ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ


Team Udayavani, Oct 15, 2022, 3:08 PM IST

tdy-13

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2 ವರ್ಷದಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದ ಕನ್ನಡ ರಾಜ್ಯೋತ್ಸವ ವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸ್ತುತ ಕೋವಿಡ್‌ನ‌ ತಗ್ಗಿರುವುದರಿಂದ ನ. 1ರಂದು ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ನಗರದ ಸರ್‌ ಎಂ.ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾ ಗುವುದು ಎಂದು ಜಿಲ್ಲಾಧಿಕಾರಿ ಎನ್‌.ಎಮ್‌. ನಾಗರಾಜ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಕ್ಕು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ನಾಡಗೀತೆ, ಸಮೂಹ ಗೀತ ಗಾಯನ ಮತ್ತು ನೃತ್ಯ , ಗೌರವ ವಂದನೆ, ಸಾಧಕರಿಗೆ ಸನ್ಮಾನ, ಪೊಲೀಸ್‌ ಕವಾಯತು ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುವುದು. ಅಲ್ಲದೆ ನಗರದ ಉಪವಿಭಾಗಾಧಿಕಾರಿ ಕಚೇರಿಯಿಂದ ಬಿ.ಬಿ.ರಸ್ತೆಯ ಮೂಲಕ ಕ್ರೀಡಾಂಗಣದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವ ಣಿಗೆ ನಡೆಸಲಾಗುವುದು. ಸ್ಥಳೀಯ ಸಾಹಿತಿಗಳನ್ನು ಒಳಗೊಂಡಂತೆ ಪ್ರಮುಖ ಕನ್ನಡ ಸಾಹಿತಿಗಳ ಭಾವಚಿತ್ರ ಹಾಗೂ ಅವರ ಸಂದೇಶಗಳ ಫಲಕಗ ಳನ್ನು (ಪ್ಲೇಕ್ಸ್‌) ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ, ಆಂಬುಲೆನ್ಸ್‌ ವ್ಯವಸ್ಥೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವತ್ಛತೆ ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಸಾಪ ಸಹಯೋಗದಲ್ಲಿ ಜಿಲ್ಲೆಯಲ್ಲಿನ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕುರಿತು, ಕವನ, ಗಾಯನ, ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕನ್ನಡ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯ ಸ್ಥರು ಹಾಗೂ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌ .ನಾಗೇಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್‌ .ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್‌, ಜಿಲ್ಲಾ ಕಸಾಪ ಅಧ್ಯಕ್ಷ ಕೋಡಿರಂಗಪ್ಪ, ತಾಲ್ಲೂಕು ಕಸಾಪ ಅಧ್ಯಕ್ಷ ಎಳುವಳ್ಳಿ ಸೊಣ್ಣೇಗೌಡ, ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಉಷಾ ಶ್ರೀನಿವಾಸ್‌, ತಾಲೂಕು ಅಧ್ಯಕ್ಷರಾದ ಲೀಲಾ ಲಕ್ಷ್ಮೀನಾರಾಯಣ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಲಪತಿಗೌಡ, ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷ ಶ್ರೀರಾಮೇಗೌಡ, ಚಂದ್ರಶೇಖರ್‌, ಲೋಕೇಶ್‌, ಮಂಚನಬಲೆ ಶ್ರೀನಿವಾಸ್‌, ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.