿ ಹಾಗೂ 160 ಮಂದಿ ಗೃಹ ರಕ್ಷಕರು ಸೇರಿ ಒಟ್ಟು 342 ಮಂದಿಯನ್ನು ನಿಯೋಜಿಸಿದೆ.

ಬಾಗೇಪಲ್ಲಿ: ತಾಲೂಕಿಗೆ 1 ಡಿವೈಎಸ್‌ಪಿ, 4 ಸಿಪಿಐ, 17 ಪಿಎಸ್‌ಐ, 17 ಎಎಸ್‌ಐ, 51 ಎಚ್‌ಸಿ, 147 ಪಿಸಿ ಹಾಗೂ 195 ಗೃಹ ರಕ್ಷಕರು ಸೇರಿ ಒಟ್ಟು 419 ಮಂದಿಯನ್ನು ನಿಯೋಜಿಸಲಾಗಿದೆ.

ಚಿಕ್ಕಬಳ್ಳಾಪುರ: ತಾಲೂಕಿಗೆ 1 ಡಿವೈಎಸ್‌ಪಿ, 4 ಸಿಪಿಐ, 6 ಪಿಎಸ್‌ಐ, 34 ಎಎಸ್‌ಐ, 65 ಎಚ್‌ಸಿ, 133 ಪಿಸಿ, 191 ಗೃಹ ರಕ್ಷಕರು ಸೇರಿ ಒಟ್ಟು 434 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿಡ್ಲಘಟ್ಟ: ತಾಲೂಕಿನಲ್ಲಿ 1 ಡಿವೈಎಸ್‌ಪಿ, 3 ಸಿಪಿಐ, 4 ಪಿಎಸ್‌ಐ, 10 ಎಎಸ್‌ಐ, 58 ಎಚ್‌ಸಿ, 137 ಪಿಸಿ, 177 ಗೃಹ ರಕ್ಷಕರು ಸೇರಿ ಒಟ್ಟು 390 ಮಂದಿಯನ್ನು ನಿಯೋಜಿಸಲಾಗಿದೆ.

ಚಿಂತಾಮಣಿ: ತಾಲೂಕಿಗೆ 1, ಡಿವೈಎಸ್‌ಪಿ, 4 ಸಿಪಿಐ, 4 ಪಿಎಸ್‌ಐ, 19 ಎಎಸ್‌ಐ, 78 ಎಚ್‌ಸಿ, 148 ಪಿಸಿ, 124 ಗೃಹ ರಕ್ಷಕರು ಸೇರಿ ಒಟ್ಟು 378 ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು ತಿಳಿಸಿದ್ದಾರೆ.

ವಿವಿಧ ತಂಡಗಳ ರಚನೆ: ಮತದಾನದ ವೇಳೆ ಎದುರಾಗುವ ಅಥವಾ ಸಂಭವಿಸುವ ಅಹಿತಕರ ಘಟನೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಲು ಪೊಲೀಸ್‌ ಇಲಾಖೆ ವಿವಿಧ ತಂಡಗಳನ್ನು ರಚಿಸಿದೆ.

ಜಿಲ್ಲೆಯಲ್ಲಿ 4 ಸೆಕ್ಟರ್‌ ಮೊಬೈಲ್‌ ತಂಡ, 4 ಮೇಲ್ವಿಚಾರಣ ಮೊಬೈಲ್‌ ತಂಡಗಳನ್ನು ಮುಖ್ಯ ಪೊಲೀಸ್‌ ಪೇದೆ ಹಾಗೂ ಗೃಹ ರಕ್ಷಕರನ್ನು ಒಳಗೊಂಡಂತೆ ರಚಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ನಡೆಸಿ ಮತದಾನದ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಿವೆ.

ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ 6 ಡಿವೈಎಸ್‌ಪಿ, 18 ಸಿಪಿಐ, 22 ಪಿಎಸ್‌ಐ, 90 ಎಎಸ್‌ಐ, 283 ಮುಖ್ಯ ಪೊಲೀಸ್‌ ಪೇದೆ, 697 ಪೇದೆ ಹಾಗೂ 847 ಮಂದಿ ಗೃಹ ರಕ್ಷಕರು ಸೇರಿ ಒಟ್ಟು 1,963 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ 9, 5 ಕೆಎಸ್‌ಆರ್‌ಪಿ ಹಾಗೂ ಎರಡು ಕೇಂದ್ರ ಮೀಸಲು ಅರೆ ಸೇನಾ ಪಡೆಗಳನ್ನು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ.
-ಕೆ.ಸಂತೋಷಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.