ಜಮೀರ್ ಅಹಮದ್ ಗುಣಮುಖರಾಗಲು ಪ್ರಾರ್ಥನೆ
Team Udayavani, Aug 24, 2020, 1:43 PM IST
ಶಿಡ್ಲಘಟ್ಟ: ಚಾಮರಾಜಪೇಟೆ ಶಾಸಕ ಬಿ.ಝೆಡ್. ಜಮೀರ್ ಅಹಮದ್ ಖಾನ್ ಕೋವಿಡ್ ಸೋಂಕಿನಿಂದ ಗುಣಮುಖರಾಗಲು ನಗರದ ಕಾಂಗ್ರೆಸ್ ಕಾರ್ಯಕರ್ತರು ದರ್ಗಾ ಮತ್ತು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ಅಧ್ಯಕ್ಷ ಅಮಜದ್ ನವಾಝ್ ನೇತƒತ್ವದಲ್ಲಿ ಮುಸ್ಲಿಂ ಯುವಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿರುವ ಹಝರತ್ ಹುಸೇನಿ ಸರಮಸ್ತ್ ಷಾ ವಲೀ ದರ್ಗಾ ಹಾಗೂ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಶಾಸಕ ಜಮೀರ್ ಕೋವಿಡ್ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಗುಣ ಮುಖರಾಗಿ ಎಂದಿನಂತೆ ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಮೊದಲಿಗೆ ದರ್ಗಾದಲ್ಲಿ ಧರ್ಮಗುರುಗಳಾದ ಆದಮ್ ಅಲಿ ಅವರಿಂದ ಫಾತೇಹಾ ಕಾರ್ಯಕ್ರಮ ಮುಗಿಸಿದ ಕಾರ್ಯಕರ್ತರು, ಬಳಿಕ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕೋಮು ಸೌರ್ಹಾದತೆ ಮೆರೆದರು.
ಹಝರತ್ ಹುಸೇನಿ ಸರಮಸ್ತ್ ಷಾ ವಲಿ ದರ್ಗಾ ಸಮಿತಿಯ ಶಫಿಉಲ್ಲಾ, ಕಾಂಗ್ರೆಸ್ ಹಿರಿಯ ಮುಖಂಡ ಅಲಹಾಜ್ ಸೆ„ಯದ್ ಯೂಸುಫ್, ತಾಲೂಕು ರೀಲರ್ ಅಸೋಸಿಯೇಷನ್ ಅಧ್ಯಕ್ಷ ಅನ್ಸರ್ಖಾನ್, ಮೆಕಾನಿಕ್ ಯೂಸುಫ್, ಪಿಓಪಿ ಸಗೀರ್, ಮುಖಂಡರಾದ ರಾಜಕುಮಾರ್,ವಿಜಿ, ನಗರಸಭಾ ಸದಸ್ಯರಾದ ರಿಯಾಝ್ಪಾಷ, ಝಬೀಉಲ್ಲಾ, ಅನಿಲ್ಕುಮಾರ್, ಶಬ್ಬೀರ್, ಮನೋಹರ್, ಮುಜಾಹೀದ್ಪಾಷ, ಅಕ್ರಮ್ ಪಾಷ, ಮೆಡಿಕಲ್ ಅಲೀಂ, ಕಲೀಂ, ಸಾಧಿಕ್ಪಾಷ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್