ಶಾಸಕ ಪ್ರದೀಪ್‌ ಈಶ್ವರ್‌ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್‌

ಪ್ರದೀಪ್‌ ಈಶ್ವರ್‌ ಅವರ ಆಶ್ವಾಸನೆ, ಭರವಸೆ ಜಾಲತಾಣದಲ್ಲಿ ವೈರಲ್‌

Team Udayavani, Jun 9, 2023, 3:15 PM IST

ಶಾಸಕ ಪ್ರದೀಪ್‌ ಈಶ್ವರ್‌ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್‌

ಚಿಕ್ಕಬಳ್ಳಾಪುರ: ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದ ಮೂಲಕ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಜನರಿಗೆ, ವಿದ್ಯಾ ರ್ಥಿಗಳಿಗೆ, ಅಸಹಾ ಯಕ ರಿಗೆ ಹಣಕಾಸಿನ ನೆರವಿನ ಬಗ್ಗೆ ನೀಡುತ್ತಿರುವ ಆಶ್ವಾಸನೆ, ಭರವಸೆಗಳ ಮಹಾ ಪೂರದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಲ್ಲಿ ಸಾಕಷ್ಟು ವೈರಲ್‌ ಆಗುತ್ತಿವೆ.

ಇದರ ಬೆನ್ನಲ್ಲೇ ಅವರ ಬಳಿಯಿಂದ ಪರಿಹಾರ ಪಡೆಯಲು ಕಲಬುರಗಿಯಿಂದ ಬಂದ ಬಡ ಕುಟುಂಬ ಅವರ ಸಂಪರ್ಕ ಸಾಧ್ಯವಾಗದೇ ಬರಿಗೈಯಲ್ಲಿ ವಾಪಸ್‌ ಆಗಿರುವ ಘಟನೆ ನಡೆದಿದೆ.

60 ವರ್ಷದ ವೃದ್ಧೆ ಕಮಲಾಬಾಯಿ ಹಾಗೂ ಆಕೆಯ ಪುತ್ರ ಮಂಜುನಾಥ ಶಾಸಕ ಪ್ರದೀಪ್‌ ಈಶ್ವರ್‌ ಬಳಿ ಆರ್ಥಿಕ ನೆರವು ಪಡೆಯಲೆಂದು 500 ಕಿ.ಮೀ. ದೂರದ ಕಲಬುರಗಿಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಶಾಸಕರ ದರ್ಶನ ಸಿಗದ ಕಾರಣ ನಿರಾಸೆಯಲ್ಲಿ ವಾಪಸ್‌ ತೆರಳಿದ್ದಾರೆ.

ಏನಿದು ಘಟನೆ: ಕಲುಬುರಗಿಯ ಕಮಲಾಬಾಯಿ ಪುತ್ರ ಮಂಜುನಾಥ ಒಂದೂವರೆ ವರ್ಷದ ಹಿಂದೆ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ವೇಳೆ ಚಿಕಿತ್ಸೆಗೆ ಬಡ ಕುಟುಂಬ ಸಾಲ ಸೋಲ ಮಾಡಿ ಆರೇಳು ಲಕ್ಷ ವೆಚ್ಚ ಮಾಡಿದ್ದು, ಕುಟುಂಬ ನಿರ್ವಹಣೆಗೆ ಕಷ್ಟವಾಗಿತ್ತು. ಅಲ್ಲದೇ ಸಾಲಗಾರರ ಕಾಟವೂ ಹೆಚ್ಚಾಗಿತ್ತು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಹಾಕಿದರೂ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಆಗ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಬಳಿ ತೆರಳಿದ್ದಾಗಲೂ ಕೂಡ ಆ ಕುಟುಂಬಕ್ಕೆ ಪ್ರಯೋಜನವಾಗಲಿಲ್ಲ ಅಂತೆ. ಹೀಗಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನೂತನ ಶಾಸಕರಾಗಿರುವ ಪ್ರದೀಪ್‌ ಈಶ್ವರ್‌, ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮ ಮೂಲಕ ಬಡವರಿಗೆ ಸಹಾಯ ಮಾಡುವುದಾಗಿ ಹೇಳುವ ವಿಡಿಯೋಗಳು ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗುತ್ತಿರುವ ಬೆನ್ನಲ್ಲೇ ಅವರ ಬಳಿ ಸಹಾಯಕ್ಕೆ ಹುಡುಕಿಕೊಂಡು ಬಂದ ಈ ಕುಟುಂಬಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಸಂಪರ್ಕಕ್ಕೆ ಸಿಗದೇ ವಾಪಸ್‌ ತೆರಳಿದೆ.

ಫೋನ್‌ ಮಾಡಿದರೂ ಶಾಸಕರು ಕರೆ ಸ್ವೀಕರಿಸಲಿಲ್ಲ’ : ಶಾಸಕ ಪ್ರದೀಪ್‌ ಈಶ್ವರ್‌ ಬಹಳ ಮಂದಿಗೆ ಸಹಾಯ ಮಾಡುತ್ತಿದ್ದಾರೆಂದು ನಮಗೆ ತಿಳಿದುಬಂತು. ಅದಕ್ಕೆ ಅವರನ್ನು ಭೇಟಿ ಆಗೋಣ ಅಂತ ಚಿಕ್ಕಬಳ್ಳಾಪುರಕ್ಕೆ ಬಂದೆವು. ಅವರನ್ನು ಫೋನ್‌ ಮೂಲಕ ಸಂಪರ್ಕಿಸಿದರೂ ಅವರು ಕರೆ ಸ್ವೀಕರಿಸಲಿಲ್ಲ ಎಂದು ಪುತ್ರ ಮಂಜುನಾಥ ಜೊತೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ವೃದ್ಧೆ ಕಮಲಾಬಾಯಿ ವಿವರಿಸಿದರು.

ವಿಧಾನಸೌಧಕ್ಕೆ ಅಲೆದಾಡಿ ಸಾಕಾಯಿತು, ಪ್ರದೀಪ್‌ ಈಶ್ವರ್‌ ಬಳಿ ನೆರವು ಪಡೆಯೋಣ ಅಂತ ಬಂದರೂ ಸಾಧ್ಯವಾಗುತ್ತಿಲ್ಲ. ನಮ್ಮ ಕುಟುಂಬ ತುಂಬ ಸಂಕಷ್ಟದಲ್ಲಿದೆ. ನಮ್ಮ ಕಷ್ಟ ನೋಡಿ ವಿಧಾನಸೌಧಕ್ಕೆ ಹೋಗಿದ್ದಾಗ ಅಧಿಕಾರಿಗಳು ಒಂದಿಷ್ಟು ಹಣ ಸಂಗ್ರಹಿಸಿ ಕೊಟ್ಟರು. ಆದರೆ ಜನಪ್ರತಿನಿಧಿಗಳಿಂದ ಏನು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದಿನಕ್ಕೆ 700 ಕಾಲ್‌ ಬರುತ್ತವಂತೆ : ಪ್ರಭಾವಿ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ವಿರುದ್ಧ ಗೆಲುವು ಸಾಧಿಸಿದ ಶಾಸಕ ಪ್ರದೀಪ್‌ ಈಶ್ವರ್‌, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹವಾ ಸೃಷ್ಟಿಸಿಕೊಂಡಿದ್ದಾರೆ. ಅವರೇ ಕಾರ್ಯಕ್ರಮದಲ್ಲಿ ಹೇಳಿಕೊಂಡಂತೆ ದಿನಕ್ಕೆ 700 ಫೋನ್‌ ಕಾಲ್‌ ಬರುತ್ತವೆ. ಕ್ಷೇತ್ರದವರಲ್ಲದೇ ಹೊರಗಿನವರು ಸಾಕಷ್ಟು ಸಂಖ್ಯೆಯಲ್ಲಿ ಫೋನ್‌ ಮಾಡುತ್ತಿದ್ದಾರೆಂದು ಸಭೆಯೊಂದರಲ್ಲಿ ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಪ್ರದೀಪ್‌ ಈಶ್ವರ್‌ ನೀಡುವ ಆಶ್ವಾಸನೆಗಳು, ಭರವಸೆಗಳು ಈಗ ಹೊರ ಜಿಲ್ಲೆಗಳ ನಾಗರಿಕರ ಗಮನ ಸೆಳೆಯುತ್ತಿವೆ ಎನ್ನುವುದ್ದಕ್ಕೆ ಕಲುಬುರಗಿಯ ಕಮಲಾಬಾಯಿ ಅವರ ಕಥೆ ಸಾಕ್ಷಿಯಾಗಿದೆ.

ಟಾಪ್ ನ್ಯೂಸ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karnataka bund

Cauvery: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.