ಪ್ರಧಾನಿ ಮೋದಿ ಜಾತ್ಯತೀತ-ಪಕ್ಷಾತೀತ ನಾಯಕ: ಸಚಿವ ಡಾ.ಕೆ.ಸುಧಾಕರ್


Team Udayavani, Dec 9, 2022, 10:03 PM IST

1-sasada

ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜಾತ್ಯತೀತ ಮತ್ತು ಪಕ್ಷಾತೀತ ನಾಯಕವೆಂದು ಜನ ಪ್ರೀತಿ ಮತ್ತು ಅಭಿಮಾನದಿಂದ ಒಪ್ಪಿಕೊಂಡಿದ್ದಾರೆ ಎಲ್ಲಡೆ ಅವರ ಅಲೆ ಬೀಸುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಗುಜರಾತಿನಲ್ಲಿ ಸತತ 7 ಬಾರಿ ಗೆಲುವು ಸಾಧಿಸಿರುವುದೊಂದು ದೊಡ್ಡ ದಾಖಲೆಯೆಂದು ಬಣ್ಣಿಸಿ, ಪಶ್ಚಿಮ ಬಂಗಾಲದಲ್ಲಿ 25 ವರ್ಷ ಸಿಪಿಎಂ ಪಕ್ಷ ಆಡಳಿತ ನಡೆಸಿದೆ ಆದರೆ ಒಂದು ವ್ಯತ್ಯಾಸ ಏನೆಂದರೆ ಪಶ್ಚಿಮ ಬಂಗಾಲದಲ್ಲಿ ಬಡತನಕ್ಕೆ ಸಿಪಿಎಂ ದುಡಿದಿದ್ದು ಭಾರತೀಯ ಜನತಾ ಪಕ್ಷದ ಸರ್ಕಾರ ಗುಜರಾತ್‍ನನ್ನು ಒಂದು ಸಮರ್ಥ ರಾಜ್ಯ ಮಾಡುವುದರ ಜೊತೆಗೆ ಸಂಪತ್ತು ಭರಿತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದರು.

ಗುಜರಾತಿನ ಚುನಾವಣೆಯಲ್ಲಿ 156 ಸ್ಥಾನಗಳನ್ನು ತೆಗೆದುಕೊಂಡಿರುವುದು ಸರ್ವಕಾಲಿಕವಾಗಿರುವ ದಾಖಲೆಯಾಗಿದೆ. ಇದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಅವರು ಪರಿಪಾಲನೆ ಮಾಡುತ್ತಿರುವ ಆಡಳಿತವನ್ನು ಈ ದೇಶದ ಜನ ಮೆಚ್ಚಿದ್ದಾರೆ ಸ್ವಾಭಾವಿಕವಾಗಿ ಗುಜರಾತಿನ ಮಣ್ಣಿನ ಮಗ ಎಂಬ ಭಾವನೆ ಕೂಡ ಅವರಲ್ಲಿದೆ.  ಈಗಿರುವ ಮುಖ್ಯಮಂತ್ರಿಗಳ ಬಗ್ಗೆಯೂ ಒಳ್ಳೆಯ ಅಭಿಪ್ರಾಯಯಿದೆ ಎಂಬುದು ಚುನಾವಣೆಯ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದರು.

ಕಾಂಗ್ರೆಸ್ ಹೀನಾಯ ಸೋಲು
ಗುಜರಾತಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಇದರಿಂದ ಗೊತ್ತಾಗುತ್ತದೆ ಅವರ ಸ್ಪರ್ಧೆಯಲ್ಲೆ ಇಲ್ಲವೆಂಬುದು ಫಲಿತಾಂಶದಿಂದ ಗೋಚರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ ಸಚಿವರು ದೊಡ್ಡ ರಾಜ್ಯದ ಚುನಾವಣೆಯಲ್ಲಿ ಕೇವಲ 17 ಸ್ಥಾನಗಳಿಗೆ ಸೀಮಿತಗೊಂಡಿರುವ ಕಾಂಗ್ರೆಸ್ ನಾಯಕರು ವಿಚಾರ ಮಾಡಿಕೊಳ್ಳಬೇಕು ಇನ್ನೂ ಹಿಮಾಚಲ್ ಪ್ರದೇಶದ ಚುನಾವಣೆಯಲ್ಲಿ ಐದು ವರ್ಷಕ್ಕೊಮ್ಮೆ ಜನ ಬದಲಾವಣೆಯನ್ನು ಬಯಸುತ್ತಾರೆ ಎಂದರು.

ಹಿಮಾಚಲ್ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮತಗಳಿಕೆಯಲ್ಲಿ ಕೇವಲ .8 ವ್ಯತ್ಯಾಸವಿದೆ ಆದರೇ ಗುಜರಾತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ 27% ಮತಗಳಿಕೆಯ ವ್ಯತ್ಯಾಸ ಕಂಡುಬಂದಿದೆ ಹಾಗಾಗಿ ಇದು ವ್ಯತ್ಯಾಸ .8% ಕಡಿಮೆ ಮತ ಬಂದಿದ್ದರಿಂದ 6-7 ಸೀಟು ಕಡಿಮೆ ಬಂದಿದೆ ಆದರೂ ಕೂಡ ಮುಂದಿನ ದಿನಗಳಲ್ಲಿ ಹಿಮಾಚಲ್ ಪ್ರದೇಶದಲ್ಲಿ ಯಾವ ರೀತಿಯಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂಬುದರ ಬಗ್ಗೆ ನಮ್ಮ ನಾಯಕರು ನಿರ್ಧರಿಸುತ್ತಾರೆ ಎಂದರು.

ಗುಜರಾತಿನ ಚುನಾವಣೆಯ ಫಲಿತಾಂಶದಿಂದ ಕರ್ನಾಟಕದ ಸರ್ಕಾರ ಸಚಿವರು-ಶಾಸಕರಿಗೆ ಪಕ್ಷದ ಕಾರ್ಯಕರ್ತರಿಗೆ ಮನೋಸ್ಥೈರ್ಯವನ್ನು ಇಮ್ಮಿಡಿ ಮಾಡಿದೆ ಎಂದ ಸಚಿವರು ಗುಜರಾತಿನ ಪ್ರಗತಿಪರ ರಾಜ್ಯ ಹಾಗೆಯೇ ಕರ್ನಾಟವೂ ಪ್ರಗತಿಪರ ರಾಜ್ಯ ಹೀಗಾಗಿ ನಮ್ಮ ಉತ್ಸಾಹ ಹೆಚ್ಚಾಗಿದೆ ಆದರೇ ನಾವು ಕೂಡ ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕು ಎಂಬುದು ನನ್ನ ಅಭಿಪ್ರಾಯ ನಮಗೆ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ಇರಬೇಕು ಅತಿಯಾದ ಆತ್ಮವಿಶ್ವಾಸ ಇರಬಾರದು ಎಚ್ಚರಿಕೆಯಿಂದ ನಮ್ಮ ಸಂಘಟನೆಯನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳಬೇಕು ಜನರ ವಿಶ್ವಾಸವನ್ನು ಮತ್ತು ಪ್ರೀತಿಯನ್ನು ಪಡೆಯುವಂತರಾಗಬೇಕು ಮುಂದಿನ ಐದು ತಿಂಗಳ ಅವಧಿಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವಂತಹ ಕೆಲಸವನ್ನು ಮಾಡಿದರೆ ಜನ ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಮೋದಿ ಅಲೆ
ಲೋಕಸಭಾ ಚುನಾವಣೆಯಲ್ಲಿ 300 ಕ್ಕೂ ಅಧಿಕ ಸಂಸದರನ್ನು ಆಯ್ಕೆ ಮಾಡುತ್ತಾರೆ ಎಂದರೇ ಅದು ಪ್ರಧಾನಮಂತ್ರಿ ಅವರ ನೇತೃತ್ವದಲ್ಲಿರುವ ಜನರ ವಿಶ್ವಾಸವನ್ನು ತೋರಿಸುತ್ತದೆ ಜನಮನ್ನಣೆ ಇಲ್ಲದೆ ಪ್ರಧಾನಮಂತ್ರಿ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಸಚಿವರು ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿರುವ ಸಮಸ್ಯೆಗಳು ಇರುತ್ತದೆ ಅದರ ಪ್ರಭಾವ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದ ಸಚಿವರು ದೇಶದ ಜನರು ಅಭಿಮಾನ ಮತ್ತು ಪ್ರೀತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜಾತ್ಯಾತೀತ ಮತ್ತು ಪಕ್ಷಾತೀತ ನಾಯಕವೆಂದು ಮೆಚ್ಚುಕೊಂಡಿದ್ದಾರೆ ಮುಂದಿನ 2024ರ ಚುನಾವಣೆಯಲ್ಲಿ ಸಹ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಜೆ.ನಾಗರಾಜ್, ಶಿಡ್ಲಘಟ್ಟ ನಗರಸಭಾ ಸದಸ್ಯ ಕೃಷ್ಣಮೂರ್ತಿ, ಬಿಎಸ್‍ಪಿ ಮೌಲಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.