ಭ್ರಷ್ಟಾಚಾರ ನಡೆಸಿಲ್ಲ ಅಂತ ದೇವಸ್ಥಾನದಲ್ಲಿ ದೀಪ ಹಚ್ಚಲಿ… ನಾನೂ ಬಂದು ದೀಪ ಹಚ್ಚುತ್ತೇನೆ
ಡಾ.ಸುಧಾಕರ್ಗೆ ಪ್ರತಿ ಸವಾಲು ಹಾಕಿದ ಶಾಸಕ ಪ್ರದೀಪ್ ಈಶ್ವರ್
Team Udayavani, Jul 9, 2023, 7:40 AM IST
ಚಿಕ್ಕಬಳ್ಳಾಪುರ: ಮಾಜಿ ಸಚಿವರಾದ ಡಾ.ಕೆ.ಸುಧಾಕರ್ ಅವರ ಸವಾಲನ್ನು ನಾನು ಸ್ಪೀಕರಿಸುತ್ತೇನೆ. ಆದರೆ, ಅವರು ಕೋವಿಡ್ ಸಂದರ್ಭದಲ್ಲಿ ಏನೂ ಭ್ರಷ್ಟಾಚಾರ ನಡೆಸಿಲ್ಲ ಅಂತ ಮೊದಲು ಬೋಗನಂದೀಶ್ವರ ದೇವಸ್ಥಾನದಲ್ಲಿ ದೀಪ ಹಚ್ಚಲಿ. ನಾನೂ ಬಂದು ದೀಪ ಹಚ್ಚುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್, ಮಾಜಿ ಸಚಿವ ಸುಧಾಕರ್ಗೆ ಪ್ರತಿ ಸವಾಲು ಹಾಕಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಬೆಳಗ್ಗೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಸಿದ್ಧಪಡಿಸಿರುವ ತಮ್ಮ ವೆಬ್ಸೈಟ್ ಜಾಲತಾಣವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಿವೇಶನಗಳ ಹಂಚಿಕೆ ವಿಚಾರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು, ಬೋಗನಂದೀಶ್ವರ ದೇಗುಲದಲ್ಲಿ ದೀಪ ಹಚ್ಚಲಿ ಎಂದು ಹಾಕಿರುವ ಸವಾಲಿನ ಬಗ್ಗೆ ಕೇಳಿದ ಪ್ರಶ್ನೆಗೆ ತೀಕ್ಷ್ಮ ಪ್ರತಿಕ್ರಿಯೆ ನೀಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಅವರ ಸವಾಲು ಸ್ವೀಕರಿಸುವೆ. ಆದರೆ, ಅವರು ಕೋವಿಡ್ ವೇಳೆ ಏನೂ ಭ್ರಷ್ಟಾಚಾರ ನಡೆಸಿಲ್ಲ ಅಂತ ದೀಪ ಹಚ್ಚಲಿ ಎಂದು ಟಾಂಗ್ ನೀಡಿದರು.
ಕ್ಷೇತ್ರದಲ್ಲಿ ವಸತಿ ಯೋಜನೆಗಳ ಹಕ್ಕು ಪತ್ರಗಳ ವಿತರಣೆಯಲ್ಲಿ ಬೋಗಸ್ ಆಗಿದೆ. ಅದನ್ನು ನಾವು ಎಸ್ಐಟಿ ತನಿಖೆಗೆ ಆದೇಶಿಸುತ್ತೇವೆ. ನಾವು ಅಂತೂ ಸುಮ್ಮನೆ ಬಿಡಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ