ಕಮಲಾಪುರದಲ್ಲಿ ಮಡಿಕೆ ತಯಾರಿಕೆ ಕಮಾಲ್


Team Udayavani, May 10, 2019, 12:53 PM IST

chikk-4

ಗೌರಿಬಿದನೂರು: ಪುರಾಣಗಳ ಕಾಲದಿಂದಲೂ ಮಾನವನ ನಾಗರಿಕತೆ ಬೆಳೆಯುತ್ತಾ ಬಂದಿರುವುದೇ ಮಣ್ಣಿನ ಮಡಿಕೆಗಳಿಂದ ಎನ್ನಬಹುದು. ಆಧುನಿಕತೆಯ ಜೀವನ ಶೈಲಿಯಲ್ಲಿ ತಾಮ್ರದ ಪಾತ್ರೆಗಳು, ಇಂಡಾಲಿಯಂ ಪಾತ್ರೆಗಳು, ಸ್ಟೀಲ್ ಪಾತ್ರೆಗಳಿಗೆ ಒಗ್ಗಿಕೊಂಡು ನಮಗೆ ಹಲವಾರು ದಶಕಗಳೇ ಕಳೆದಿದ್ದರೂ ತಣ್ಣನೆಯ ನೀರನ್ನು ಕುಡಿಯಲು ಫ್ರಿಡ್ಜ್ಗಿಂತಲೂ ಇಂದಿಗೂ ಮಣ್ಣಿನ ಮಡಿಕೆಯನ್ನೇ ಅವಲಂಬಿಸಿದ್ದೇವೆ.

ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಉಚಿತವಾಗಿ ಕುಡಿಯಲು ನೀರಿನ ಅರವಟಿಗೆಗಳನ್ನು ಸ್ಥಾಪಿಸಿ ಅದರಲ್ಲಿ ಮಣ್ಣಿನ ಮಡಿಕೆಗಳನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಈಗಾಗಲೇ ಮೂಲೆ ಗುಂಪಾಗಿರುವ ಕುಂಬಾರಿಕೆ ಗೌರಿಬಿದನೂರು ತಾಲೂಕಿನಲ್ಲಿ ಅಳಿದುಳಿದಿದೆ ಎನ್ನಬಹುದಾಗಿದೆ.

ರಾಜ್ಯ ಹೆದ್ದಾರಿ ಬೆಂಗಳೂರು ರಸ್ತೆಯಲ್ಲಿ ಬರುವ ತೊಂಡೇಬಾವಿ ಹೋಬಳಿಯಲ್ಲಿ ಕಮಲಾಪುರ ಎಂಬ ಪುಟ್ಟಗ್ರಾಮವಿದ್ದು, ಈ ಗ್ರಾಮದಲ್ಲಿ ಹಿಂದೆ ಸುಮಾರು 30 ಕುಟುಂಬಗಳು ಇದ್ದವು. ಪ್ರಸ್ತುತ ಇರುವ ಕೆಲವೇ ಕುಟುಂಬಗಳು ಮಡಿಕೆಗಳನ್ನು ತಯಾರಿಕೆ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ತಯಾರಿಸುವ ವಿಧಾನ: ಪ್ರತಿ ವರ್ಷ ಜನವರಿಯಲ್ಲಿ ಸ್ಥಳೀಯ ಪೋತೇನಹಳ್ಳಿ ಕೆರೆಯಿಂದ ಜೇಡಿಮಣ್ಣನ್ನು ತಂದು ಸಂಗ್ರಹಿಸಿ ಮಡಿಕೆ ತಯಾರಿಸುತ್ತಾರೆ. ಜನವರಿಯಿಂದ ಜೂನ್‌ವರೆಗೆ ಮಡಿಕೆಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.

ನೈಪುಣ್ಯತೆ ಬೇಕು: ಮಡಿಕೆಗಳನ್ನು ವಿವಿಧ ಶೈಲಿಗಳಲ್ಲಿ ತಯಾರಿಸಲು ಸಾಕಷ್ಟು ನೈಪುಣ್ಯತೆ ಹಾಗೂ ಕೌಶಲ್ಯತೆ ಬೇಕಾಗಿದ್ದು, ಹಳಬರು ಇಂದಿಗೂ ಇಂತಹ ಕೌಶಲ್ಯದಿಂದ ಮಡಿಕೆ ತಯಾರು ಮಾಡುತ್ತಿದ್ದಾರೆ. ಹಿಂದೆ ಧಾನ್ಯಗಳನ್ನು ಸಂಗ್ರಹಿಸಲು ಮಣ್ಣಿನಿಂದ ತಯಾರಾದ ವಾಡೆಗಳನ್ನು ಬಳಸುತ್ತಿದ್ದರು.

ಅದು ಕಾಲಕ್ರಮೇಣ ನೇಪಥ್ಯಕ್ಕೆ ಸರಿದ ಮೇಲೆ ಇದೇ ವಾಡೆಗಳನ್ನು ಈಗ ನಗರ ಪ್ರದೇಶದಲಿ ್ಲತಂಧೂರಿ ರೋಟಿ ಮತ್ತು ಕುಲ್ಚಾಗಳನ್ನು ತಯಾರಿಸಲು ಬಳಸುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚು ವಾಡೆಗಳು ಡಾಬಾಗಳಿಗೆ ಮಾರಾಟವಾಗುತ್ತಿದೆ ಎಂದು ಕುಂಬಾರಿಕೆ ಮಾಡುತ್ತಿರುವ ಚಿಕ್ಕಸಿದ್ದಪ್ಪ ಹೇಳುತ್ತಾರೆ.

ಮಳೆ ಬಾರದೆ ವ್ಯವಸಾಯವು ಸಾಕಷ್ಟು ನಷ್ಟವಾಗುತ್ತಿರುವ ಇಂದಿನ ದಿನಗಳಲ್ಲಿ ಕುಂಬಾರಿಕೆಯ ಮೇಲೂ ಹೆಚ್ಚು ಪರಿಣಾಮ ಬೀರುತ್ತದೆ ಎನ್ನುತ್ತಾರಾದರೂ ಮಡಿಕೆಗಳನ್ನು ತಯಾರು ಮಾಡಲು ಸುಡಬೇಕಾದ ನೀಲಗಿರಿ ಸೊಪ್ಪು ಸಿಗುವುದು ಕಷ್ಟಕರವಾಗಿದೆ.

ಖರೀದಿಸಲು ಸಹ ದುಬಾರಿಯಾಗಿರುವುದರಿಂದ ಮಡಿಕೆ ತಯಾರಿಸುವ ವೆಚ್ಚವೂ ಹೆಚ್ಚಾಗುತ್ತಿದೆ ಎನ್ನುವ ಅವರು, ಮಡಿಕೆಯನ್ನು ಎರಡು ಬಣ್ಣದಲ್ಲಿ ತಯಾರಿಸುತ್ತಿದ್ದು ಕೆಂಪುಬಣ್ಣದ ಮಡಿಕೆಗೆ ಬಣ್ಣ ಹಾಕಲಾಗುತ್ತಿದ್ದು ಅವುಗಳು ನಗರ ಪ್ರದೇಶದಲ್ಲಿ ಹೆಚ್ಚು ಮಾರಾಟವಾಗುತ್ತಿದೆ. ಕೆಲವು ನಗರ ಪ್ರದೇಶದವರು ಬಂದು ಸಗಟಾಗಿ ಮಡಿಕೆಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಅವರು ಮಡಿಕೆಗಳನ್ನು ತಯಾರಿಸುವುದುಕ್ಕಿಂತಲೂ ಅವುಗಳನ್ನು ಒಂದು ಕಡೆಯಿಂದ ಮತ್ತೂಂದೆಡೆಗೆ ಸಾಗಾಣಿಕೆ ಮಾಡುವುದು ಕಷ್ಟಕರವಾಗಿದ್ದು, ಲಾರಿಗಳಲ್ಲಿ ಒಣಹುಲ್ಲನ್ನು ತುಂಬಿ ಸಾಗಾಣಿಕೆ ಮಾಡಲಾಗುತ್ತದೆ ಎಂದು ಹೇಳುತ್ತಾರೆ ಕಮಲಾಪುರದ ಚಿಕ್ಕಸಿದ್ದಪ್ಪ.

ಕಾಯಕಕ್ಕೆ ತನ್ನ ಇಬ್ಬರು ಮಕ್ಕಳು ಹಾಗೂ ಮನೆಯ ಮಹಿಳೆಯರ ಬೆಂಬಲವೂ ಸೇರಿ 6 ತಿಂಗಳು ಶ್ರಮವಹಿಸಿ ಮಡಿಕೆಗಳನ್ನು ತಯಾರಿಸಿದರೆ ಜನವರಿಯಿಂದ ಜೂನ್‌ವರೆಗೆ ಮಾರಾಟ ಮಾಡಿದರೆ ಖರ್ಚುಗಳೆಲ್ಲವೂ ಹೋಗಿ 1.5 ಲಕ್ಷದಿಂದ 2 ಲಕ್ಷ ಆದಾಯ ಬರುತ್ತದೆ ಎಂದು ಹೇಳಿದರು.

ಪ್ರತಿ ವ್ಯಕ್ತಿಯಿಂದ ದಿನಕ್ಕೆ 20 ಮಡಿಕೆ ತಯಾರಿ

ಪ್ರತಿ ವ್ಯಕ್ತಿ ಒಂದು ದಿನಕ್ಕೆ 20 ಮಡಿಕೆಗಳನ್ನು ತಯಾರಿಸಬಹುದು. ಈ ಗುಡಿ ಕೈಗಾರಿಕೆಯಲ್ಲಿ ಮಹಿಳೆಯರೂ ಸಹಾಯ ಮಾಡುವುದರಿಂದ ಮಾರಾಟ ಮಾಡಲು, ತಯಾರಿಸಲು ಹಾಗೂ ಮಣ್ಣನ್ನು ಹದಮಾಡಲು ಪುರುಷರಿಗೆ ಸಹಾಯ ಮಡುವುದು ಹೆಚ್ಚು ಉಪಕಾರಿಯಾಗಿದೆ. ಆಧುನಿಕ ವಿನ್ಯಾಸದ ಹೂವಿನ ಕುಂಡ, ಪಾಟುಗಳು ಮುಂತಾದವುಗಳಿಂದ ಹೆಚ್ಚು ವ್ಯಾಪಾರ ಮತ್ತು ಮಾರಾಟವಾಗುತ್ತಿದೆ ಎನ್ನಲಾಗಿದ್ದು, ಆಧುನಿಕತೆಯ ಅತಿರೇಕದಿಂದ ಹೊಸದು ಹೋಗಿ ಹಳೆಯ ಪರಿಕಲ್ಪನೆಗಳು ಮರು ಕಳಿಸುತ್ತದೆ ಎನ್ನುವುದಕ್ಕೆ ಮೂಲೆಗುಂಪಾಗಿದ್ದ ಕುಂಬಾರಿಕೆ ಹೊಸ ಶೈಲಿಯಲ್ಲಿ ಹೆಚ್ಚು ಬೆಳಕಿಗೆ ಬರಲಿ ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.