ರಸಗೊಬ್ಬರ ಮಳಿಗೆಗಳಲ್ಲಿ ದರಪಟ್ಟಿ ಪ್ರಕಟಿಸಿ
Team Udayavani, Jun 14, 2020, 6:09 AM IST
ಚಿಕ್ಕಬಳ್ಳಾಪುರ: ಮುಂಗಾರು ಹಂಗಾಮು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಕಳಪೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಕೃಷಿ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ವಹಿಸಿ ರೈತರಿಗೆ ಮೋಸ ಆಗದಂತೆ ಕ್ರಮ ವಹಿಸಬೇಕು. ಕಡ್ಡಾಯವಾಗಿ ಮಳಿಗೆಗಳಲ್ಲಿ ದರ ಪಟ್ಟಿ ಪ್ರಕಟಿಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟ ಮಾಡುವ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿ ಗುಣಮಟ್ಟ ಹಾಗೂ ದರ ನಿಗದಿ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದರು.
ಸದ್ದು ಮಾಡಿದ ಲಾಕ್ಡೌನ್ ಪರಿಹಾರ: ಸರ್ಕಾರ ಹೂವು ಬೆಳೆಗಾರರಿಗೆ ನೀಡುತ್ತಿರುವ ಪರಿಹಾರ ಕುರಿತು ಸಾಮಾನ್ಯ ಸಭೆಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಯಿತು. ಪರಿಹಾರ ಕೋರಿ ನಿರೀಕ್ಷೆಗೂ ಮೀರಿ ಅರ್ಜಿಗಳು ಬರುತ್ತಿವೆ ಎಂದು ಅಧಿಕಾರಿಗಳು ತಿಳಿಸಿದಾಗ ಅರ್ಹರಿಗೆ ಪರಿಹಾರ ಕೈ ತಪ್ಪದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದರು.
ಇಲಾಖೆ ಮುಂದೆ ಧರಣಿ ನಡೆಸುವೆ: ತಾಪಂ ಸದಸ್ಯ ಸುಬ್ಬರಾಯಪ್ಪ ಮಾತನಾಡಿ, ಜನಪ್ರತಿನಿಗಳು ಮತ್ತು ರಾಜಕಾರಣಿಗಳು ಹೇಳುವ ಹೆಸರುಗಳನ್ನು ಮಾತ್ರ ಪಟ್ಟಿಗೆ ಸೇರಿಸಿ ಪರಿಹಾರ ವಿತರಿಸುವುದಾದರೇ ನೈಜ ರೈತರನ್ನು ಕರೆತಂದು ತೋಟಗಾರಿಕಾ ಇಲಾಖೆಗೆ ಮುತ್ತಿಗೆ ಹಾಕಿಸುವುದಾಗಿ ಸಭೆಯಲ್ಲಿ ತೋಟಗಾರಿಕೆಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಇಒ ಹರ್ಷವರ್ಧನ್, ಸ್ಥಾಯಿ ಸಮಿತಿ ಅಧ್ಯಕ್ಷ ತಿರಮುಳಪ್ಪ, ಉಪಾಧ್ಯಕ್ಷೆ ಇಂದ್ರಮ್ಮ, ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!