ನೌಕರರ ಕುಟುಂಬದಿಂದ ಚಳವಳಿ
Team Udayavani, Apr 13, 2021, 4:48 PM IST
ಚಿಕ್ಕಬಳ್ಳಾಪುರ: ಆರನೇ ವೇತನ ಆಯೋಗದ ಅನುಷ್ಠಾನಕ್ಕೆ ಒತ್ತಾಯಿಸಿ, ಸಾರಿಗೆ ನೌಕರರ ಕುಟುಂ ಬದ ಸದಸ್ಯರು ತಟ್ಟೆ, ಲೋಟ ಚಳವಳಿ ನಡೆಸಿದರು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನ ರಸ್ತೆಯಮೂಲಕ ಶಿಡ್ಲಘಟ್ಟ ಸರ್ಕಲ್ವರೆಗೆಪ್ರತಿಭಟನೆ ನಡೆಸಿ, ಬಳಿಕ ಮಾನವ ಸರಪಳಿ ನಿರ್ಮಿಸಿ ಆರನೇ ವೇತನಆಯೋಗ ಅನು ಷ್ಠಾನ ಮಾಡಬೇಕು. ನ್ಯಾಯ ಯುತ ಬೇಡಿಕೆನಮ್ಮದಾಗಿದೆ. ಸರ್ಕಾರ ಬೇಡಿಕೆಯನ್ನು ಈಡೇರಿಸಬೇಕು ಎಂದುಒತ್ತಾಯಿಸಿ, ಉಪ ವಿಭಾಗಾಧಿಕಾರಿ ರಘುನಂದನ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.
ಶಾಂತಿಯುವ ಪ್ರತಿಭಟನೆ: ಕಳೆದಆರೇಳು ದಿನದಿಂದ ಮುಷ್ಕರಮಾಡುತ್ತಿದ್ದರೂ, ಸರಕಾರ ವರ್ಗಾವಣೆ ಮಾಡುವುದು, ವಜಾಮಾಡುತ್ತಿದೆ. ಶಾಂತಿಯುತವಾಗಿಪ್ರತಿಭಟನೆ ಮಾಡುತ್ತಿರುವುದಕ್ಕೆಸರಕಾರ ಕ್ರಮ ಕೈಗೊಳ್ಳುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನವ್ಯಕ್ತಪಡಿಸಿ, ನ್ಯಾಯ ದೊರೆಯುವವರೆಗೆ ಹೋರಾಟ ನಿಲ್ಲುವುದಿಲ್ಲಎಂದರು.
ಪ್ರತಿಭಟನೆಯಲ್ಲಿ ಜಿಪಂ ಸ್ಥಾಯಿಸಮಿತಿ ಅಧ್ಯಕ್ಷ ರಾಜಕಾಂತ್,ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹೋರಾಟಕ್ಕೆಬೆಂಬಲ ವ್ಯಕ್ತಪಡಿಸಿ ಭಾಗವಹಿಸಿದ್ದರು. ಪಿಎಸ್ಐ ಹೊನ್ನೆಗೌಡ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದರು
ಚಿಂತಾಮಣಿಯಲ್ಲಿ ನೌಕರರು ಮನವಿ ಸಲ್ಲಿಸಲು ಅವಕಾಶ :
ಚಿಂತಾಮಣಿ: ಸಾರಿಗೆ ನೌಕರರಿಗೆ 6ನೇ ವೇತನ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಈಡೇರಿಕೆಗಾಗಿ ಆಗ್ರಹಿಸಿ, ಕೆಎಸ್ಆರ್ಟಿಸಿ ನೌಕರರುತಮ್ಮ ಕುಟುಂಬದೊಂದಿಗೆ ತಟ್ಟೆ ಲೋಟ ಚಳವಳಿನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದುಘೋಷಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸಿಗುವಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೆ ನೀಡಬೇಕು. ಕೋವಿಡ್ ದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ರೂ., ಪರಿಹಾರ ನೀಡಬೇಕು ಸೇರಿದಂತೆ ತಮ್ಮಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ,ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹನುಮಂತ ರಾಯಪ್ಪ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಸಾರಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಗರದ ಪ್ರಮುಖರಸ್ತೆಗಳಲ್ಲಿ ತಟ್ಟೆ ಲೋಟ ಚಳವಳಿಗೆ ಮುಂದಾದರು.ಚಿಂತಾಮಣಿ ನಗರ ಠಾಣೆ ಪೊಲೀಸರು ಪ್ರವಾಸಿ ಮಂದಿರದ ಬಳಿ ತಡೆದು, ಮನವಿ ಸಲ್ಲಿಕೆಗೆ ಅವಕಾಶ ನೀಡಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಸೀಕಲ್ ರಮಣಾ ರೆಡ್ಡಿ, ಮಾನವ ಹಕ್ಕುಗಳ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಕಲ್ಲಹಳ್ಳಿ ವೆಂಕಟೇಶ್, ಛಲವಾದಿಮಹಾಸಭಾದ ಜಿಲ್ಲಾಧ್ಯಕ್ಷ ಗಣೇಶ್, ಅಖೀಲ ಕರ್ನಾಟಕರಸ್ತೆ ಸುರಕ್ಷತಾ ಸಂಘದ ರಾಜ್ಯಾಧ್ಯಕ್ಷ ಮುನೇಶ್,ಉಪಾಧ್ಯಕ್ಷ ಮುತ್ತಪ್ಪ, ತ್ಯಾಗರಾಜ್, ಆಬ್ಲೂಡುವೆಂಕಟೇಶ್, ಎಸ್.ರಾಜು ಮತ್ತು ಸಾರಿಗೆ ಇಲಾಖೆ ನೌಕರರು ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!