ಗುಂಡಿ ಅಗೆದು ಗಡಿ ಸಂಪರ್ಕ ರಸ್ತೆ ಬಂದ್
ಕೋವಿಡ್-19 ವೈರಸ್ ಭೀತಿ;,ವಾಹನ ಸಂಚಾರ ನಿಷೇಧ
Team Udayavani, Apr 21, 2020, 3:44 PM IST
ಸಾಂದರ್ಭಿಕ ಚಿತ್ರ
ಗುಡಿಬಂಡೆ: ಕೋವಿಡ್-19 ವೈರಸ್ ಭೀತಿ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ – ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮೀಣ ಭಾಗಗಳ ಸಂಪರ್ಕ ರಸ್ತೆಗಳಲ್ಲಿ ಜೆಸಿಬಿಯಿಂದ ಗುಂಡಿ ತೆಗೆಯುವ ಮೂಲಕ ವಾಹನ ಓಡಾಟ ಸಂಪೂರ್ಣ ಬಂದ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಲ್ಲೋಡು ಗ್ರಾಮ ಪಂಚಾಯಿತಿ ಪಿಡಿಒ ಫಣೀಂದ್ರ ಬಿ.ಆರ್. ತಿಳಿಸಿದ್ದಾರೆ.
ತಾಲೂಕಿನ ಆಂಧ್ರ-ಕರ್ನಾಟಕ ಗಡಿ ಭಾಗದ ಹಿಂದೂ ಪೂರದ ಸುತ್ತಮುತ್ತಲಿನ ಎಲ್ಲಾ ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳು ಮತ್ತು ಕೊರೊನಾ ಜಾಗೃತಿ ಸಮಿತಿ ಸಭೆ ನಡೆಸಿ ಆಂಧ್ರದಿಂದ ಯಾರೊಬ್ಬರೂ ಹಾಗೂ ವಾಹನಗಳು ಬರುವಂತಿಲ್ಲ. ಇಲ್ಲಿಂದ ಯಾರೂ ಹೋಗುವಂತಿಲ್ಲ. ಬೇರೆ ಪ್ರದೇಶಗಳಿಂದ ಗ್ರಾಪಂ ವಿವಿಧ ಗ್ರಾಮಗಳಿಗೆ ಬಂದಿರುವ ಸುಮಾರು 25 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಗ್ರಾಮೀಣ ಭಾಗಗಳ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಅಧಿಕಾರಿಗಳು ಮತ್ತು ಸ್ವಯಂ ಸೇವಕರು ಒದಗಿಸುತ್ತಿದ್ದಾರೆ.
ಗ್ರಾಮಗಳಿಂದ ಮತ್ತೂಂದು ಗ್ರಾಮಗಳಿಗೆ ವಿನಾಕಾರಣ ಓಡಾಡುವುದನ್ನು ನಿಲ್ಲಿಸಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಅನವಶ್ಯವಾಗಿ ಮನೆಯಿಂದ ಹೊರಗೆ ಬರಬೇಡಿ ಎಂದು ಸಾರ್ವಜನಿಕರಿಗೆ ಎಲ್ಲೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎನ್.ಮಂಜುನಾಥ ಮನವಿ ಮಾಡಿದ್ದಾರೆ.
ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬೀಟ್ ಪೊಲೀಸರು, ಹೋಂ ಗಾರ್ಡ್ಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರುರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಈ ಕಾರ್ಯದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ