ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಪ್ರತಿಭಟನೆ
Team Udayavani, Jun 19, 2021, 6:16 PM IST
ಚಿಕ್ಕಬಳ್ಳಾಪುರ: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಿಸಲುಶ್ರಮಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ವಿಶೇಷ ಕಾನೂನು ಜಾರಿಗೊಳಿಸಬೇಕು, ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕರೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಕೊರೊನಾ ಸಂಕಷ್ಟದಲ್ಲಿ ತಮ್ಮ ಪ್ರಾಣಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವಹೊತ್ತಿನಲ್ಲಿ ಕೆಲವರು ಹಲ್ಲೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇವಿಶೇಷಕಾನೂನು ಜಾರಿಗೆ ತಂದು, ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕುಮತ್ತು ಕೊರೊನಾ ಸೋಂಕು ನಿಯಂತ್ರಿಸಲು ಸೇವೆ ಸಲ್ಲಿಸಿ ಮೃತಪಟ್ಟವೈದ್ಯರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಪ್ರಧಾನಿಗೆ ಇ-ಮೇಲ್: ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಂದೆಪ್ಲೇಕಾರ್ಡ್ಗಳೊಂದಿಗೆ ಪ್ರತಿಭಟನೆ ನಡೆಸಿದ ವೈದ್ಯರು ಮತ್ತು ಸಿಬ್ಬಂದಿ,ವಿಮೆ ಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಕೆ ಮತ್ತು ಕೊರೊನಾಲಸಿಕೆ ಕುರಿತು ಅಪಪ್ರಚಾರ ಮತ್ತು ಸುಳ್ಳು ಮಾಹಿತಿ ಮತ್ತು ವದಂತಿಹರಡುವ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಐಎಂಎನಜಿಲ್ಲಾಧ್ಯಕ್ಷ ಡಾ.ಪ್ರಾಶಾಂತ್ ಎಸ್.ಮೂರ್ತಿ, ಕಾರ್ಯದರ್ಶಿ ಡಾ.ಮಧುವನ್ ಪ್ರಧಾನಿಗೆ ಇ-ಮೇಲ್ ಸಂದೇಶ ಕಳುಹಿಸಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ