20ಕ್ಕೆ ಮೀಸಲಾತಿಗಾಗಿ ಹೋರಾಟ
Team Udayavani, May 16, 2022, 5:57 PM IST
ಗುಡಿಬಂಡೆ: ಪಟ್ಟಣದಲ್ಲಿ ಮೇ 20 ರಂದು ನಡೆಯುವ ಪ.ಜಾತಿ ಮತ್ತು ಪಂಗಡ ಮೀಸಲಾತಿ ಹೋರಾಟದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಾಲ್ಮೀಕಿ ನಾಯಕರ ಸಂಘದ ತಾಲೂಕು ಅಧ್ಯಕ್ಷ ಎನ್.ವಿ.ಗಂಗಾಧರ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1958ರ ಬಳಿಕನಡೆದ 1961ರ ಮತ್ತು 2011 ಜನಗಣತಿಗೆ ಅನುಗುಣವಾಗಿ ಶೇ. 21 ಜನಸಂಖ್ಯೆ ಹೆಚ್ಚಾಗಿದೆ. 1958 ರಲ್ಲಿ ನಿಗದಿ ಪಡಿಸಿರುವಂತೆ ಈಗಲೂ ಮೀಸಲಾತಿ ನೀಡುತ್ತಿದ್ದು, ಇದನ್ನು ತಿದ್ದು ಪಡಿ ಮಾಡಿ ಮೀಸಲಾತಿ ಹೆಚ್ಚಿಸುವಂತೆ ಕೋರಿದರೂ ಯಾವುದೇ ಕ್ರಮಕೈಗೊಂಡಿಲ್ಲ.
ಈ ಸಂಬಂಧ ಪರಿಶಿಷ್ಟ ಪಂಗಡದ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಮ್ಮಿಕೊಂಡಿರುವ ಬೃಹತ್ 400 ಕಿ.ಮೀ ಗೂ ಹೆಚ್ಚು ದೂರದ ಪಾದಯಾತ್ರೆಗೆ ಬೆಂಬಲಿಸಿ ಇದರಿಂದಾಗಿ ಮೇ ತಿಂಗಳ 20ರಂದು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಪ.ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸರ್ಕಾರಕ್ಕೆ ಒತ್ತಡ ಹೇರಲು ಸಹಕರಿಸಬೇಕು ಎಂದರು.
ನಂತರ ಡಿ.ಎಸ್.ಎಸ್. ಮುಖಂಡ ಜಿ.ವಿ.ಗಂಗಪ್ಪ ಮಾತನಾಡಿ, ಪ.ಜಾತಿ ಮತ್ತು ಪ.ಪಂಗಡದವರಿಗೆ ಶೆ„ಕ್ಷಣಿಕ ಮತ್ತು ಸರ್ಕಾರದ ಸೇವೆಗಳಲ್ಲಿನ ಮೀಸಲಾತಿ ಪ್ರಮಾಣವನ್ನು ಜನ ಸಂಖ್ಯೆ ಗನಗುಣವಾಗಿ ಶೇ 17 ಮತ್ತು ಶೇ 7.5ಕ್ಕೆ ಹೆಚ್ಚಿಸಬೇಕು. ಹೀಗಾಗಿ ಧರಣಿಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಪ್ರಸ್ ಸುಬ್ಬರಾಯಪ್ಪ, ಬೀಚಗಾನಹಳ್ಳಿ ನರೇಂದ್ರ, ಕಡೇಹಳ್ಳಿ ಅನಂದ, ಅಂಜಿನಪ್ಪ, ಪ.ಪಂ ಮಾಜಿ ಅಧ್ಯಕ್ಷ ನಾಗರಾಜ್, ಜೀವಿಕ ನಾರಾಯಣಸ್ವಾಮಿ, ಅಮರಾ ವತಿ, ನರಸಿಂಹಪ್ಪ, ಶಿವಪ್ಪ, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ