ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸಿ
Team Udayavani, Feb 24, 2021, 1:29 PM IST
ಗೌರಿಬಿದನೂರು: ಬಾಲಕಾರ್ಮಿಕ ಪದ್ಧತಿ ಕಡಿವಾಣಕ್ಕೆ ಸಾರ್ವಜನಿಕರ ಹಾಗೂ ಪೋಷಕರ ಸಹಕಾರ ಅಗತ್ಯ. ಈ ಅನಿಷ್ಠ ಪದ್ಧತಿ ಕಂಡು ಬಂದಲ್ಲಿ ಕೂಡಲೇ ದೂರು ನೀಡಬೇಕೆಂದು ಹಿರಿಯ ಶ್ರೇಣಿ ನ್ಯಾಯಾಧೀಶೆ ರೇಣುಕಾ ದೇವಿದಾಸ್ ರಾಯ್ಕರ್ ತಿಳಿಸಿದರು.
ನಗರದ ನೂತನ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಗೌರಿಬಿದನೂರು, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ(ನಿಷೇಧ ಮತ್ತು ನಿಯಂತ್ರಣ)ಕಾಯ್ದೆ 1986 ರ ಕಾಯ್ದೆ ಅಡಿಯಲ್ಲಿ ನೇಮಕವಾದ ನಿರೀಕ್ಷರರಿಗೆ ತಾಲೂಕು ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನದಲ್ಲಿ ಮಕ್ಕಳಿಗೆ ಶಿಕ್ಷಣ ಕಡ್ಡಾಯಗೊಳಿಸಿದೆ. 14 ರಿಂದ 18 ವರ್ಷದ ಎಲ್ಲ ಮಕ್ಕಳಿಗೆ ಪೋಷಕರು ಶಿಕ್ಷಣ ನೀಡಬೇಕು. ಬಡತನ ನೆಪದಲ್ಲಿ ಮಕ್ಕಳಿಗೆ ಕೆಲಸಕ್ಕೆ ಕಳಿಸಿದರೆ ಅದು ಬಾಲಕಾರ್ಮಿಕ ಕಾಯ್ದೆಗೆ ಒಳಪಡುತ್ತದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಅರ್. ಪವಿತ್ರಾ ಮಾತನಾಡಿ, ನಮ್ಮ ಸುತ್ತಮುತ್ತಲು ಕಾಣುವ ಬಾಲಕಾರ್ಮಿಕ ಪದ್ಧತಿಯನ್ನುಕಂಡು ಸುಮ್ಮನಿರದೆ ದೂರು ಕೊಡುವಮೂಲಕ ನಿರ್ಮೂಲನೆಗೆ ಮುಂದಾಗಬೇಕು.ಆಗ ಮಾತ್ರ ನವ ಸಮಾಜ ನಿರ್ಮಾಣಕ್ಕೆ ನಾವು ಕೈಜೋಡಿಸಿದಂತೆ ಆಗುತ್ತದೆ ಎಂದರು.
ಹಿರಿಯ ವಕೀಲ ಎಂ.ಆರ್.ಲಕ್ಷ್ಮೀ ನಾರಾಯಣ್ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಬಡತನದ ನೆಪದಲ್ಲಿ ಕೆಲಸಕ್ಕೆ ದೂಡುವುದು ಖೇದಕರ ಎಂದರು. ವಕೀಲ ಟಿ.ಕೆ.ವಿಜಯರಾಘವ, ತಹಶೀಲ್ದಾರ್ ಎಚ್. ಶ್ರೀನಿವಾಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಆಧ್ಯಕ್ಷ ಡಿ.ರಾಮ ದಾಸ್, ಸರ್ಕಾರಿ ಅಭಿಯೋಜಕ ಆದಿನಾರಾ ಯಣಸ್ವಾಮಿ, ಕಾರ್ಮಿಕ ನಿರೀಕ್ಷಕ ರಾಮಾಂಜಿನಪ್ಪ ಮತ್ತು ಹಿರಿಯ ವಕೀಲರು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ