ಇನ್ನು ಬೆರಳ ತುದಿಯಲ್ಲೇ ಆರ್‌ಟಿಒ ಸೇವೆ


Team Udayavani, Jun 1, 2018, 2:13 PM IST

cm-tweet.jpg

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಜಿಲ್ಲೆಯ ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಇಲಾಖೆಯ ಸೇವೆಗಳನ್ನು ಒದಗಿಸಲು ಜೂನ್‌ 1ರಿಂದ ಸಾರಥಿ-4 ಎಂಬ ಹೊಸ ತಂತ್ರಾಂಶದ ಮೂಲಕ ಜನ ಸೇವೆಗೆ ಹೈಟೆಕ್‌ ಸ್ಪರ್ಶ ನೀಡಲು ಸಜ್ಜಾಗಿದೆ.

ಆರ್‌ಟಿಒ ಕಚೇರಿ ಎಂದರೆ ಇಂದಿಗೂ ಮೂಗಿ ಮುರಿಯುವವರೇ ಹೆಚ್ಚು. ಅಲ್ಲಿ ಏನೇ ಸೇವೆ ಪಡೆಯಬೇಕಾದರೂ ಇಲಾಖೆ ಅಧಿಕಾರಿಗಳ ಕೈ ಬೆಚ್ಚಿಗೆ ಮಾಡಬೇಕೆಂಬ ಅಪವಾದ ಇದ್ದೇ ಇದೆ. ಚಾಲನಾ ಪರವಾನಗಿಯಿಂದ ಹಿಡಿದು ದೃಢೀಕೃತ ಪ್ರತಿ, ನಕಲು ಪ್ರತಿ ಮತ್ತಿತರ ಸೇವೆಗಾಗಿ ಸಾವಿರಾರು ಲಂಚ ನೀಡಬೇಕೆಂಬ ಮಾತು ಸಹಜವಾಗಿಯೇ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತದೆ.

ಹೀಗಾಗಿ ಪಾರದರ್ಶಕ ಸೇವೆ ನೀಡುವ ಮೂಲಕ ಜನ ಸ್ನೇಹಿ ಇಲಾಖೆಯನ್ನಾಗಿ ಮಾಡುವ ಉದ್ದೇಶದಿಂದ ಇದೀಗ ಇಲಾಖೆ ಆಯುಕ್ತರ ಆದೇಶದಂತೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆ ತನ್ನ ಸೇವೆಗಳನ್ನು ಜಿಲ್ಲೆಯ ಜನತೆಗೆ ಆನ್‌ಲೈನ್‌ ಮೂಲಕ ನೀಡಲು ಮುಂದಾಗಿದೆ.

ಇಂದಿನಿಂದ ಆನ್‌ಲೈನ್‌ ಸೇವೆ:  ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗೆ ವಿವಿಧ ಸೇವೆಗಳನ್ನು ಕೋರಿ ಸಾರ್ವಜನಿಕರು ಖುದ್ದು ಕಚೇರಿಗೆ ಭೇಟಿ ನೀಡಿ ಸಂಬಂಧಪಟ್ಟ ಶಾಖೆಯಲ್ಲಿ ಅರ್ಜಿ ಸಲ್ಲಿಸಿ ಬರಬೇಕಿತ್ತು. ಇದರಿಂದ ಜಿಲ್ಲಾ ಕೇಂದ್ರದ ಆರ್‌ಟಿಒ ಕಚೇರಿಗೆ ದೂರದ ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕಿನ ಜನತೆಗೆ ದೊಡ್ಡ ಪ್ರಯಾಸವೇ ಆಗುತ್ತಿತ್ತು.

ಆದರೆ, ಇದೀಗ ಬೆರಳ ತುದಿಯಲ್ಲಿಯೇ ಇಲಾಖೆ ಸೇವೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ವ್ಯವಸ್ಥೆ ಜಾರಿಗೆ ತರುತ್ತಿರುವುದು ಸಹಜವಾಗಿಯೇ ಜಿಲ್ಲೆಯ ರೈತಾಪಿ ಜನರಿಗೆ ಅದರಲ್ಲೂ ವಾಹನ ಮಾಲಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಇದರಿಂದ ಸೇವೆ ತ್ವರಿತಗತಿಯಲ್ಲಿ ಸಿಗುವುದರ ಜತೆಗೆ ಸಾರ್ವಜನಿಕರಿಗೆ ಸಮಯ, ಹಣವೂ ಉಳಿತಾಯವಾಗಲಿದೆ.

ಕಡತ ವಿಲೇವಾರಿ ಬಗ್ಗೆ ಸಂದೇಶ: ಅರ್ಜಿದಾರರು ಯಾವುದೇ ಸೇವೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದರೂ ಕಡ್ಡಾಯವಾಗಿ ತಮ್ಮ ಮೊಬೈಲ್‌ ಸಂಖ್ಯೆಗಳನ್ನು ನಮೂದಿಸಬೇಕು. ಇದರಿಂದ ಅರ್ಜಿ ಸ್ವೀಕರಿಸಿದ ದಿನದಿಂದ ಅರ್ಜಿ ವಿಲೇವಾರಿ ಆಗುವವರೆಗೂ ಸಾರ್ವಜನಿಕರಿಗೆ ಇಲಾಖೆಯಿಂದಲೇ ಮಾಹಿತಿ ರವಾನೆಯಾಗಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ ತಿಳಿಸಿದರು.

ಬೆಂಗಳೂರು ಮಹಾನಗರ ಹೊರತಪಡಿಸಿದರೆ ಇಂತಹ ಸೇವೆ ರಾಜ್ಯದಲ್ಲಿಯೇ ಮೊದಲಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನುಷ್ಟಾನಕ್ಕೆ ತರಲಾಗುತ್ತಿದೆ. ಇದರ ಜೊತೆಗೆ ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಸೇವೆ ಜೂನ್‌ 1 ರಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

parivahan.gov.inಗೆ ಭೇಟಿ ಕೊಡಿ: ಸಾರ್ವಜನಿಕರಿಗೆ ಪಾರದರ್ಶಕತೆ ಜೊತೆಗೆ ಕಾಲ ಮಿತಿಯೊಳಗೆ ಶೀಘ್ರ ಸೇವೆ ಒದಗಿಸಲು ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಆನ್‌ಲೈನ್‌ ಮೂಲಕ ಸಾರ್ವಜನಿಕರಿಂದ ವಿವಿಧ ಸೇವೆಗಳಿಗೆ ಅರ್ಜಿ ಸ್ವೀಕರಿಸಲಿದೆ. ಇದಕ್ಕಾಗಿ ಸಾರಥಿ-04 ತಂತ್ರಾಂಶವನ್ನೂ ಅಭಿವೃದ್ಧಿಪಡಿಸಲಾಗಿದೆ. ಜಿಲ್ಲೆಯ ಸಾರ್ವಜನಿಕರು ತಾವು ಇದ್ದ ಕಡೆಯಿಂದಲೇ parivahan.gov.in ಗೆ ಭೇಟಿ ಕೊಟ್ಟು ತಾವು ಬಯಸುವ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಸಂಬಂದಿಸಿದ ಶುಲ್ಕಗಳನ್ನೂ ಆನ್‌ಲೈನ್‌ ಮೂಲಕವೇ ಖಜಾನೆ-2 ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಏನೇನು ಅರ್ಜಿ ಸಲ್ಲಿಸಬಹುದು?: ಜಿಲ್ಲೆಯ ಸಾರ್ವಜನಿಕರು ವಿಶೇಷವಾಗಿ ಡ್ರೈವಿಂಗ್‌ ಲೈನ್ಸ್‌, ಚಾಲನಾ ಕಲಿಕಾ ತರಬೇತಿಗೆ, ಡಿಎಲ್‌ ದೃಢೀಕೃತ ಪ್ರತಿ, ಹೆಸರು ಅಥವಾ ವಿಳಾಸ ಬದಲಾವಣೆಗೆ, ತಿಳಿವಳಿ ಪತ್ರ ಪಡೆಯಲು ಡ್ರೈವಿಂಗ್‌ ಲೈಸನ್ಸ್‌ ನವೀಕರಣಕ್ಕಾಗಿ, ಮೊದಲಿನ ಡ್ರೈವಿಂಗ್‌ ಲೈನ್ಸ್‌ ಕಳೆದುಕೊಂಡಿದ್ದರೆ ನಕಲಿ ಡ್ರೈವಿಂಗ್‌ ಲೈಸನ್ಸ್‌ ಪಡೆಯಲು ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗೆ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವೇಳೆ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಮೊಬೈಲ್‌ ಸಂಖ್ಯೆಯನ್ನು ನಮೂದಿಸಿದರೆ ಅರ್ಜಿ ಸ್ವೀಕೃತದಿಂದ ಹಿಡಿದು ಕಡತ ವಿಲೇವಾರಿ ಹಂತದವರೆಗೂ ಕಾಲಕಾಲಕ್ಕೆ ಅರ್ಜಿದಾರರಿಗೆ ಮಾಹಿತಿ ರವಾನೆ ಆಗಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.