ರೈತರಿಗೆ ಅಗತ್ಯ ಮಾಹಿತಿ ಒದಗಿಸಿ: ರಮೇಶ್ಕುಮಾರ್
Team Udayavani, Jun 24, 2021, 10:03 PM IST
ಶ್ರೀನಿವಾಸಪುರ: ರೈತರ ಜೀವಾಳವಾದಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಇಲಾಖೆಗಳು ಆಯಾ ಕಾಲಕ್ಕೆ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೃಷಿ ಚಟಿವಟಿಕೆ ಗಳಿಗೆ ಉಪಯುಕ್ತವಾದ ಸಾಧನ-ಸಲಕರಣೆ ನೀಡುವ ಮೂಲಕ ಮಾಹಿತಿ ನೀಡಬೇಕೆಂದು ಶಾಸಕಕೆ.ಆರ್. ರಮೇಶ್ಕುಮಾರ್ ಹೇಳಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅರಿವು ಮೂಡಿಸುವ ರಥಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಉಪಯೋಗವಾಗಲಿ: ರೈತರಿಗೆ ಸಂಬಂಧಪಡುವ ಎಲ್ಲಾ ಇಲಾಖೆಗಳು ರೈತರಿಗೆ ಬೇಕಾದ ಮಾಹಿತಿಯನ್ನು ಆಯಾ ಕಾಲಕ್ಕೆ ನೀಡಬೇಕು.
ಸರ್ಕಾರದಿಂದ ಬರುವ ಅನುದಾನಗಳನ್ನು ಕೃಷಿ ಸಲಕರಣೆ ಇತ್ಯಾದಿಯಾಗಿ ಒದಗಿಸಬೇಕು. ಇನ್ನು ಕಿಸಾನ್ ಸಮ್ಮಾನ್ ಯೋಜನೆ ರೈತರಿಗೆ ಉಪಯೋಗವಾಗಲಿ ಎಂದು ಆಶಿಸಿದರು. ಇದೇ ವೇಳೆ ರೈತರಿಗೆ ಬಿತ್ತನೆ ಬೀಜ ವಿತರಿಸಿದರು.
ಪ್ರಚಾರದಿಂದ ಅರಿವು: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಧ್ವನಿ ವರ್ಧಕದ ಮೂಲಕ ಪ್ರತಿ ಹೋಬಳಿಯಲ್ಲಿ 3 ದಿನ ಪ್ರಚಾರ ಮಾಡಲಾಗುತ್ತದೆ. ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುವ ಸರ್ಕಾರದ ಆದೇಶದಂತೆ ಪ್ರಚಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಶ್ರೀನಿ ವಾಸನ್, ರಾಜ್ಯ ರೈತ ಸಂಘದ ಎನ್.ಶ್ರೀರಾಮರೆಡ್ಡಿ, ಬೈರಾರೆಡ್ಡಿ, ಹೆಬ್ಬಟ ರಮೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ