ಮಾಜಿ ಸಚಿವ ಡಿಕೆಶಿಗೆ ಒಳಿತಿಗೆ ಪ್ರಾರ್ಥಿಸಿ ಅಭಿಮಾನಿಗಳಿಂದ ವಿಶೇಷ ಪೂಜೆ
Team Udayavani, Sep 1, 2019, 1:50 PM IST
ಚಿಕ್ಕಬಳ್ಳಾಪುರ: ನಗರದ ಸೂಲಾಲಪ್ಪನ ದಿನ್ನೆಯ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಾಜಿ ಸಚಿವರು ಡಿ.ಕೆ.ಶಿವಕುಮಾರ್ ರವರಿಗೆ ಒಳಿತು ಬಯಸಿ ಎಂದು ಡಿಕೆಶಿ ಅಭಿಮಾನಿಗಳಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್ ಮಾತನಾಡಿ ಡಿ.ಕೆ.ಶಿವಕುಮಾರ್ ರವರು ರಾಜ್ಯದಲ್ಲೇ ಒಬ್ಬ ದಿಟ್ಟ ನೇರ ನುಡಿಯ ರಾಜಕಾರಣಿಯಾಗಿದ್ದು ಹಲವಾರು ಸವಾಲುಗಳನ್ನು ಎದುರಿಸಿ ಧೀಮಂತ ನಾಯಕರಾಗಿದ್ದಾರೆ. ಆದರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ವಿರುದ್ಧ ಧ್ವನಿ ಎತ್ತಿದ ನಾಯಕರಲ್ಲಿ ಡಿಕೆಶಿ ಮೊದಲಿಗರು ,ಡಿಕೆಶಿ ರಾಜಕೀಯವಾಗಿ ಬೆಳೆದು ಬಿಟ್ಟರೆ ಬಿಜೆಪಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉಳಿಗಾಲವೇ ಇರಲ್ಲ ಎಂದು ಭಾವಿಸಿರುವ ಬಿಜೆಪಿ ನಾಯಕರು ಇ.ಡಿ ಮತ್ತು ಐ.ಟಿ ಅಧಿಕಾರಿಗಳನ್ನು ಬಳಸಿಕೊಂಡು ಡಿ.ಕೆ.ಶಿವಕುಮಾರ್ ರವರನ್ನು ರಾಜಕೀಯವಾಗಿ ತುಳಿಯಲು ಮುಂದಾಗಿದ್ದಾರೆ ಇದು ಅವರ ಕೆಟ್ಟ ನೀಚ ರಾಜಕೀಯ ವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಇಂತಹ ಅದೆಷ್ಟೋ ನಾಯಕರಿಗೆ ರಾಷ್ಟ್ರದಲ್ಲಿ ಹಾಗೂ ಬೇರೆ ಬೇರೆ ರಾಜ್ಯಗಳಲ್ಲಿ ಬೆದರಿಕೆ ಹಾಕಿ ಬಿಜೆಪಿ ಪಕ್ಷಕ್ಕೆ ಸೆಳೆದಿದ್ದಾರೆ ಎಂದು ಕಿಡಿ ಕಾರಿದರು.
ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ಮಾತನಾಡಿ, ಡಿ.ಕೆ.ಶಿವಕುಮಾರ್ ರವರು ಒಬ್ಬ ಜಾತ್ಯಾತೀತ ನಾಯಕರಾಗಿ ನಮ್ಮ ರಾಜ್ಯದಲ್ಲಿ ಹೊರಹೊಮ್ಮಿದ್ದಾರೆ. ಇವರ ಏಳ್ಗೆಯನ್ನು ಸಹಿಸದೇ ಬಿಜೆಪಿ ನಾಯಕರು ಡಿಕೆಶಿಯವರನ್ನು ರಾಜಕೀಯವಾಗಿ ಮುಗಿಸಲು ಪಿತೂರಿ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಇಂತಹ ಕೆಟ್ಟ ರಾಜಕೀಯ ಚಾಳಿಯನ್ನು ಬಿಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗವುದು ಎಂದು ಎಚ್ಚರಿಸಿದರು.
ಬಂಧನವಾದರೆ ಉಗ್ರ ಹೋರಾಟದ ಎಚ್ಚರಿಕೆ
ಒಂದು ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಅಕ್ರಮವಾಗಿ ಬಂಧಿಸಲು ಮುಂದಾದರೆ ಯಾವುದೇ ಸಮಯದಲ್ಲಿ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಪ್ರತಿಭಟಿಸಲು ಮುಂದೆ ಬರಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಬಾಲಕುಂಟಹಳ್ಳಿ ಮುನಿಯಪ್ಪ,ಜಯರಾಂ, ಶ್ರೀಧರ್, ಜಯರಾಂ, ಲಕ್ಷ್ಮಣ್, ಜನಾರ್ಧನ್,ಸುನಿಲ್ ಜೀವನ್ ಇನ್ನೂ ಹಲವಾರು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು