ಪಕ್ಷದ ಆದೇಶದಂತೆ ರಾಜೀನಾಮೆ


Team Udayavani, Oct 2, 2019, 3:00 AM IST

pakshda

ಚಿಕ್ಕಬಳ್ಳಾಪುರ: ಜಾತಿ ಬಲ, ಹಣ ಬಲ ಇಲ್ಲದ ನನ್ನನ್ನು ಗುರುತಿಸಿ ಪಕ್ಷ ಜಿಪಂ ಅಧ್ಯಕ್ಷರಾಗಿ ಆಯ್ಕೆ ಮಾಡಿತು. ಪಕ್ಷದ ಆದೇಶದಂತೆ ರಾಜೀನಾಮೆ ಕೊಟ್ಟಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ಪಕ್ಷದ ಆದೇಶಕ್ಕೆ ವಿರುದ್ಧವಾಗಿ ನಡೆಯುವ ಸ್ವಭಾವ ನನ್ನದ್ದಲ್ಲ ಎಂದು ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಚ್‌.ವಿ.ಮಂಜುನಾಥ ಸ್ಪಷ್ಟಪಡಿಸಿದರು.

ಜಿಪಂ ಮಿನಿ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರ ಹಿಂದೆ ಯಾರದೇ ಒತ್ತಡ ಇಲ್ಲ. ಮೊದಲೇ ಮಾತುಕತೆಯಂತೆ ಪಕ್ಷದ ಆದೇಶ ಪಾಲಿಸಿ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಹಿಂದಿನ ಕಾರಣವನ್ನು ಸುದ್ದಿಗೋಷ್ಠಿಯಲ್ಲಿ ತೆರೆದಿಟ್ಟರು.

19 ತಿಂಗಳ ಜಿಪಂ ಅಧ್ಯಕ್ಷರಾಗಿ ನನಗೆ ವಹಿಸಿದ ಕೆಲಸವನ್ನು ಅಧಿಕಾರ ಎಂದು ಭಾವಿಸದೇ ಜವಾಬ್ದಾರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಸ್ಥಾನಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡಿದ್ದೇನೆ ಎಂದರು. ಜಿಲ್ಲೆಯಲ್ಲಿ ಒಂದಷ್ಟು ಬದಲಾವಣೆ ಆಗಿದೆ ಎಂದರೆ ಅದಕ್ಕೆ ಅಧಿಕಾರಿಗಳ ಸಹಕಾರ ಮುಖ್ಯ ಕಾರಣ. ಹಿಂದಿನ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಜಿಪಂ ಸಿಇಒ ಆಗಿದ್ದ ಗುರುದತ್‌ ಹೆಗಡೆರನ್ನು ಸ್ಮರಿಸಿದರು.

ಶೈಕ್ಷಣಿಕ ಕಾರ್ಯಪಡೆ ರಚನೆ: ನಾವು ಕಳೆದ ವರ್ಷ ಭಾವನಾತ್ಮಕವಾಗಿ ಕೈಗೊಂಡ ಹಲವು ಕ್ರಮಗಳಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಸುಧಾರಣೆಗೊಂಡು 30ನೇ ಸ್ಥಾನದಲ್ಲಿದ್ದ ಜಿಲ್ಲೆ 20ನೇ ಸ್ಥಾನಕ್ಕೆ ಬಂದಿದೆ. ಇದರ ಹಿಂದೆ ಅಧಿಕಾರಿಗಳ ಶ್ರಮ ಬಹಳ ಇದೆ. ಈ ವರ್ಷ ಜಿಲ್ಲೆಯಲ್ಲಿ ಫ‌ಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ತಜ್ಞರನ್ನು ಒಳಗೊಂಡಂತೆ ಶೈಕ್ಷಣಿಕ ಕಾರ್ಯಪಡೆ ರಚಿಸಲಾಗಿದೆ ಎಂದರು.

55 ಮಂದಿ ಅತಿಥಿ ಶಿಕ್ಷಕರು: ಪ್ರತಿ ಪ್ರೌಢ ಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಮಾಡಲು ಪ್ರೊಜೆಕ್ಟರ್‌ಗಳನ್ನು ದಾನಿಗಳ ಸಹಕಾರದಿಂದ ವಿತರಿಸಲಾಗಿದೆ. ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಪ್ರೌಢ ಶಾಲೆಗಳಿಗೆ 55 ಮಂದಿ ಅತಿಥಿ ಶಿಕ್ಷಕರನ್ನು ಕಂಪ್ಯೂಟರ್‌ ಕಲಿಸಲು ನೇಮಿಸಲಾಗಿದೆ ಎಂದರು.

ಕಾಂಪೌಂಡ್‌ ನಿರ್ಮಾಣ: ವಿಶೇಷವಾಗಿ ಅಂಗವಿಕಲರು ಇರುವ ಶಾಲೆಗಳಲ್ಲಿ ಅವರಿಗೆ ಸರಿ ಹೊಂದುವ ರೀತಿಯಲ್ಲಿ ಶೌಚಾಲಯಗಳ ನಿರ್ಮಾಣ ಮಾಡಲಾಗಿದೆ. ನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು ಕಾಂಪೌಂಡ್‌ ನಿರ್ಮಾಣ ಮಾಡಲಾಗಿದೆ ಎಂದರು.

ವಿಶೇಷ ತರಗತಿ: ಜಿಲ್ಲೆಯಲ್ಲಿ ಕಳೆದ ವರ್ಷ ಆರಂಭಿಸಿದ ಬ್ಯಾಗ್‌ ರಹಿತ ಶಾಲೆಯನ್ನು ರಾಜ್ಯ ಸರ್ಕಾರ ಮಾದರಿಯಾಗಿ ಪಡೆದು ಇಡೀ ರಾಜ್ಯಕ್ಕೆ ವಿಸ್ತರಿಸಿದೆ. ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಪ್ರತಿ ಶಾಲೆಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸಿದ್ದು, ವೈಜ್ಞಾನಿಕವಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಗತಿಗಳನ್ನು ನಡೆಸಲಾಗುವುದ ಎಂದರು.

ಜಲಮೂಲಗಳ ಸಂರಕ್ಷಣೆಗೆ ಒತ್ತು: ಕಳೆದ ವರ್ಷದಲ್ಲಿ ಜಿಲ್ಲಾದ್ಯಂತ ಮಳೆ ನೀರು ಸಂರಕ್ಷಣೆ ಹಾಗೂ ಸದ್ಬಳಕೆಗೆ ವಿಶೇಷ ಗಮನ ನೀಡಿ 142 ಕಲ್ಯಾಣಿಗಳ ಪೈಕಿ 141 ಕಲ್ಯಾಣಿಗಳನ್ನು ಸರ್ಕಾರದ ಅನುದಾನ ಬಳಸದೇ ಪುನಶ್ಚೇತನಗೊಳಿಸಲಾಗಿದೆ. ನರೇಗಾ ಯೋಜನೆಯಡಿ 100 ಕ್ಕೂ ಬಹುಪಯೋಗಿ ಚೆಕ್‌ ಡ್ಯಾಂಗಳನ್ನು ನಿರ್ಮಿಸಿದ್ದು, 150 ಚೆಕ್‌ ಡ್ಯಾಂಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಮಳೆ ಕೊಯ್ಲು ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಮುಂದಾಗಿದ್ದು, ಜಿಲ್ಲೆಯಲ್ಲಿರುವ 157 ಗ್ರಾಪಂಗಳಿಗೆ ಮಳೆ ಕೊಯ್ಲು ಅಳವಡಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಲಶಕ್ತಿ, ಜಲಾಧಾರೆ, ಜಲಾಮೃತ ಯೋಜನೆಗಳನ್ನು ಬಳಸಿಕೊಂಡು ಮಳೆ ನೀರು ಹಾಗೂ ಅಂತರ್ಜಲ ವೃದ್ಧಿಗೆ ಬೇಕಾದ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ.

ಜಿಲ್ಲೆಯ ಬಾಗೇಪಲ್ಲಿಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಫ್ಲೋರೋಸಿಸ್‌ ರೋಗ ಪೀಡಿತರ ಪುನಶ್ಚೇತನಕ್ಕೆ ಕೇಂದ್ರ ತೆರೆಯಲಾಗಿದೆ ಎಂದು ತಮ್ಮ ಕಾಲಾವಧಿಯಲ್ಲಿ ನಡೆದಿರುವ ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ ವಿವರ ನೀಡಿದರು.

ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ನಾನು ಆದೇಶ ಮಾಡುವುದಕ್ಕೆ ಅಧಿಕಾರ ಇಲ್ಲ. ನನ್ನ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಚಾಲನೆ ನೀಡಿ ಕೈಗೊಂಡಿರುವ ಯೋಜನೆಗಳ ಪೂರ್ಣ ಅನುಷ್ಠಾನಕ್ಕೆ ಅಧಿಕಾರಿಗಳನ್ನು ವಿಚಾರಿಸಿ ಕೆಲಸ ಮಾಡುವ ಅಧಿಕಾರ ಇದೆ. ನನ್ನ ಅವಧಿಯಲ್ಲಿ ಜಿಪಂ ಅಧ್ಯಕ್ಷರ ಕಚೇರಿಯನ್ನು ಜನ ಸಾಮಾನ್ಯರಿಗೆ, ಸದಸ್ಯರಿಗೆ ಮುಕ್ತವಾಗಿರಿಸಿದ್ದೆ.
-ಹೆಚ್‌.ವಿ.ಮಂಜುನಾಥ, ಜಿಪಂ ಅಧ್ಯಕ್ಷರು

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.