ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಕಲ್ಪಿಸಿ
Team Udayavani, Feb 13, 2021, 4:00 PM IST
ಚಿಕ್ಕಬಳ್ಳಾಪುರ: ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಸರ್ಕಾರಿಶಾಲೆಗಳಲ್ಲಿ ಅಡುಗೆ ಮನೆ, ಶೌಚಾಲಯ ಹಾಗೂಕುಡಿಯುವ ನೀರಿಗಾಗಿ ಪ್ರತ್ಯೇಕ ಪೈಪ್ಲೈನ್ಅಳವಡಿಸಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ಕುಮಾರ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯೋಜನೆಯಡಿ ಈಗಾಗಲೇ ಹಲವು ಕಾಮಗಾರಿ ಕೈಗೊಂಡಿದ್ದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಅಡುಗೆ ಕೊಠಡಿ, ಶೌಚಾಲಯ, ಕುಡಿಯುವುದಕ್ಕಾಗಿ ಹೀಗೆ ಮೂರು ಕಡೆ ಪ್ರತ್ಯೇಕ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಧಾರ್ ಲಿಂಕ್ ಮಾಡಿಸಿ: ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಬೇಕು. ಪಿಂಚಣಿದಾರರು ಮೃತಪಟ್ಟಿದ್ದರೆ, ಅಂತಹವರನ್ನು ಪತ್ತೆ ಮಾಡಿ, ಅವರ ಪಿಂಚಣಿ ರದ್ದು ಮಾಡಬೇಕು. ಎಲ್ಲಾ ಪಡಿತರ ಚೀಟಿಗಳಿಗೂ ಶೇ.100ರಷ್ಟು ಆಧಾರ್ ಸೀಡಿಂಗ್ನ್ನು ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದರು.
ಪೋಡಿ ಮುಕ್ತ ತಾಲೂಕು: ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ ಮೂರು ತಾಲೂಕುಗಳನ್ನು ಈಗಾಗಲೇ ಪೋಡಿಮುಕ್ತ ತಾಲೂಕುಗಳನ್ನಾಗಿಘೋಷಣೆ ಮಾಡಲಾಗಿದೆ. ಗುಡಿಬಂಡೆ ತಾಲೂಕುಜಿಲ್ಲೆಯ ಮೊಟ್ಟ ಮೊದಲ ಪೋಡಿಮುಕ್ತ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇನ್ನುಳಿದಂತೆ 3ಮೂರು ತಾಲೂಕುಗಳನ್ನು ಶೀಘ್ರದಲ್ಲೇ ಪೋಡಿಮುಕ್ತವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
1,596 ಗ್ರಾಮಗಳಿಗೆ ರುದ್ರಭೂಮಿ ಬೇಕು: ಜಿಲ್ಲೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳವಿಲೇವಾರಿ ಘಟಕಗಳ ನಿರ್ಮಾಣಕ್ಕಾಗಿ ಒಟ್ಟು 157ಪ್ರಸ್ತಾವನೆ ಸ್ವೀಕರಿಸಲಾಗಿದ್ದು, ಈ ಪೈಕಿ ಒಟ್ಟು 124 ಗ್ರಾಪಂಗಳಿಗೆ 51 ಪ್ರಸ್ತಾವನೆಗಳಿಗೆ ಮಂಜೂರಾತಿಸಿಕ್ಕಿದೆ. ಇನ್ನೂ 26 ಗ್ರಾಪಂಗಳಿಗೆ ಮ ಪಂಚಾಯಿತಿಗಳಿಗೆ ಬಾಕಿ ಇದೆ. ಇನ್ನು ಜಿಲ್ಲೆಯಲ್ಲಿರುದ್ರಭೂಮಿ ನಿರ್ಮಾಣ ಸಂಬಂಧ ಒಟ್ಟು 1,606 ಗ್ರಾಮಗಳ ಪೈಕಿ 1,596 ಗ್ರಾಮಗಳಿಗೆ ರುದ್ರಭೂಮಿ ಕಲ್ಪಿಸಲಾಗಿದ್ದು, 10 ಗ್ರಾಮಗಳಿಗೆ ರುದ್ರಭೂಮಿ ಕಲ್ಪಿಸಬೇಕಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 25 ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರ್ತಿಸಲಾಗಿದ್ದು, ಈ ಪೈಕಿ 2 ಗ್ರಾಮಗಳಿಗೆಟ್ಯಾಂಕರ್ ಮೂಲಕ ಹಾಗೂ 23 ಗ್ರಾಮಗಳಿಗೆಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್ಲೋಕೂರ್ ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಡಿವೈಎಸ್ಪಿ ರವಿಶಂಕರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅದಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ