ಜಿಲ್ಲೆಯಲ್ಲಿ ಸಿಗಡಿ ಕೃಷಿ ಮಾಡಿ ಯಶಸ್ವಿಯಾದ ರಘುನಾಥ್‌ ರೆಡ್ಡಿ

ಇಂದು ವಿಶ್ವ ಮೀನುಗಾರಿಕೆ ದಿನಾಚರಣೆ

Team Udayavani, Nov 21, 2020, 3:41 PM IST

ಜಿಲ್ಲೆಯಲ್ಲಿ ಸಿಗಡಿ ಕೃಷಿ ಮಾಡಿ ಯಶಸ್ವಿಯಾದ ರಘುನಾಥ್‌ ರೆಡ್ಡಿ

ಶಿಡ್ಲಘಟ್ಟ ತಾಲೂಕಿನ ಪೂಲಕುಂಟಹಳ್ಳಿಯಲ್ಲಿ Penaeus vannamei ತಳಿಯ ಸಿಗಡಿ ಕೃಷಿ ಮಾಡಿ ಸೈ ಎನಿಸಿಕೊಂಡ ಪೂಲಕುಂಟಹಳ್ಳಿ ರಘುನಾಥ್‌ರೆಡ್ಡಿ ಮಾರಾಟ ಮಾಡಲು ಬಾಕ್ಸ್‌ಗಳಲ್ಲಿ ತುಂಬಿಸುತ್ತಿರುವುದು.

ಚಿಕ್ಕಬಳ್ಳಾಪುರ: ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಗಳಲ್ಲಿ ಸೀಮಿತವಾಗಿದ್ದ ಸಿಗಡಿ ಕೃಷಿ ಇದೀಗಬಯಲುಸೀಮೆ ಪ್ರದೇಶಕ್ಕೆ ಎಂಟ್ರಿ ಕೊಟ್ಟಿದ್ದು, ಜಿಲ್ಲೆಯಶಿಡ್ಲಘಟ್ಟ ತಾಲೂಕಿನ ಪೂಲಕುಂಟಹಳ್ಳಿ ರಘುನಾಥ್‌ರೆಡ್ಡಿ  ಎಂಬುವರು ಸಿಹಿನೀರಿ ನಲ್ಲಿ ಸಿಗಡಿ ಕೃಷಿ ಮಾಡಿ ಯಶಸ್ವಿಯಾಗಿದ್ದಾರೆ.

8 ಲಕ್ಷ ರೂ. ಆದಾಯ: ಸಾಮಾನ್ಯವಾಗಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಕರ್ನಾಟಕದ ಬಳ್ಳಾರಿ,ರಾಯಚೂರು ಜಿಲ್ಲೆ ಹಾಗೂ ನೆರೆಯ ಆಂಧ್ರಪ್ರದೇಶದ,ತಮಿಳುನಾಡು, ಮಹಾರಾಷ್ಟ್ರ ಪ್ರದೇಶದಲ್ಲಿ ಸಿಗಡಿ ಕೃಷಿಮಾಡುತ್ತಿದ್ದರು. ಆದರೆ ಜಿಲ್ಲೆಯಲ್ಲಿ ಅದರಲ್ಲೂ ಸಿಹಿ ನೀರಿನಲ್ಲಿ ಸಿಗಡಿ ಕೃಷಿ ಮಾಡುವ ಮೂಲಕ ಪೂಲಕುಂಟಹಳ್ಳಿ ರಘು ನಾಥ್‌ರೆಡ್ಡಿ ಸೈ ಎನಿಸಿಕೊಂಡಿದ್ದಾರೆ. ಕೇವಲ 90 ದಿನಗಳಲ್ಲಿ 5-6 ಲಕ್ಷ ರೂ.ಬಂಡವಾಳ ಹಾಕಿ ಇದೀಗ ಸುಮಾರು 8 ಲಕ್ಷ ರೂ. ಆದಾಯ ಗಳಿಸಿ ಮಾದರಿಯಾಗಿದ್ದಾರೆ.

ವರದಾನ ನಿರೀಕ್ಷೆ: ಚಿಕ್ಕಬಳ್ಳಾಪುರ ಜಿಲ್ಲೆ ಎಂದರೆ ನೆನಪಾಗುವುದು ಬರಪೀಡಿತ ಜಿಲ್ಲೆ ಎಂದು. ಆದರೆ ಮಳೆಯ ನೀರನ್ನು ಆಶ್ರಯಿಸಿಕೊಂಡು ರೇಷ್ಮೆ, ತರಕಾರಿ, ಹಾಲು ಉತ್ಪಾದನೆಯಲ್ಲಿದೇಶ ವಿದೇಶದಲ್ಲಿ ಖ್ಯಾತಿ ಹೊಂದಿರುವ ಜಿಲ್ಲೆಯಲ್ಲಿ ಇದೀಗ ಸಿಗಡಿ ಕೃಷಿ ಪಾದಾರ್ಪಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬರಪೀಡಿತ ತಾಲೂಕಿನ ಜನರಿಗೆ ಇದು ವರದಾನವಾಗ ಬಹುದೆಂದು ನಿರೀಕ್ಷಿಸಲಾಗಿದೆ.

2 ಲಕ್ಷ ಮರಿ, 4 ಟನ್‌ ಫೀಡ್‌: ಮುಕ್ಕಾಲು ಎಕರೆ ಪ್ರದೇಶದಲ್ಲಿ 100 ಅಡಿ ಅಗಲ 300 ಅಡಿ ಉದ್ದ ಹೊಂಡ ನಿರ್ಮಿಸಿ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಿಂದ 80 ಸಾವಿರ ವೆಚ್ಚ ಮಾಡಿ 2 ಲಕ್ಷ ಮರಿ ತಂದು ಸಿಗಡಿ ಕೃಷಿ ಮಾಡಿದ್ದಾರೆ. ಅದಕ್ಕೆ ಮೂರು ತಿಂಗಳ ಅವಧಿಯಲ್ಲಿ4 ಟನ್‌ ಫೀಡ್‌ ನೀಡಿದ್ದಾರೆ.

ನಿರೀಕ್ಷೆಗಿಂತ ಅಧಿಕ ಇಳುವರಿ: ಸಿಗಡಿ ಕೃಷಿ ಮಾಡಲು ನಿರ್ವಹಣೆಗಾಗಿ ಒಬ್ಬರನ್ನು ನೇಮಕ ಮಾಡಿ ಮೂರು ತಿಂಗಳಿಗೆ60 ಸಾವಿರ ರೂ.ಕೂಲಿ ನೀಡಿರುವ ರೈತ ಪೂಲಕುಂಟ ಹಳ್ಳಿ ರಘುನಾಥ್‌ರೆಡ್ಡಿ ಅವರಿಗೆ ನಿರೀಕ್ಷೆಗಿಂತಲೂ ಅಧಿಕ ಸಿಗಡಿ ಇಳುವರಿ ಬಂದಿದ್ದು, ಮೊದಲ ಪ್ರಯೋಗದಲ್ಲಿ ಯಶಸ್ವಿಯಾದ ಬಳಿಕ ಸಂತಸಗೊಂಡಿದ್ದಾರೆ. ಮೀನುಗಾರಿಕೆ ಯಲ್ಲಿ ಪಿಹೆಚ್‌ಡಿ ಮಾಡಿರುವ ಡಾ. ವಿಶ್ವನಾಥ್‌ರೆಡ್ಡಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿ ಸಹಾ ಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ನಾಗೇಂದ್ರ ಅವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ತಮ್ಮ ಜಮೀನಿನಲ್ಲಿ ನೀರಿನ ಹೊಂಡ ನಿರ್ಮಿಸಿ ಆಂಧ್ರದ ನೆಲ್ಲೂಲು ಜಿಲ್ಲೆಯಿಂದ ಮರಿಗಳನ್ನು ತಂದು ಸಾಕಾಣಿಕೆ ಮಾಡಿ ಆದಾಯ ಗಳಿಸಿದ್ದೇನೆ. ನೆಲ್ಲೂರಿನ ಇಮ್ರಾನ್‌ ಪಾಷ ಎಂಬುವರಿಗೆ ಒಂದು ಕೆ.ಜಿ. 300 ರೂ.ಗಳಂತೆ ನಾಲ್ಕೂವರೆ ಟನ್‌ ಸೀಗಡಿ ಮಾರಾಟ ಮಾಡಿದ್ದೇನೆ. ಒಂದು ಕೆ.ಜಿ. 50 ಬಂದರೆ 35 ದರಕ್ಕೆ ಮಾರಾಟವಾಗುವ ಸೀಗಡಿಯನ್ನು ಬೆಳೆಸಲು ಬಯಲುಸೀಮೆ ಜಿಲ್ಲೆಯ ಭಾಗಗಳ ರೈತರು ಪ್ರಯೋಗ ಮಾಡಿ ಆರ್ಥಿಕವಾಗಿ ಅಭೀವೃದ್ಧಿ ಹೊಂದಬೇಕೆಂದು ಪ್ರಗತಿಪರ ರೈತ ಪೂಲಕುಂಟ ಹಳ್ಳಿ ರಘುನಾಥ್‌ರೆಡ್ಡಿ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಪ್ರಯೋಗ ಇದೇ ಮೊದಲು :  ಸಾಮಾನ್ಯವಾಗಿ ಕರಾವಳಿ ಭಾಗದಲ್ಲಿ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಹಾಗೂ ನೆರೆ ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ಪ್ರದೇಶದಲ್ಲಿ ಸೀಗಡಿ ಉಪ್ಪುನೀರಿನಲ್ಲಿ ಸಾಕಾಣಿಕೆ ಮಾಡುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಯೋಗ ಮಾಡಿ

ಪೂಲಕುಂಟಹಳ್ಳಿ ರಘುನಾಥ್‌ರೆಡ್ಡಿ ಯಶಸ್ವಿಯಾಗಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿ ನಾಗೇಂದ್ರ (ಚಿಕ್ಕಬಳ್ಳಾಪುರ ಜಿಲ್ಲೆಯಿಂದ ವರ್ಗಾವಣೆಯಾಗಿದ್ದಾರೆ) ತಿಳಿಸಿದ್ದಾರೆ. ಉದಯವಾಣಿಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ರೈತರು ಸೀಗಡಿ ಕೃಷಿ ಮಾಡಿ ಲಾಭಗಳಿಸ ಬಹುದಾಗಿದೆ. ಒಂದುಕೆ.ಜಿ.300 ರೂ.ಗಳಿಗೆ ಮಾರಾಟವಾಗು ತ್ತದೆ. ಇದರಲ್ಲಿ ಪ್ರೊಟೀನ್‌35% ರಷ್ಟಿದೆ. ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕ ಆಹಾರ. ಇದನ್ನು ದೊಡ್ಡ ದೊಡ್ಡ ಹೋಟೆಲ್‌ಗ‌ಳಲ್ಲಿ ಫ್ರೈ ಮಾಡಿ ಮಾರಾಟ ಮಾಡುತ್ತಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ 10 ಎಕರೆ ಪ್ರದೇಶದಲ್ಲಿ ಸೀಗಡಿ ಕೃಷಿಯನ್ನು ವಿಸ್ತರಿಸಲುಯೋಜನೆ ರೂಪಿಸಿ ಅದಕ್ಕಾಗಿ 100 ಸೋಲಾರ್‌ ದೀಪಗಳನ್ನು ಅಳವಡಿಸಿ ಪೂಲಕುಂಟಹಳ್ಳಿಯಲ್ಲಿ ಸೋಲಾರ್‌ ಘಟಕ ಆರಂಭಿಸಲು ಚಿಂತನೆ ಮಾಡಿದ್ದೇನೆ. ಪೂಲಕುಂಟಹಳ್ಳಿ ರಘುನಾಥ್‌ರೆಡ್ಡಿ, ಪ್ರಗತಿಪರ ರೈತ

 

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.