ಕುಡಿವ ನೀರಿಗೆ ಆಗ್ರಹಿಸಿ ರಸ್ತೆ ತಡೆ
ನಗರದ ಸಾಲಿಪೇಟೆ ಮಹಿಳೆಯರಿಂದ ಪ್ರತಿಭಟನೆ
Team Udayavani, May 25, 2019, 2:46 PM IST
ನಗರಸಭೆಯವರು ಕುಡಿವ ನೀರು ಸಮರ್ಪಕರವಾಗಿ ಪೂರೈಸಬೇಕೆಂದು ಆಗ್ರಹಿಸಿ ನಗರದ ವಾರ್ಡ್ ನಂ 22 ರ ಸಾಲಿಪೇಟೆ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಚಿಂತಾಮಣಿ-ಶಿಡ್ಲಘಟ್ಟ ರಸ್ತೆ ತಡೆದು ಪ್ರತಿಭಟಿಸಿದರು.
ಚಿಂತಾಮಣಿ: ತಿಂಗಳು ಕಳೆದರೂ ನಗರಸಭೆಯವರು ಸಮರ್ಪಕವಾಗಿ ಕುಡಿಯುವ ನೀರು ಬಿಡುತ್ತಿಲ್ಲವೆಂದು ಆರೋಪಿಸಿ ಚಿಂತಾಮಣಿ ನಗರದ ವಾರ್ಡ್ ನಂ 22 ರ ಸಾಲಿಪೇಟೆ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗದ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.
ತಿಂಗಳು ಕಳೆದರೂ ಕೂಡ ವಾಟರ್ ಮ್ಯಾನ್ ನಮ್ಮ ವಾರ್ಡ್ಗೆ ಸಮರ್ಪಕ ವಾಗಿ ಕುಡಿಯುವ ನೀರು ಬಿಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ವಾರ್ಡ್ ನಂ 22ರ ಸಾಲಿಪೇಟೆಯ ಮಹಿಳೆಯರು ಬೆಳ್ಳಂ ಬೆಳಗ್ಗೆ ಖಾಲಿ ಬಿಂದಿಗೆಗಳೊಂದಿಗೆ ಅಗಮಿಸಿ ಚಿಂತಾಮಣಿ ಶಿಡ್ಲಘಟ್ಟ ರಸ್ತೆಯ ಆದರ್ಶ ಟಾಕೀಸ್ ಬಳಿ ರಸ್ತೆಗೆ ಅಡ್ಡಲಾಗಿ ಬಿಂದಿಗೆ ಹಾಗೂ ಕಲ್ಲುಗಳನ್ನಿಟು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭೆ ಪೌರಾಯುಕ್ತ ಹರೀಶ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ಒಂದು ಗಂಟೆಗೂ ಹೆಚ್ಚು ಕಾಲ ಕುಡಿಯುವ ನೀರಿಗಾಗಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದರಿಂದ ಟ್ರಾಫಿಕ್ಜಾಮ್ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ