ಫಸಲ್ ಬಿಮಾ ಹಣ ಬಿಡುಗಡೆ ಮಾಡಿ
Team Udayavani, Mar 25, 2022, 3:18 PM IST
ಗೌರಿಬಿದನೂರು: 2021-22ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಬೆಳೆ ವಿಮೆ ಹಣ ಈ ಕೂಡಲೇ ಸರ್ಕಾರ ಹಾಗೂ ವಿಮಾ ಕಂಪನಿಯು ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಗುಂಡಾಪುರ ಲೋಕೇಶ್ಗೌಡ ತಿಳಿಸಿದರು.
ನಗರದ ಕೃಷಿ ಇಲಾಖೆ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು, ಕಳೆದ ವರ್ಷ ಹಿಂಗಾರು ಮಳೆಯಿಂದ ತಾಲೂಕಿನಲ್ಲಿ ಬೆಳೆ ನಷ್ಟವಾಗಿದೆ. 2021-22ನೇ ಸಾಲಿನ ಹಂಗಾಮಿನಲ್ಲಿ ತಾಲೂಕಿನಲ್ಲಿ 2,526 ರೈತರು ಬೆಳೆ ವಿಮೆ ಪಾವತಿಸಿದ್ದು, ಎಲ್ಲಾ ಬೆಳೆ ಸಂಪೂರ್ಣ ನಾಶವಾಗಿವೆ ಎಂದು ಹೇಳಿದರು.
ಕೃಷಿ ಅಧಿಕಾರಿಗಳು ಶೇ.30ರಿಂದ 40 ಮಾತ್ರ ನಷ್ಟವಾಗಿದೆ ಎಂದು ಸರ್ಕಾರಕ್ಕೆ ವರದಿ ಮಾಡಿ, ರೈತರಿಗೆ ಮೋಸ ಮಾಡಿದ್ದಾರೆ. ಇದರಿಂದ ರೈತರು ಬೀದಿ ಪಾಲಾಗಿದ್ದಾರೆ. ಸಕಾಲಕ್ಕೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು. ಇದರಿಂದ ಈ ಬಾರಿ ಮುಂಗಾರು ಬಿತ್ತನೆ ಮಾಡಲು ಅನುಕೂಲ ಆಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.
ರೈತ ಮುಖಂಡರಾದ ಮುದ್ದರಂಗಪ್ಪ, ಸನತ್ಕುಮಾರ್, ರಾಜು, ಹನುಮಂತಪ್ಪ, ಬಾಬು, ನರಸರೆಡ್ಡಿ, ರಾಮಚಂದ್ರರೆಡ್ಡಿ, ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!