ಕಾಂಗ್ರೆಸ್ ಅವಧಿ ಸಾಧನೆ ತಿಳಿಸಿ
Team Udayavani, Jul 3, 2020, 6:44 AM IST
ಶಿಡ್ಲಘಟ್ಟ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಜನಪರ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಎಲ್ಲಾ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕೆಂದು ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಹ್ಮಣಿ ಹೇಳಿದರು.
ತಾಲೂಕಿನ ಚೀಮಂಗಲ ಗ್ರಾಪಂನ ಯಣ್ಣೂರು ಗ್ರಾಮದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ಪ್ರತಿಜ್ಞೆ ದಿನ ಕಾರ್ಯ ಕ್ರಮದಲ್ಲಿ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದ ಅವರು, ಹಳ್ಳಿಯಿಂದ ದೆಹಲಿವರೆಗೆ ಕಾಂಗ್ರೆ ಸ್ ಪಕ್ಷವನ್ನು ತಳಮಟ್ಟದಿಂದ ಬಲ ಗೊಳಿ ಸಲು ಕಾಂಗ್ರೆಸ್ ಮುಖಂಡರು ದೃಢ ಸಂಕಲ್ಪ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅಧಿಕಾರ ಸ್ವೀಕರಿಸಿದ್ದು, ಪಕ್ಷದಲ್ಲಿ ಕಾರ್ಯಕರ್ತರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಸಹಕಾರಿಯಾಗಿದೆ ಎಂದರು. ಚೀಮಂಗಲ ಗ್ರಾಪಂ ಕಾಂಗ್ರೆಸ್ ಮುಖಂಡ ವೈ.ಬಿ.ಮಂಜುನಾಥ್ ಮಾತ ನಾಡಿ, ಜಿಲ್ಲೆಯಲ್ಲಿ ಕ್ಷೇತ್ರವನ್ನು ಮಾದರಿ ಯಾಗಿ ಪರಿವರ್ತಿಸಲು ಶಾಸಕರು ಕಾಳಜಿ ವಹಿಸಿದ್ದಾರೆ ಎಂದರು.
ಗ್ರಾಪಂ ಅಧ್ಯಕ್ಷೆ ಶ್ಯಾಮಲಮ್ಮ, ಚೀಮಂಗಲ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಅತ್ತಿ ಗಾನ ಹಳ್ಳಿ ನರಸಿಂಹಮೂರ್ತಿ, ಕೆಜಿಪುರ ಚಂದ್ರಪ್ಪ, ಗ್ರಾಪಂ ಸದಸ್ಯ ಮುನಿಕೃಷ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ