10ರವರೆಗೂ ನಿಷೇಧಾಜ್ಞೆ ಜಾರಿ


Team Udayavani, Dec 8, 2019, 3:00 AM IST

10ravareggu

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಗೆ ಕೇವಲ 24 ಗಂಟೆ ಮಾತ್ರ ಬಾಕಿ ಇದ್ದು, ಡಿ.9 ರಂದು ನಗರದ ಬಿಬಿ ರಸ್ತೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮತ ಎಣಿಕೆ ನಡೆಯಲಿರುವುದರಿಂದ ಮುಂಜಾಗ್ರತಾ ಕ್ರಮದಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಡಿ.9ರ ಬೆಳಗ್ಗೆ 6ರಿಂದ 10ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಡೀಸಿ ಆರ್‌.ಲತಾ ಆದೇಶಿಸಿದ್ದಾರೆ.

ನಿಷೇಧಾಜ್ಞೆಗೆ ಮನವಿ ಮಾಡಿದ್ದ ಎಸ್ಪಿ: ಮತ ಎಣಿಕೆ ಹಿನ್ನೆಲೆಯಲ್ಲಿ ಸಮಾಜಘಾತುಕ ಶಕ್ತಿಗಳು ಶಾಂತಿಭಂಗ ಮಾಡುವ ಸಾಧ್ಯತೆಗಳಿರುವುದರಿಂದ ಅಹಿತಕರ ಘಟನೆಗಳು ಉಂಟಾಗುವ ಸಂಭವ ಇರುವುದರಿಂದ ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಬೇಕಿರುವ ಹಿನ್ನೆಲೆಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಹೊರಡಿಸುವ ಮೂಲಕ ನಿರ್ಬಂದಿಸಬಹುದು. ಅವಶ್ಯಕವಾಗಿರುವುದನ್ನು ಮನಗೊಂಡು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಉಲ್ಲೇಖದನ್ವಯ ಜಿಲ್ಲಾಧಿಕಾರಿ ಆರ್‌.ಲತಾ ಈ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಷರತ್ತುಗಳೇನು?: ನಿಷೇಧಾಜ್ಞೆ ಜಾರಿಗೊಳಿಸಿರುವ ಜಿಲ್ಲಾಡಳಿತ ಡಿ.9 ರಿಂದ 10ರ ಬೆಳಗ್ಗೆ 76 ಗಂಟೆಯವರೆಗೂ ಐದಕ್ಕಿಂತ ಹೆಚ್ಚು ಜನ ಸಾರ್ವಜನಿಕವಾಗಿ ಗುಂಪು ಕಟ್ಟಿಕೊಳ್ಳಬಾರದು. ಮಾರಕವಾದ ಆಯುಧಗಳನ್ನು ಹಿಡಿದು ತಿರುಗಾಡಬಾರದು. ಗೆದ್ದ ಅಭ್ಯರ್ಥಿಗಳ ಗೆಲುವಿನ ಸಂಭ್ರಮ, ಮೆರವಣಿಗೆ ನಡೆಸಬಾರದು. ಯಾವುದೇ ರೀತಿಯ ಬಂದ್‌, ಪ್ರತಿಭಟನೆ, ಮುಷ್ಕರ, ಪ್ರತಿಕೃತಿ ದಹನ ಮತ್ತಿತರ ಪೂರಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ಜಾತಿ, ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆ ಬಾಧಕ ಉಂಟಾಗುವ ರೀತಿಯಲ್ಲಿ ನಡೆದುಕೊಳ್ಳಬಾರದು. ನಿಷೇಧಾಜ್ಞೆ ಜಾರಿ ಸಂದರ್ಭದಲ್ಲಿ ಸಂತೆ, ದನಗಳ ಸಂತೆ ಹಾಗೂ ಜಾತ್ರೆ ನಿಷೇಧಿಸಲಾಗಿದೆ.

ಶುಭ ಕಾರ್ಯಗಳಿಗೆ ಅನ್ವಯಿಸುವುದಿಲ್ಲ: ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಮದುವೆ, ನಿಶ್ಚಿತಾರ್ಥ ಮತ್ತಿತರ ಶುಭ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವು ಚುನಾವಣಾ ಮತ ಎಣಿಕೆ ಕಾರ್ಯಕ್ಕೆ ನಿಯೋಜನಗೊಂಡ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಅನ್ವಯಿಸುವುದಿಲ್ಲ. ಚುನಾವಣಾ ಸಂಬಂಧ ಏರ್ಪಡಿಸಿರುವ ಮತ ಕೇಂದ್ರಕ್ಕೂ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ನಡೆಸುವ ನಿಟ್ಟಿನಲ್ಲಿ ನಿಷೇಧಾಜ್ಞೆ ವಿಧಿಸುವುದು ಅಗತ್ಯವೆಂದು ತಿಳಿದು ಕಲಂ 144 ಸೆಕ್ಷನ್‌ ಅನ್ವಯ ಡಿ.9 ರ ಬೆಳಗ್ಗೆ 6 ರಿಂದ 10ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.
-ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.