ಮೋಟಾರು ವಾಹನ ಕಾಯ್ದೆ ಹಿಂಪಡೆಯಲು ಆಗ್ರಹ
Team Udayavani, Sep 20, 2019, 3:40 PM IST
ಚಿಂತಾಮಣಿ: ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆಯಿಂದ ಸಾರ್ವಜನಿಕರಿಗೆ, ಕಕ್ಷಿದಾರರಿಗೆ ಹಾಗೂ ವಕೀಲರಿಗೆ ತೊಂದರೆಯಾಗುತ್ತಿದೆ. ಕೂಡಲೇ ಈ ಕಾಯ್ದೆ ಹಿಂಪಡೆದು ಹಳೆ ಮೋಟಾರ್ ಕಾಯ್ದೆಯನ್ನೇ ಮುಂದುವರಿಸುವಂತೆ ಒತ್ತಾಯಿಸಿ ಚಿಂತಾಮಣಿಯಲ್ಲಿ ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟಿಸಿದರು.
ವಕೀಲರ ಸಂಘದ ಅಧ್ಯಕ್ಷ ಎಸ್.ರಾಜಾರಾಮ್ ಮಾತನಾಡಿ, ಕೇಂದ್ರದ ಮೋಟಾರ್ ವಾಹನ ಕಾಯ್ದೆಯಿಂದ ವಕೀಲರುಸೇರಿದಂತೆ ಸಾರ್ವಜನಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕಾರಣ ಜನತೆ ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಕಾಯ್ದೆಯನ್ನು ರದ್ದು ಮಾಡದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಕೆ.ವಿ.ಶ್ರೀನಾಥ್, ಜಂಟಿ ಕಾರ್ಯದರ್ಶಿ ರಮೇಶ್, ಖಜಾಂಚಿ ಪಿಳ್ಳೇಗೌಡ ಸೇರಿದಂತೆ ಎಲ್ಲಾ ವಕೀಲರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ