ಸಕಾಲಕ್ಕೆ ಸಾಲ ಮರು ಪಾವತಿಸಿ
Team Udayavani, Jun 22, 2020, 7:33 AM IST
ಚಿಕ್ಕಬಳ್ಳಾಪುರ: ಆರ್ಯವೈಶ್ಯ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಫಲಾನುಭವಿಗಳು ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಿ ಇತರ ಕುಟುಂಬಗಳಿಗೂ ಅನುಕೂಲ ಕಲ್ಪಿಸಲು ನೆರವಾಗಬೇಕು ಎಂದು ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಅರುಣ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 87 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ತಲಾ ಒಂದು ಲಕ್ಷದಂತೆ 87 ಲಕ್ಷ ರೂ. ನೀಡಲಾಗುತ್ತಿದೆ.
ನನ್ನ ವಿವೇಚನಾಧಿಕಾರ ಬಳಸಿ 13 ಲಕ್ಷ ರೂ. ಹೆಚ್ಚುವರಿಯಾಗಿ ನೀಡಲು ಕ್ರಮ ವಹಿಸಿ ಜಿಲ್ಲೆಗೆ 1 ಕೋಟಿ ಅನುದಾನವನ್ನು 100 ಕುಟುಂಬಗಳಿಗೆ ನೀಡಲಾಗುತ್ತದೆ ಎಂದರು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ 1 ಲಕ್ಷ ರೂ.ಆರ್ಥಿಕ ನೆರವು ಒದಗಿಸಲಾಗುವುದು. ಸಾಂಪ್ರದಾಯಕ ವೃತ್ತಿಗಳಲ್ಲದೇ ಹಸು ಸಾಕಾಣಿಕೆ, ಸೇವಾ ಚಟುವಟಿಕೆ, ಚಕ್ಕಲಿ, ನಿಪ್ಪಟ್ಟು ತಯಾರಿಸಿ ಮಾರಾಟ ಮಾಡುವ ಸಣ್ಣ ವ್ಯಾಪಾರಿಗಳು ಸಹ ಈ ನೆರವು ಪಡೆದುಕೊಳ್ಳಬಹುದು.
ಯೋಜನೆಯಡಿ ಕನಿಷ್ಠ 50 ಸಾವಿರ ರೂ. ನೆರವು ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. 20 ರಷ್ಟು ಸಹಾಯಧನವಾಗಿ ಉಳಿದ ಮೊತ್ತವನ್ನು ಸಾಲದ ರೂಪದಲ್ಲಿ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವುದು. ಅರ್ಜಿದಾರರು 45 ವರ್ಷಕ್ಕಿಂತ ಒಳಗಿನವರಾಗಿರಬೇಕು ಎಂದು ಮಾಹಿತಿ ನೀಡಿದರು. ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ನೀಡಲಾಯಿತು. ಸಭೆಯಲ್ಲಿ ಆರ್ಯವೈಶ್ಯ ಸಮುದಾಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?