ದತ್ತಪೀಠ ಹಿಂದೂಗಳಿಗೆ ಒಪ್ಪಿಸಲು ಆಗ್ರಹಿಸಿ ಪ್ರತಿಭಟನೆ


Team Udayavani, Oct 26, 2018, 4:19 PM IST

chikk.jpg

ಚಿಕ್ಕಮಗಳೂರು: ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವಂತೆ ಒತ್ತಾಯಿಸಿ ಶ್ರೀರಾಮಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಭಜನೆ ಮಾಡುತ್ತ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಸರ್ಕಾರಿ ದಾಖಲೆಗಳೇ ದತ್ತಪೀಠವು ಹಿಂದೂಗಳಿಗೆ ಸೇರಿದ್ದು ಎಂದು ಹೇಳುತ್ತಿವೆ. 7 ನ್ಯಾಯಾಲಯಗಳಲ್ಲಿ ತೀರ್ಪು ಹಿಂದೂಗಳ ಪರವಾಗಿಯೇ ಬಂದಿದ್ದರೂ ರಾಜ್ಯ ಸರ್ಕಾರ
ದತ್ತಪೀಠವನ್ನು ಹಿಂದೂಗಳ ಪೀಠ ಎಂದು ಘೋಷಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ಹಿಂದೂಗಳು ಕಳೆದ ಹಲವು ವರ್ಷಗಳಿಂದ ತಾಳ್ಮೆಯಿಂದ ಇದ್ದಾರೆ. ತಾಳ್ಮೆ ಪರೀಕ್ಷಿಸುವುದು ಸರಿಯಲ್ಲ. ತಾಳ್ಮೆ ಕಳೆದುಕೊಂಡರೆ ಭಾರೀ ಅನಾಹುತವಾಗುತ್ತದೆ ಎಂಬ ಎಚ್ಚರಿಕೆ ಸರ್ಕಾರಕ್ಕೆ ಇರಲಿ. ಕೂಡಲೆ ದತ್ತಪೀಠವನ್ನು ಹಿಂದೂಗಳ ಪೀಠ ಎಂದು ಘೋಷಿಸಬೇಕು. ಅಲ್ಲಿಗೆ ಹಿಂದೂ ಅರ್ಚಕರನ್ನು ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಮಾಡಿಕೊಡಬೇಕು. ದತ್ತಪೀಠದಲ್ಲಿರುವ ಗೋರಿಗಳನ್ನು ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್‌ ದರ್ಗಾಕ್ಕೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿದರು.

ನ್ಯಾಯಾಲಯದ ಆದೇಶದ ಹೆಸರಿನಲ್ಲಿ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡುತ್ತಿಲ್ಲ. ಆದರೆ ಗುಹೆಯೊಳಗೆ ಮುಸ್ಲಿಮರಿಗೆ ನಮಾಜ್‌ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ದಾಖಲೆಗಳೊಂದಿಗೆ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಿಂದೂಗಳಿಗೊಂದು ನ್ಯಾಯ, ಮುಸ್ಲಿಮರಿಗೊಂದು ನ್ಯಾಯ ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಕೂಡಲೆ ಈ ವಿಚಾರದಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ 13ನೇ ವರ್ಷದ ದತ್ತಮಾಲಾ ಅಭಿಯಾನ ಕಾರ್ಯಕ್ರಮ ಕುರಿತು ವಿವರಿಸಿದ ಅವರು, ಅ. 27 ರಂದು ನಗರದಲ್ಲಿ ದತ್ತಮಾಲಾಧಾರಿಗಳು ಮನೆ ಮನೆಗೆ ತೆರಳಿ ಪಡಿ ಸಂಗ್ರಹಿಸುವರು. ಅ. 28 ರಂದು ಬೆಳಗ್ಗೆ ನಗರದ ಕಾಮಧೇನು ಗಣಪತಿ ದೇವಾಲಯದಿಂದ ಶೋಭಾಯಾತ್ರೆ ಆರಂಭಗೊಳ್ಳುತ್ತದೆ. ಶೋಭಾಯಾತ್ರೆಯು ಆಜಾದ್‌ ಪಾರ್ಕ್‌ ವೃತ್ತದವರೆಗೆ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ 5 ಸಾವಿರಕ್ಕೂ ಹೆಚ್ಚು ದತ್ತಮಾಲಾಧಾರಿಗಳು ಆಗಮಿಸಿ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವರು ಎಂದರು.

 ಶೋಭಾಯಾತ್ರೆಯ ನಂತರ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯುವುದು. ಸಭೆಯಲ್ಲಿ 5ಕ್ಕೂ ಹೆಚ್ಚುಜನ ಮಠಾಧೀಶರು, ನಾಗಾಸಾಧುಗಳು, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುಥಾಲಿಕ್‌ ಪಾಲ್ಗೊಳ್ಳುವರು ಎಂದರು. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್‌ ಶೆಟ್ಟಿ, ದುರ್ಗಾಸೇನೆ ಜಿಲ್ಲಾಧ್ಯಕ್ಷೆ ಶಾರದಮ್ಮ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.