ಶ್ವೇತಪತ್ರ ಹೊರಡಿಸಲು ಸಿದ್ಧ
Team Udayavani, Jul 2, 2020, 6:30 AM IST
ಚಿಕ್ಕಬಳ್ಳಾಪುರ: ಕೋವಿಡ್-19 ವಿಚಾರದಲ್ಲಿ ಶ್ವೇತ ಪತ್ರ ಹೊರಡಿ ಸಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು, “ಶ್ವೇತ ಪತ್ರ ಹೊರಡಿಸಲು ಸರ್ಕಾರ ಬದ್ಧವಾಗಿದೆ. ಆದರೆ, ವಿರೋಧ ಪಕ್ಷಗಳು ಕೋವಿಡ್ 19 ವಿಚಾರದಲ್ಲಿ ರಾಜಕಾರಣ ಕೈ ಬಿಟ್ಟು ಸರ್ಕಾರದೊಂದಿಗೆ ಕೈ ಜೋಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಹಕಾರ ನೀಡಬೇಕು’ ಎಂದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೂನ್ 2020ಕ್ಕೆ ನಿವೃತ್ತಿಯಾಗುತ್ತಿದ್ದ ಆರೋಗ್ಯ ಇಲಾಖೆ ವೈದ್ಯರ ಹಾದಿಯಾಗಿ ಕ್ಲಿನಿಕಲ್, ನಾನ್ ಕ್ಲಿನಿಕಲ್ ಸಿಬ್ಬಂದಿ ಸೇವೆಯನ್ನು 6 ತಿಂಗಳು ಮುಂದುವರಿಸಲು ಸರ್ಕಾರ ಕ್ರಮ ಕೈಗೊಂಡು ಆದೇಶ ಹೊರಡಿಸಿದೆ ಎಂದರು. ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.
ವಿಶೇಷವಾಗಿ ಆಯುಷ್ ಇಲಾಖೆ ಜೊತೆಗೆ ಚರ್ಚೆ ನಡೆಸಿ ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರಿಗೆ ಆಯುಷ್ ಇಲಾಖೆಯಿಂದ ರೋಗ ನಿರೋಧ ಶಕ್ತಿ ನೀಡುವ ಔಷಧ, ಮಾತ್ರೆಯನ್ನು ಸುಮಾರು 42 ಸಾವಿರ ಮಂದಿಗೆ ತರಿಸಲಾಗಿದೆ. ಸುಮಾರು 10 ಸಾವಿರ ಬೆಡ್ ಮೀಸಲಿಡಲಾಗಿದ್ದು ಚಿಕಿತ್ಸೆಗೆ ಮೂಲ ಸೌಕರ್ಯ ಕೊರತೆ ಇಲ್ಲ ಎಂದುತಿಳಿಸಿದರು.
ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಗೆ ಕೋವಿಡ್ 19 ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಘೋಷಣೆ ಅಗತ್ಯವಿಲ್ಲ. ಆಯುಷ್ ವೈದ್ಯಕೀಯ ಪದ್ಧತಿಯಿಂದ ಕೋವಿಡ್ 19 ಮಹಾಮಾರಿಯನ್ನು ನಿಯಂತ್ರಣಕ್ಕೆ ತರಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜನತೆ ಅಗತ್ಯ ಸಹಕಾರ ನೀಡಬೇಕು.
-ಬಿ.ಶ್ರೀರಾಮುಲು, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ