ಜಿಲ್ಲೆಯಲ್ಲಿ ಕನ್ನಡ ಭಾಷೆಗೆ ಕುತ್ತು


Team Udayavani, Nov 1, 2019, 3:50 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲೆಯಾಗಿ 12 ವರ್ಷ ಕಳೆದರೂ ಚಿಕ್ಕಬಳ್ಳಾ ಪುರ ಜಿಲ್ಲಾದ್ಯಂತ ಕನ್ನಡ ಓದುಬರಹ ಬಾರದವರ ಸಂಖ್ಯೆ ಬರೋಬ್ಬರಿ 2.24 ಲಕ್ಷದಷ್ಟು ಇದ್ದು, ಜಿಲ್ಲೆಯ ಒಟ್ಟಾರೆ ಜನಸಂಖ್ಯೆ ಯಲ್ಲಿ 2.24.828 ಮಂದಿ ಕನ್ನಡ ಭಾಷೆಯ ಅರಿವೇ ಇಲ್ಲದಿರುವುದು ಜಿಲ್ಲಾಡಳಿತ ನೀಡುತ್ತಿರುವ ಅಂಕಿ,ಅಂಶಗಳೇ ಸಾರಿ ಹೇಳುತ್ತಿವೆ.

ಶೈಕ್ಷಣಿಕ ಪ್ರಗತಿ ಮೇಲೆ ಪರಿಣಾಮ: ಆಂಧ್ರದಗಡಿಯಲ್ಲಿರುವ ಜಿಲ್ಲೆಯಲ್ಲಿ ತೆಲುಗು ಪ್ರಾಬಲ್ಯ ಮೊದಲಿನಿಂದಲೂ ಇರುವ ಪರಿಣಾಮ ಜಿಲ್ಲೆಯಲ್ಲಿ ಅನಕ್ಷರಸ್ಥರ ಸಂಖ್ಯೆ ಜಿಲ್ಲೆಯಲ್ಲಿ ಶೇ.28.74 ರಷ್ಟು ಇದ್ದು ಅದರಪರಿಣಾಮ ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿ ಮೇಲೆ ಬಿದ್ದಿದೆ. ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಹೊರತುಪಡಿಸಿದರೆ ಉಳಿದಂತೆ ಚಿಂತಾಮಣಿ, ಗೌರಿಬಿದನೂರು, ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕುಗಳು ಆಂಧ್ರಪ್ರದೇಶಕ್ಕೆ ಕೂಗಳತೆಯ ದೂರದಲ್ಲಿದ್ದು, ತೆಲುಗು ಪ್ರಾಬಲ್ಯದ ಮಧ್ಯೆ ಕನ್ನಡ ಇಲ್ಲಿ ಮಂಕಾಗಿದ್ದರೂ ಹೇಳ್ಳೋರೂ ಕೇಳ್ಳೋರು ಇಲ್ಲವಾಗಿದೆ.

ತೆಲುಗು ಪ್ರಾಬಲ್ಯ: ಗೌರಿಬಿದನೂರಿಗೆ ಆಂಧ್ರದ ಹಿಂದೂಪುರ ಹತ್ತಿರವಾಗಿದ್ದರೆ, ಗುಡಿಬಂಡೆ ಬಾಗೇಪಲ್ಲಿಗೆ ಅನಂತಪುರ, ಕದಿರಿ ಹತ್ತಿರವಾಗಿದೆ. ಇನ್ನೂ ಚಿಂತಾಮಣಿಗೆ ಚಿತ್ತೂರು ಜಿಲ್ಲೆಯ ಮದನಪಲ್ಲಿ, ಪುಗಂನೂರು ಹತ್ತಿರದಲ್ಲಿದ್ದು, ತೆಲುಗು ಭಾಷೆ ಆರ್ಭಟ ಇಲ್ಲಿ ಸಾಮಾನ್ಯವಾಗಿದೆ.

ವ್ಯತಿರಿಕ್ತ ಪರಿಣಾಮ: ಜನರ ದಿನನಿತ್ಯದ ಬದುಕಿನಲ್ಲಿಕನ್ನಡಕ್ಕಿಂತ ತೆಲುಗು ಹೆಚ್ಚು ಆವರಿಸಿರುವುದುಎದ್ದು ಕಾಣುತ್ತಿದೆ. ಜಿಲ್ಲೆಯಲ್ಲಿ 12,55,104 ಮಂದಿ ಜನಸಂಖ್ಯೆ ಇದ್ದು, ಆ ಪೈಕಿ ಪುರುಷರ ಸಂಖ್ಯೆ6,36,437 ಇದ್ದರೆ, ಮಹಿಳೆಯರ ಸಂಖ್ಯೆ 6,18,667 ಇದೆ. ಆದರೆ ಜಿಲ್ಲೆಯಲ್ಲಿ ಇಂದಿಗೂ ಅನಕ್ಷರಸ್ಥರ ಸಂಖ್ಯೆ ಇರುವ ಪರಿಣಾಮ ಕನ್ನಡ ಭಾಷಾ ಬೆಳೆವಣಿಗೆಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

ಜಿಲ್ಲಾಡಳಿತದ ಅಂಕಿ, ಅಂಶಗಳಲ್ಲಿ ಸ್ಪಷ್ಟ: ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಅವಲೋಕಿಸಿದರೆ ಪುರುಷರ ಪ್ರಮಾಣ ಸರಾಸರಿ ಶೇ.77.76 ರಷ್ಟು ಇದ್ದರೆ, ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ.61.76 ರಷ್ಟು ಇದೆ. ಜಿಲ್ಲೆಯ ಒಟ್ಟಾರೆ ಸಾಕ್ಷರತಾ ಪ್ರಮಾಣ ಶೇ.69.76 ರಷ್ಟು ಮಾತ್ರ ಇದೆ. ಇನ್ನೂ ಶೇ.28.74ರಷ್ಟು ಸಾಕ್ಷರತೆ ಕೊರತೆ ಜಿಲ್ಲೆಯಲ್ಲಿ ಎದ್ದು ಕಾಣುತ್ತಿರುವುದು ಜಿಲ್ಲಾಡಳಿತ ನೀಡಿರುವ ಅಂಕಿ, ಅಂಶಗಳಲ್ಲಿ ಸ್ಪಷ್ಟವಾಗಿದೆ.

ಹಳ್ಳ ಹಿಡಿದ ಸಾಕ್ಷರತಾ ಕಾರ್ಯಕ್ರಮ: ಜಿಲ್ಲೆಯಾಗಿ ಚಿಕ್ಕಬಳ್ಳಾಪುರ ಕಳೆದ ಆ.23ಕ್ಕೆ 12 ವರ್ಷ ತುಂಬಿ 13ಕ್ಕೆ ಪದಾರ್ಪಣೆ ಮಾಡುತ್ತಿದೆ. ಆದರೆ ಜಿಲ್ಲೆಯಲ್ಲಿ ವಯಸ್ಕರ ಶಿಕ್ಷಣ ಇಲಾಖೆ ರೂಪಿಸುತ್ತಿರುವ ಸಾಕ್ಷರತಾ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕೆ ಮಾತ್ರ ಸೀಮಿತವಾಗಿದ್ದು, ಸಮರ್ಪಕವಾಗಿ ಪಾರದರ್ಶಕವಾಗಿ ವಯಸ್ಕರ ಶಿಕ್ಷಣ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ನಡೆಯದೇ ಅನಕ್ಷರಸ್ಥರು ಸಾಕ್ಷರರಾಗದೇ ಉಳಿದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಅನಕ್ಷರಸ್ಥರ ಪೈಕಿ ಬಾಗೇಪಲ್ಲಿ, ಗೌರಿಬಿದನೂರು ಹಾಗೂ ಚಿಂತಾಮಣಿ ತಾಲೂಕುಗಳು ಮೊದಲಿದ್ದರೆ, ನಂತರ ಸ್ಥಾನದಲ್ಲಿ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಇದೆ. ಜಿಲ್ಲೆಯಲ್ಲಿ ಸಾಕ್ಷರತಾ ಕಾರ್ಯಕ್ರಮಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆಯೆಲ್ಲಾ ನಡೆದ ವಯಸ್ಕರ ಶಿಕ್ಷಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ವಯಸ್ಕರ ಪರೀಕ್ಷೆಗಳಲ್ಲಿ ಕೂಡ ನಕಲು ಮಾಡಿಸಲಾಗಿದೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬಂದಿದೆ.

ಯಥಾಸ್ಥಿತಿ: ಜಿಲ್ಲೆಯಲ್ಲಿ ಅನಕ್ಷಸ್ಥರಿಗೆ ಕನಿಷ್ಠ ಸಹಿ ಮಾಡುವುದರ ಜೊತೆಗೆ ಓದು ಬರಹ ಬರೆಯುವ ರೀತಿಯಲ್ಲಿ ಸಾಕ್ಷರರನ್ನು ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ ಗಡಿ ಜಿಲ್ಲೆಯ ಚಿಕ್ಕಬಳ್ಳಾಪುರದಲ್ಲಿ ಮಾತ್ರ ಯಾವುದೇ ಪರಿಣಾಮ ಬೀರದೆ ಅನಕ್ಷರಸ್ಥರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುವುದರ ಬದಲು ಯಥಾಸ್ಥಿತಿ ಇದೆ.

ಅದರ ಪರಿಣಾಮ ಜಿಲ್ಲೆಯ ಒಟ್ಟಾರೆ ಪ್ರಗತಿ, ಅಭಿವೃದ್ಧಿ ಮೇಲೆ ದುಷ್ಪರಿಣಾಮ ಬೀರುತ್ತಿದೆಯೆಂಬ ಆರೋಪ ಪ್ರಜ್ಞಾವಂತ ನಾಗರಿಂದ ಕೇಳಿ ಬರುತ್ತಿದ್ದು, ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜಿಲ್ಲೆಯ ಅನಕ್ಷರಸ್ಥರಿಗೆ ಕನಿಷ್ಠ ಕನ್ನಡ ಓದು, ಬರಹ ಬರೆಯುವ ರೀತಿಯಲ್ಲಿ ಅವರಲ್ಲಿನ ಅಕ್ಷರದ ಹಸಿವನ್ನು ನೀಗಿಸು ಕೆಲಸವನ್ನು ರಾಜ್ಯೋತ್ಸವದ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಲಿ ಎನ್ನುವುದು ಕನ್ನಡ ಪ್ರೇಮಿಗಳ ಆಶಯವಾಗಿದೆ.

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.