ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಂಶೋಧನೆ ಅಗತ್ಯ


Team Udayavani, May 18, 2019, 3:00 AM IST

samasye

ಚಿಕ್ಕಬಳ್ಳಾಪುರ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಿಂದ ಜಾಗತಿಕ ಮಟ್ಟದಲ್ಲಿ ಅನೇಕ ರಂಗಳಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆ ಕಾಣುತ್ತಿದ್ದು, ಸಮಾಜದಲ್ಲಿ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಶೋಧನಾ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಬೆಂಗಳೂರಿನ ಟಾಟಾ ಕನ್ಸಲ್‌ಟೆನ್ಸಿ ಗೋಬಲ್‌ ಹೆಡ್‌ ಇ.ಎಸ್‌.ಚಕ್ರವರ್ತಿ ತಿಳಿಸಿದರು.

ನಗರದ ಹೊರ ವಲಯದ ಚಂದ್ರಶೇಖರನಾಥ ಸ್ವಾಮೀಜಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸೆಮಿನಾರ್‌ ಹಾಲ್‌ನಲ್ಲಿ ಶುಕ್ರವಾರ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ ಆರಂಭಗೊಂಡ ಎರಡು ದಿನಗಳ ಅಂತಾರಾಷ್ಟ್ರೀಯ ಎರಡನೇ ಸಮ್ಮೇಳನದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಉತ್ತಮ ಸಂವಹನದ ಸಹಾಯದಿಂದ ದೇಶ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಪ್ರಗತಿ ಸಾಧಿಸಲು ಸಾಧಿಸಲು ಸಹಾಯವಾಗಿದೆ. ವಿಜ್ಞಾನ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಹೆಚ್ಚಾದಂತೆ ಪ್ರತಿಯೊಬ್ಬರು ಜೀವನ ಶೈಲಿ ಕೂಡ ಬದಲಾಗುತ್ತದೆ. ಜೀವನ ಮಟ್ಟ ಕೂಡ ಸುಧಾರಣೆಗೊಳ್ಳುತ್ತದೆ ಎಂದರು.

ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತೆಗೆಯುವ ದಿಸೆಯಲ್ಲಿ ಉಪನ್ಯಾಸಕರು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಹೊರ ಬರಲು ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸ: ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನ್ಯಾಷನಲ್‌ ಏರೋಸ್ಟೇಸ್‌ ಲ್ಯಾಬೋರೇಟರಿ ನಿರ್ದೇಶಕ ಡಾ.ಬಿ.ಬಾಲ್ಯಸುಬ್ರಹ್ಮಣ್ಯಂ ಮಾತನಾಡಿ, ಇಂದಿನ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿನ ಸಮಸ್ಯೆ, ಸವಾಲುಗಳು, ಬಾಹ್ಯಕಾಶ ಕ್ಷೇತ್ರದಲ್ಲಿರುವ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಕ್ರಿಯಾಶೀಲ ಚಟುವಟಿಕೆಗಳಿಂದ ಸಜ್ಜುಗೊಳಿಸಿದಾಗ ಮಾತ್ರ ದೇಶ ಉತ್ತಮ ಪ್ರಗತಿ ಸಾಧಿಸಲು ಸಾಧ್ಯ ಎಂದರು.

ಬಿಜಿಎಸ್‌ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಮುನಿಕೆಂಚೇಗೌಡ, ಬಿಜಿಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್‌.ಶಿವರಾಮರೆಡ್ಡಿ, ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಂ.ರವಿಕುಮಾರ್‌ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಮ್ಮೇಳನದ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಮ್ಮೇಳನಕ್ಕೆ 132 ಸಂಶೋಧನಾ ಪತ್ರಿಕೆಗಳು ಆಯ್ಕೆ: ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಆರಂಭಗೊಂಡಿರುವ ಎರಡು ದಿನಗಳ ಜಾಗತಿಕ ಎರಡನೇ ಸಮ್ಮೇಳನದಲ್ಲಿ ಸುಮಾರು 132 ಕ್ಕೂ ಹೆಚ್ಚು ತಾಂತ್ರಿಕ ನಿಯತಕಾಲಿಕೆ ಪೇಪರ್‌ಗಳು ಆಯ್ಕೆಗೊಂಡಿವೆ.

ಆ ಪೈಕಿ ತಾಂತ್ರಿಕ ವಿಭಾಗ ಹಾಗೂ ಏರೋಸ್ಟೇಸ್‌ ವಿಭಾಗದಿಂದ 27, ಯಾಂತ್ರಿಕ ವಿಭಾಗದಿಂದ 17, ಗಣಕಯಂತ್ರ ಹಾಗೂ ಮಾಹಿತಿ ತಂತ್ರಜ್ಞಾನದಿಂದ 48, ವಿದ್ಯುನ್ಮಾನ ವಿಭಾಗ ಹಾಗೂ ದೂರ ಸಂಪರ್ಕ ವಿಭಾಗದಿಂದ 40 ಪೇಪರ್‌ಗಳು ಸೇರಿ ಒಟ್ಟು 132ಕ್ಕೂ ಅಧಿಕ ಸಂಶೋಧನಾ ಪತ್ರಿಕೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುಜಿಸಿ ಮತ್ತು ಸ್ಕೂಪಸ್‌ ಜರ್ನಲ್‌ನಲ್ಲಿ ಪ್ರಕಟಗೊಂಡಿವೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಂ.ರವಿಕುಮಾರ್‌ ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ದೇಶದ ಅಭಿವೃದ್ಧಿಯಲ್ಲಿ ಎರಡು ಕಣ್ಣುಗಳು ಇದ್ದಂತೆ. ಜಾಗತಿಕವಾಗಿ ಇಂದು ಭಾರತ ಹೆಚ್ಚು ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದರೆ ಅದಕ್ಕೆ ಭಾರತ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯೇ ಕಾರಣ. ತಾಂತ್ರಿಕ ವಿದ್ಯಾರ್ಥಿಗಳು ಗ್ರಾಮೀಣ ರೈತಾಪಿ ಜನರ ಅಭಿವೃದ್ಧಿಗೆ ಪೂರಕವಾಗಿ ಹೆಚ್ಚು ಸಂಶೋಧನೆಗಳು ಮಾಡುವುದರಿಂದ ದೇಶದ ಭವಿಷ್ಯ ಇನ್ನಷ್ಟು ಉಜ್ವಲಗೊಳ್ಳುತ್ತದೆ.
-ಮಂಗಳಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠ

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.