ಮಳೆಯಾಗದ ಕಡೆ ಶೀಘ್ರ ಮೋಡ ಬಿತ್ತನೆ


Team Udayavani, Jun 16, 2019, 3:00 AM IST

male-agada

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಿತ್ತನೆ ಪ್ರಮಾಣ ಸಾಕಷ್ಟು ಕುಸಿದಿದ್ದು ಮಳೆಯಾಗದ ಕಡೆಗೆ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳಲಿದ್ದು, ಈಗಾಗಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಮೋಡ ಬಿತ್ತನೆ ಕಾರ್ಯಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಆಯ್ಕೆಯಾಗಿದ್ದ ಜಲಾಮೃತ ಹಾಗೂ ಸ್ವತ್ಛಮೇವ ಜಯತೆ ಕಾರ್ಯಕ್ರಮ ಉದ್ಘಾಟಿಸಲು ಆಗಮಿಸಿದ್ದ ವೇಳೆ ತಮ್ಮನ್ನುಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗಾಗಲೇ 18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿ ಶೇ. ಶೇ.27 ರಷ್ಟು ಗುರಿ ಸಾಧಿಸಲಾಗಿತ್ತು. ಆದರೆ ಈ ವರ್ಷ ಇದುವರೆಗೂ ಶೇ.14 ರಷ್ಟು ಪ್ರಮಾಣದಲ್ಲಿ ಮಾತ್ರ ಬಿತ್ತನೆಯಾಗಿದ್ದು, ರಾಜ್ಯಾದ್ಯಂತ ಒಟ್ಟಾರೆ 8 ಲಕ್ಷ ಹೆಕ್ಟೇರ್‌ನಷ್ಟು ಪ್ರದೇಶದಲ್ಲಿ ಬಿತ್ತನೆಗೊಂಡಿದೆ ಎಂದರು.

ರಸಗೊಬ್ಬರ ದಾಸ್ತಾನು: ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ಬಿತ್ತನೆ ಪ್ರಮಾಣ ಕುಸಿದಿದೆ. ಮೋಡ ಬಿತ್ತನೆಗೆ ಮಳೆಯಾಗುವ ಮೋಡಗಳು ಇರಬೇಕಿದ್ದು, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಉಸ್ತುವಾರಿಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ ಎಂದರು.
ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಇಲಾಖೆ ಮೂಲಕ ವಿತರಿಸಲು ಕ್ರಮ ವಹಿಸಲಾಗಿದ್ದು, ಅಗತ್ಯ ಬೇಡಿಕೆಗೆ ಅನುಗುಣಮವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದರು.

ಕಾಂಟ್ರ್ಯಾಕ್ಟ್ ಕೃಷಿ ಅಲ್ಲ: ಸಾಮೂಹಿಕವಾಗಿ ನಡೆಸುವ ಕೃಷಿಯನ್ನು ಕೆಲವರು ಕಾಂಟ್ರ್ಯಾಕ್ಟ್ ಕೃಷಿಯೆಂದು ತಪ್ಪಾಗಿ ಅರ್ಥೈಸಲಾಗಿದೆ. ಹೆಚ್ಚು ಆಹಾರ ಉತ್ಪಾದನೆ ಮಾಡುವ ದೃಷ್ಟಿಯಿಂದ 500, 1000 ಹೆಕ್ಟೇರ್‌ ಪ್ರದೇಶದಲ್ಲಿ ರೈತರನ್ನು ಒಗ್ಗೂಡಿಸಿ ಸಾಮೂಹಿಕವಾಗಿ ಕೃಷಿ ಮಾಡಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಇದರಿಂದ ರೈತರು ಒಂದೆಡೆ ಆಹಾರ ಪದಾರ್ಥಗಳನ್ನು ಬೆಳೆಯುವುದರಿಂದ ಸೂಕ್ತ ಮಾರುಕಟ್ಟೆ ಒದಗಿಸಲು ಕೂಡ ನೆರವಾಗಲಿದೆ. ಇತ್ತೀಚಿನ ದಿನಗಳಲ್ಲಿ ರೈತರು ಒಂದೆರೆಡು ಎಕರೆ ಪ್ರದೇಶದಲ್ಲಿ ಬೆಳೆ ತೆಗೆಯುತ್ತಿರುವುದರಿಂದ ರೈತರಿಗೆ ನಿಖರ ಬೆಲೆ ಸಿಗುತ್ತಿಲ್ಲ.

ಇಸ್ರೇಲ್‌ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ವಿಸ್ತರಿಸಿ ಸರ್ಕಾರವೇ ರೈತರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಕರ್ಯ, ಆಧುನಿಕ ಯಂತ್ರೋಪಕರಣಗಳನ್ನು ಒದಗಿಸಿ ಹೆಚ್ಚು ಉತ್ಪಾದನೆ ಮಾಡಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಇಲಾಖೆ ಮೂಲಕ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕೆ ಕಾನೂನು ತಿದ್ದುಪಡಿ ಕೂಡ ಮಾಡಬೇಕಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದರು.

ರಾಜೀನಾಮೆ ನೀಡಲು ಸಿದ್ಧ – ಶಿವಶಂಕರ ರೆಡ್ಡಿ: ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರಲ್ಲಿ ಅಸಮಾದಾನ ಭುಗಿಲೇಳಿರುವ ಕುರಿತು ಪತ್ರಿಕ್ರಿಯೆ ನೀಡಿದ ಕೃಷಿ ಸಚಿವ ಎನ್‌.ಹೆಚ್‌.ಶಿವಶಂಕರರೆಡ್ಡಿ, ಸದ್ಯದಲೇ ಮತ್ತೂಮ್ಮೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ವರಿಷ್ಠರ ಸೂಚನೆಯಂತೆ ನಮಗೆಲ್ಲಾ ಟೈಮ್‌ಬೌಂಡ್‌ ನಿಗದಿಯಾಗಿದೆ. ಸದ್ಯಕ್ಕೆ ಯಾರು ಅಸಮಾಧಾನ ಹೊಂದುವ ಅಗತ್ಯವಿಲ್ಲ.

ಹಿರಿಯ ಶಾಸರಿಗೆ ಸಚಿವರಾಗುವ ಅವಕಾಶ ಬರಲಿದೆ. ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು. ಬಿ.ಸಿ.ಪಾಟೀಲ್‌ಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ಆದರೆ ಪಕ್ಷದಲ್ಲಿ ಕೆಲವರಿಗೆ ತೊಂದರೆ ಆಗಿರುವುದು ನಿಜ, ಮೈತ್ರಿ ಸರ್ಕಾರದ ಪಾಲನೆಯಲ್ಲಿ ಕೆಲವೊಂದು ತೊಂದರೆಗಳಾಗುತ್ತವೆ. ಆದರೆ ಎಲ್ಲವನ್ನು ಸಹಿಸಿಕೊಂಡು ಹೋಗಬೇಕು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.