ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಿ
ವಿಪಕ್ಷ ನಾಯಕ ಸಿದ್ದು ಗಮನ ಸೆಳೆದ ಕೆಪಿಸಿಸಿ ಸದಸ್ಯ ಶ್ರೀನಿವಾಸ್
Team Udayavani, May 9, 2020, 11:28 AM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಮಹಾಮಾರಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಕಷ್ಟಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರದ ಗಮನಕ್ಕೆ ತಂದು ದ್ರಾಕ್ಷಿ ಮತ್ತು ತರಕಾರಿ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿ ಕೊಡಬೇಕೆಂದು ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಶುಕ್ರವಾರ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀನಿವಾಸ್, ಕೋವಿಡ್ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಹಾಕಿದ ಬಂಡವಾಳ ಸಹ ಕೈ ಸೇರದೆ ನಷ್ಟಕ್ಕೆ ಗುರಿಯಾಗಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ಒದಗಿಸಿ ಕೊಡಬೇಕೆಂದರು. ರೈತರಿಗೆ ಕೆ.ಜಿ.ದ್ರಾಕ್ಷಿಗೆ 10, 15 ರೂ. ಸಿಗುತ್ತಿದೆ. ಇದ ರಿಂದ ತೀವ್ರ ಆರ್ಥಿಕ ನಷ್ಟಕ್ಕೆ ಗುರಿಯಾಗಬೇಕಿದೆ. ಜಿಲ್ಲೆ ಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರೈತರು ದ್ರಾಕ್ಷಿ, ಹಣ್ಣು ತರಕಾರಿ ಬೆಳೆಯುತ್ತಿದ್ದು, ಸರ್ಕಾರ
ಕೇವಲ ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ ಘೋಷಿಸಿ ದ್ರಾಕ್ಷಿ ಹಾಗೂ ಹಣ್ಣು ಮಾರಾಟಗಾರರನ್ನು ಕಡೆಗಣಿಸಿದೆ ಎಂದು ಶ್ರೀನಿವಾಸ್ ಸಿದ್ದರಾಮಯ್ಯರ ಗಮನಕ್ಕೆ ತಂದಿ ದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!